AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ನಗರದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ರ್ಯಾಂಪ್​ಗೆ ವಿರೋಧ! ಕಾರಣ ಇಲ್ಲಿದೆ

ಕಳೆದ ವಾರವಷ್ಟೇ ಪ್ರಧಾನ ಮಂತ್ರಿ ನರೇಂದ್ರ ಮೋದಿ 3ನೇ ಹಂತದ ನಮ್ಮ ಮೆಟ್ರೋ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆ ಮಾರ್ಗದಲ್ಲಿ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಲು ಬಿಎಂಆರ್​ಸಿಎಲ್ ಮುಂದಾಗಿದೆ. ಆದರೆ, ಇದಕ್ಕೆ ಸ್ಥಳೀಯ ನಿವಾಸಿಗಳಿಂದ ವಿರೋಧ ವ್ಯಕ್ತವಾಗಿದೆ. ಇದಕ್ಕೆ ಕಾರಣವೇನು? ಸ್ಥಳೀಯರು ಹೇಳುವುದೇನು? ಇಲ್ಲಿದೆ ಮಾಹಿತಿ‌.

ಜೆಪಿ ನಗರದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ರ್ಯಾಂಪ್​ಗೆ ವಿರೋಧ! ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
Kiran Surya
| Updated By: Ganapathi Sharma|

Updated on: Aug 21, 2025 | 7:01 AM

Share

ಬೆಂಗಳೂರು, ಆಗಸ್ಟ್ 21: ಜೆಪಿ ನಗರದಿಂದ ಕೆಂಪಾಪುರ ವರೆಗಿನ ನಮ್ಮ ಮೆಟ್ರೋ ಆರೆಂಜ್ ಲೈನ್​ಗಾಗಿ ಜೆಪಿ ನಗರದ ನಾಲ್ಕನೇ ಹಂತದಲ್ಲಿರುವ ಡೆಲ್ಮಿಯಾ ಜಂಕ್ಷನ್ ಬಳಿ ಡಬಲ್ ಡೆಕ್ಕರ್ ಫ್ಲೈ ಓವರ್‌ ರ್ಯಾಂಪ್ ನಿರ್ಮಾಣ ಮಾಡಲು ಬಿಎಂಆರ್​​ಸಿಎಲ್ (BMRCL) ಮುಂದಾಗಿದೆ. ಆದರೆ, ಡಬಲ್ ಡೆಕ್ಕರ್ ಫ್ಲೈ ಓವರ್‌ ರ್ಯಾಂಪ್ ಅನ್ನು ಜೆಪಿ ನಗರದ ಕಡೆ ಇಳಿಸುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಬಲ್ ಡೆಕ್ಕರ್ ರ್ಯಾಂಪ್ ಜೆಪಿ ನಗರದ ಕಡೆ ಇಳಿಸುವ ಬದಲು ಬನ್ನೇರುಘಟ್ಟದ ಕಡೆ ಇಳಿಸುವುಂತೆ ಒತ್ತಾಯಿಸಿದ್ದಾರೆ.

ಜೆಪಿ ನಗರದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್​ ರ್ಯಾಂಪ್​ಗೆ ಸ್ಥಳೀಯರ ವಿರೋಧ ಏಕೆ?

ಡಬಲ್ ಡೆಕ್ಕರ್ ಫ್ಲೈ ಓವರ್ ರ್ಯಾಂಪ್ ಅನ್ನು ಜೆಪಿ ನಗರದ ಕಡೆ ಇಳಿಸಿದರೆ, ಸ್ಥಳೀಯ ನಿವಾಸಿಗಳಿಗೆ ತುಂಬಾ ಸಮಸ್ಯೆ ಆಗುತ್ತದೆ ಹಾಗೂ ಸಂಚಾರ ದಟ್ಟಣೆ ಉಂಟಾಗುತ್ತದೆ. ಜೆಪಿ ನಗರದೊಳಗೆ ತುಂಬಾ ಕಿರಿದಾದ ರಸ್ತೆಗಳಿವೆ. ಅವುಗಳ ಅಗಲ ಕೇವಲ 30 ಅಡಿಗಳಿವೆ. ಈ ರಸ್ತೆಗಳ ಮೂಲಕ ಪ್ರತಿದಿನ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ರ್ಯಾಂಪ್ ನಿರ್ಮಾಣ ಮಾಡಿದರೆ, ಶಾಲೆಗೆ ಹೋಗುವ ಮಕ್ಕಳಿಗೆ ಮತ್ತು ಹಿರಿಯರಿಗೆ ತುಂಬಾ ಕಷ್ಟ ಆಗಲಿದೆ. ಈ ಪ್ರದೇಶದಲ್ಲಿ ನಾಲ್ಕು ಶಾಲೆಗಳಿವೆ. ಸಾವಿರಾರು ಮಕ್ಕಳು ಈ ರಸ್ತೆ ಮೂಲಕ ಓಡಾಡುತ್ತಾರೆ ಎಂಬುದು ಸ್ಥಳೀಯರ ವಾದವಾಗಿದೆ.

ಬನ್ನೇರುಘಟ್ಟದ ಕಡೆಗೆ ಡಬಲ್ ಡೆಕ್ಕರ್ ಫ್ಲೈಓವರ್​ ರ್ಯಾಂಪ್​ಗೆ ಮನವಿ

ಅಷ್ಟೇ ಅಲ್ಲದೆ, ಈ ಪ್ರದೇಶದಲ್ಲಿ ರ್ಯಾಂಪ್ ಇಳಿಸಿದರೆ ಸಾಕಷ್ಟು ಮರಗಳನ್ನು ಕಡಿಯಬೇಕಾಗುತ್ತದೆ. ಅದರ ಬದಲು ಬನ್ನೇರುಘಟ್ಟದ ಕಡೆ ಇಳಿಸಿದರೆ ಯಾವುದೇ ಮರ ಕಡಿಯುವ ಅವಶ್ಯಕತೆ ಇಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಅಲ್ಲದೆ, ಬನ್ನೇರುಘಟ್ಟದ ಕಡೆಗೆ ಮಾಡುವಂತೆ ಮನವಿ ಮಾಡಿದ್ದಾರೆ.

ಡಬಲ್ ಡೆಕ್ಕರ್ ಫ್ಲೈಓವರ್​ ರ್ಯಾಂಪ್​ಗೆ ವಿರೋಧ: ಬಿಎಂಆರ್​​ಸಿಎಲ್ ಹೇಳುವುದೇನು?

ಡಬಲ್ ಡೆಕ್ಕರ್ ಫ್ಲೈಓವರ್​ಗೆ ಸ್ಥಳೀಯರ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಂಆರ್​ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಎಲ್. ಯಶ್ವಂತ್ ಚೌವ್ಹಾಣ್, ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ. ಆ ಕುರಿತು ಚರ್ಚೆ ಮಾಡಲಾಗುತ್ತದೆ. ರ್ಯಾಂಪ್ ಅನ್ನು ಜೆಪಿ ನಗರದ ಕಡೆ ಇಳಿಸಬೇಕಾ ಅಥವಾ ಬನ್ನೇರುಘಟ್ಟ ರೋಡ್ ಕಡೆ ಇಳಿಸಬೇಕಾ ಎಂದು ತೀರ್ಮಾನ ಮಾಡಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಹೊಸೂರು ರಸ್ತೆ ಟ್ರಾಫಿಕ್​ಗೆ ಬಿಗ್ ರಿಲೀಫ್ ನೀಡಿದ ಮೆಟ್ರೋ ಯೆಲ್ಲೋ ಲೈನ್!

ಒಟ್ಟಿನಲ್ಲಿ ಬಿಎಂಆರ್​ಸಿಎಲ್ ಅಧಿಕಾರಿಗಳು ಟ್ರಾಫಿಕ್ ಕಡಿಮೆ ಆಗಲಿ ಎಂದು ಮೆಟ್ರೋ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಆದರೆ ಅದೇ ಮೆಟ್ರೋ ನಿರ್ಮಾಣದ ಡಬಲ್ ಡೆಕ್ಕರ್ ರ್ಯಾಂಪ್​​ನಿಂದ ಟ್ರಾಫಿಕ್ ಸಮಸ್ಯೆ ಎದುರಾಗುತ್ತದೆ ಎಂದು ಜನ ಹೇಳುತ್ತಿರುವುದು ವಿಶೇಷ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ