AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡ್ಡು ಪರೀಕ್ಷೆಗೆ ದೇವಸ್ಥಾನದಲ್ಲಿ ಲ್ಯಾಬ್ ತೆರೆಯಬೇಕು: ಟಿಟಿಡಿಗೆ ಶ್ರೀರಾಮ ಸೇನೆ ಮನವಿ

ತಿರುಪತಿಯಲ್ಲಿ ತಯಾರಿಸುವ ಭಕ್ತರ ನೆಚ್ಚಿನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣವಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ದೇಶಾದ್ಯಂತ ಸಾಕಷ್ಟು ಚರ್ಚೆಯಾಗುತ್ತಿದೆ. ಈ ನಡುವೆ ಲಡ್ಡು ಪರೀಕ್ಷೆಗೆ ದೇವಸ್ಥಾನದಲ್ಲಿ ಲ್ಯಾಬ್​ ತೆರೆಯುವಂತೆ ಶ್ರೀರಾಮ ಸೇನೆ ಮನವಿ ಮಾಡಿದೆ.

ಲಡ್ಡು ಪರೀಕ್ಷೆಗೆ ದೇವಸ್ಥಾನದಲ್ಲಿ ಲ್ಯಾಬ್ ತೆರೆಯಬೇಕು: ಟಿಟಿಡಿಗೆ ಶ್ರೀರಾಮ ಸೇನೆ ಮನವಿ
ಟಿಟಿಡಿಗೆ ಶ್ರೀರಾಮ ಸೇನೆ ಪತ್ರ
Poornima Agali Nagaraj
| Edited By: |

Updated on:Sep 21, 2024 | 2:09 PM

Share

ಬೆಂಗಳೂರು, ಸೆಪ್ಟೆಂಬರ್​ 21: ಲಡ್ಡು (Laddu) ಪರೀಕ್ಷೆಗೆ ದೇವಸ್ಥಾನದಲ್ಲಿ ಲ್ಯಾಬ್ ತೆರೆಯುವಂತೆ ಶ್ರೀರಾಮ ಸೇನೆ (Sri Ram Sena) ಬೆಂಗಳೂರಿನ ಟಿಟಿಡಿ (TTD) ಆಡಳಿತ ಮಂಡಳಿಗೆ ಮನವಿ ಪತ್ರ ನೀಡಿದೆ. ದೇವಸ್ಥಾನದ ವ್ಯವಸ್ಥಾಪಕಿ ಜಯಂತಿ ಬಾಸ್ಕರನ್ ಮನವಿ ಪತ್ರ ಸ್ವೀಕರಿಸಿದರು. ಮನವಿ ಪತ್ರ ಸಲ್ಲಿಸಿದ ಬಳಿಕ ಶ್ರೀರಾಮ ಸೇನೆಯ ಬೆಂಗಳೂರು ಅಧ್ಯಕ್ಷ ಭಾಸ್ಕರ್ ಮಾತನಾಡಿ, ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇದೆ ಅಂತ ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಹೇಳಿದರು.

ಗುಜರಾತ್​ನ ಲ್ಯಾಬ್​ನಲ್ಲೂ ಪ್ರಾಣಿಗಳ ಕೊಬ್ಬು ಇರೋದು ಧೃಢವಾಗಿದೆ. ಇದರಿಂದ, ವೆಂಕಟೇಶ್ವರ ಗುಡಿಯಲ್ಲಿ ಭಕ್ತರಿಗೆ ಭಾವನೆ ಧಕ್ಕೆ ಉಂಟಾಗಿದೆ. ಆಂಧ್ರದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಕ್ರೈಸ್ಥ ಧರ್ಮಕ್ಕೆ ಮತಾಂತರವಾಗಿರುವ ವಂಶಸ್ಥರು. ಮೀನಿನ ಎಣ್ಣೆಯನ್ನು ಲಡ್ಡುವಿನಲ್ಲಿ ಮಿಶ್ರಣ ಮಾಡಿದ್ದಾರೆ. ಈ ಬಗ್ಗೆ ದೊಡ್ಡ ತನಿಖೆಯಾಗಬೇಕು ಅಂತ ಬೆಂಗಳೂರು ಟಿಟಿಡಿ ದೇವಸ್ಥಾನದ ವ್ಯವಸ್ಥಾಪಕರಿಗೆ ಮನವಿ ನೀಡಿದ್ದೇವೆ ಎಂದರು.

ಟಿಟಿಡಿ ಶಾಖೆಗಳು ಯಾವುದೇ ರಾಜ್ಯದಲ್ಲಿದ್ದರೂ, ಅಲ್ಲಿ ಪರೀಕ್ಷಾ ಲ್ಯಾಬ್ ತೆರೆಯಬೇಕು. ಭಕ್ತರಿಗೆ ಅನುಮಾನವಿದ್ದರೆ ಕೂಡಲೇ ಪರೀಕ್ಷೆ ಮಾಡುವಂತಾಗಬೇಕು. ಈ ಬಗ್ಗೆಯೂ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

ಬೆಂಗಳೂರಿಗೆ ಪ್ರತಿದಿನ 1 ಸಾವಿರ ಲಡ್ಡು ಬರುತ್ತೆ: ಟಿಟಿಡಿ

ಟಿಟಿಡಿ ದೇವಸ್ಥಾನದ ವ್ಯವಸ್ಥಾಪಕಿ ಜಯಂತಿ ಮಾತನಾಡಿ, ತಿರುಪತಿಯಿಂದ ಲಡ್ಡು ಪ್ರಸಾದ ಈ ದೇವಸ್ಥಾನಕ್ಕೆ ಬರುತ್ತಿದೆ. ಮೊದರಲು ಶನಿವಾರ ಮಾರಾಟ ಮಾಡುತ್ತಿದ್ವಿ. ಈಗ ಪ್ರತಿದಿನ ಮಾರಾಟ ಮಾಡಲಾಗುತ್ತಿದೆ. ತಿರುಪತಿಯಿಂದ ಲಡ್ಡು ಕಳುಹಿಸುತ್ತಾರೆ. ನಾವು ಇಲ್ಲಿ ಮಾರಾಟ ಮಾಡುತ್ತಿದ್ದೇವೆ. ಪ್ರತಿ ಶನಿವಾರ 8 ಸಾವಿರ ಲಡ್ಡು ಕಳುಹಿಸುತ್ತಿದ್ದರು. ಈಗ ಪ್ರತಿದಿನ 1 ಸಾವಿರ ಲಡ್ಡು ಕಳುಹಿಸುತ್ತಾರೆ. ಲಡ್ಡು ವಿಚಾರವಾಗಿ ಇನ್ನೂವರೆಗೂ ಭಕ್ತರಿಂದ ಯಾವುದೇ ದೂರುಗಳು ಬಂದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:03 pm, Sat, 21 September 24

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ