AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶುರುವಾಯಿತು ಆಪರೇಷನ್​ ಒತ್ತುವರಿ ತೆರವು, 600 ಕಟ್ಟಡಗಳಿಗೆ ನೋಟಿಸ್​: ತುಷಾರ್ ಗಿರಿನಾಥ್

ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹಾದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ.

ಬೆಂಗಳೂರಿನಲ್ಲಿ ಶುರುವಾಯಿತು ಆಪರೇಷನ್​ ಒತ್ತುವರಿ ತೆರವು, 600 ಕಟ್ಟಡಗಳಿಗೆ ನೋಟಿಸ್​: ತುಷಾರ್ ಗಿರಿನಾಥ್
ಒತ್ತುವರಿ ತೆರವು ಕಾರ್ಯ ಆರಂಭ, ಆಯುಕ್ತ ತುಷಾರ್ ಗಿರಿನಾಥ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 12, 2022 | 12:41 PM

Share

ಬೆಂಗಳೂರು: ರಾಜಕಾಲುವೆ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ. ಕಂದಾಯ ಇಲಾಖೆಯಿಂದ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿಕೆ ನೀಡಿದರು.  ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಪಟ್ಟಿ ಮಾಡಿದ್ದು, 600 ಒತ್ತುವರಿ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹಾದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ. ಮಳೆ ಕಡಿಯಾಗಿರುವ ಕಾರಣ, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ ಕೆಲವು ಕಡೆ ಒತ್ತುವರಿ ತೆರವು ಮಾಡಲಾಗಿದೆ. ಇಂದಿನಿಂದ ಪ್ರತಿಷ್ಠಿತ ವಿಲ್ಲಾಗಳ ಬಳಿ ಒತ್ತುವರಿ ತೆರವು ಮಾಡಲಾಗುತ್ತದೆ.

ಮಹದೇವಪುರದ ಬಸವನಗರದಲ್ಲಿನ ಗೋಪಾಲನ್ ಕಾಲೇಜ್ ಆಡಳಿತ ಮಂಡಳಿಯಿಂದ ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮೈದಾನ ನಿರ್ಮಾಣ ಮಾಡಲಾಗುತ್ತಿದೆ. ಮಳೆ ಬಂದಾಗೊಮ್ಮೆ ಮೈದಾನ ಬಳಿಯ ಜಾಗದಲ್ಲಿ ಪ್ರವಾಹ ಉಂಟಾಗಿತ್ತು. ಸದ್ಯ ಒತ್ತುವರಿ ಜಾಗದಲ್ಲಿ ಅಧಿಕಾರಿಗಳು ಮಾರ್ಕಿಂಗ್ ಮಾಡುತ್ತಿದ್ದಾರೆ. ಅದೇ ರೀತಿಯಾಗಿ ದೊಡ್ಡಾನೆಗುಂದಿ ರಸ್ತೆಯ ಬಾಗ್ಮನೆ ವರ್ಲ್ಡ್ ಟೆಕ್ನಾಲಜಿ ಸೆಂಟರ್​ನಿಂದ ರಾಜಕಾಲುವೆ ಒತ್ತುವರಿ ಮಾಡಲಾಗುತ್ತಿದೆ. ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಯನ್ನು ಟೆಕ್ ಪಾರ್ಕ್​ನ ಸಿಬ್ಬಂದಿ ತಡೆದು ನಿಲ್ಲಿಸಿದ್ದಾರೆ.

ಒತ್ತುವರಿ ಜಾಗ ತೆರವು: ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ನೋಟಿಸ್

ಮಳೆ ನೀರು ನಿಂತು ರೈನ್ ಬೋ ಡ್ರೈವ್ ಲೇಔಟ್ ದೇಶಾದ್ಯಂತ ಹೆಸರುವಾಸಿಯಾಗಿತ್ತು. ಸದ್ಯ ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ನಗರದ ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ. ಒತ್ತುವರಿ ಜಾಗವನ್ನು ತೆರವು ಮಾಡದಿದ್ರೆ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು, 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್​ ನೋಟಿಸ್​ ಜಾರಿಗೊಳಿಸಿದ್ದಾರೆ. ಮಳೆಯಿಂದ ರೈನ್​ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು.

ರೈನ್​ಬೋ ಡ್ರೈವ್ ಲೇಔಟ್​​ನಲ್ಲಿ ಜಿಲ್ಲಾಡಳಿತ ಸರ್ವೆ ನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನ ನಿರ್ಮಿಸಿರುವುದು ಬಹಿರಂಗವಾಗಿದೆ. ಇದೀಗ ವಿಲ್ಲಾಗಳ‌ನ್ನ ತೆರವುಗೊಳಿಸುವಂತೆ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಮಳೆ ನಿಂತು ಹೋದ ಮೇಲೆ ರೈನ್ ಬೋ ಡ್ರೈವ್​ಗೆ ಆತಂಕ ಶುರುವಾಗಿದ್ದು, ಮಳೆ‌ ಹಿನ್ನೆಲೆ ಸುಮ್ಮನಿದ್ದ ಅಧಿಕಾರಿಗಳು, ಈಗ ತೆರವು ಮಾಡಲೇ ಬೇಕೆಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:39 pm, Mon, 12 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!