AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ನಗರದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ರ್ಯಾಂಪ್​ಗೆ ವಿರೋಧ! ಕಾರಣ ಇಲ್ಲಿದೆ

ಕಳೆದ ವಾರವಷ್ಟೇ ಪ್ರಧಾನ ಮಂತ್ರಿ ನರೇಂದ್ರ ಮೋದಿ 3ನೇ ಹಂತದ ನಮ್ಮ ಮೆಟ್ರೋ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆ ಮಾರ್ಗದಲ್ಲಿ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಲು ಬಿಎಂಆರ್​ಸಿಎಲ್ ಮುಂದಾಗಿದೆ. ಆದರೆ, ಇದಕ್ಕೆ ಸ್ಥಳೀಯ ನಿವಾಸಿಗಳಿಂದ ವಿರೋಧ ವ್ಯಕ್ತವಾಗಿದೆ. ಇದಕ್ಕೆ ಕಾರಣವೇನು? ಸ್ಥಳೀಯರು ಹೇಳುವುದೇನು? ಇಲ್ಲಿದೆ ಮಾಹಿತಿ‌.

ಜೆಪಿ ನಗರದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ರ್ಯಾಂಪ್​ಗೆ ವಿರೋಧ! ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Aug 21, 2025 | 7:01 AM

Share

ಬೆಂಗಳೂರು, ಆಗಸ್ಟ್ 21: ಜೆಪಿ ನಗರದಿಂದ ಕೆಂಪಾಪುರ ವರೆಗಿನ ನಮ್ಮ ಮೆಟ್ರೋ ಆರೆಂಜ್ ಲೈನ್​ಗಾಗಿ ಜೆಪಿ ನಗರದ ನಾಲ್ಕನೇ ಹಂತದಲ್ಲಿರುವ ಡೆಲ್ಮಿಯಾ ಜಂಕ್ಷನ್ ಬಳಿ ಡಬಲ್ ಡೆಕ್ಕರ್ ಫ್ಲೈ ಓವರ್‌ ರ್ಯಾಂಪ್ ನಿರ್ಮಾಣ ಮಾಡಲು ಬಿಎಂಆರ್​​ಸಿಎಲ್ (BMRCL) ಮುಂದಾಗಿದೆ. ಆದರೆ, ಡಬಲ್ ಡೆಕ್ಕರ್ ಫ್ಲೈ ಓವರ್‌ ರ್ಯಾಂಪ್ ಅನ್ನು ಜೆಪಿ ನಗರದ ಕಡೆ ಇಳಿಸುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಬಲ್ ಡೆಕ್ಕರ್ ರ್ಯಾಂಪ್ ಜೆಪಿ ನಗರದ ಕಡೆ ಇಳಿಸುವ ಬದಲು ಬನ್ನೇರುಘಟ್ಟದ ಕಡೆ ಇಳಿಸುವುಂತೆ ಒತ್ತಾಯಿಸಿದ್ದಾರೆ.

ಜೆಪಿ ನಗರದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್​ ರ್ಯಾಂಪ್​ಗೆ ಸ್ಥಳೀಯರ ವಿರೋಧ ಏಕೆ?

ಡಬಲ್ ಡೆಕ್ಕರ್ ಫ್ಲೈ ಓವರ್ ರ್ಯಾಂಪ್ ಅನ್ನು ಜೆಪಿ ನಗರದ ಕಡೆ ಇಳಿಸಿದರೆ, ಸ್ಥಳೀಯ ನಿವಾಸಿಗಳಿಗೆ ತುಂಬಾ ಸಮಸ್ಯೆ ಆಗುತ್ತದೆ ಹಾಗೂ ಸಂಚಾರ ದಟ್ಟಣೆ ಉಂಟಾಗುತ್ತದೆ. ಜೆಪಿ ನಗರದೊಳಗೆ ತುಂಬಾ ಕಿರಿದಾದ ರಸ್ತೆಗಳಿವೆ. ಅವುಗಳ ಅಗಲ ಕೇವಲ 30 ಅಡಿಗಳಿವೆ. ಈ ರಸ್ತೆಗಳ ಮೂಲಕ ಪ್ರತಿದಿನ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ರ್ಯಾಂಪ್ ನಿರ್ಮಾಣ ಮಾಡಿದರೆ, ಶಾಲೆಗೆ ಹೋಗುವ ಮಕ್ಕಳಿಗೆ ಮತ್ತು ಹಿರಿಯರಿಗೆ ತುಂಬಾ ಕಷ್ಟ ಆಗಲಿದೆ. ಈ ಪ್ರದೇಶದಲ್ಲಿ ನಾಲ್ಕು ಶಾಲೆಗಳಿವೆ. ಸಾವಿರಾರು ಮಕ್ಕಳು ಈ ರಸ್ತೆ ಮೂಲಕ ಓಡಾಡುತ್ತಾರೆ ಎಂಬುದು ಸ್ಥಳೀಯರ ವಾದವಾಗಿದೆ.

ಬನ್ನೇರುಘಟ್ಟದ ಕಡೆಗೆ ಡಬಲ್ ಡೆಕ್ಕರ್ ಫ್ಲೈಓವರ್​ ರ್ಯಾಂಪ್​ಗೆ ಮನವಿ

ಅಷ್ಟೇ ಅಲ್ಲದೆ, ಈ ಪ್ರದೇಶದಲ್ಲಿ ರ್ಯಾಂಪ್ ಇಳಿಸಿದರೆ ಸಾಕಷ್ಟು ಮರಗಳನ್ನು ಕಡಿಯಬೇಕಾಗುತ್ತದೆ. ಅದರ ಬದಲು ಬನ್ನೇರುಘಟ್ಟದ ಕಡೆ ಇಳಿಸಿದರೆ ಯಾವುದೇ ಮರ ಕಡಿಯುವ ಅವಶ್ಯಕತೆ ಇಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಅಲ್ಲದೆ, ಬನ್ನೇರುಘಟ್ಟದ ಕಡೆಗೆ ಮಾಡುವಂತೆ ಮನವಿ ಮಾಡಿದ್ದಾರೆ.

ಡಬಲ್ ಡೆಕ್ಕರ್ ಫ್ಲೈಓವರ್​ ರ್ಯಾಂಪ್​ಗೆ ವಿರೋಧ: ಬಿಎಂಆರ್​​ಸಿಎಲ್ ಹೇಳುವುದೇನು?

ಡಬಲ್ ಡೆಕ್ಕರ್ ಫ್ಲೈಓವರ್​ಗೆ ಸ್ಥಳೀಯರ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಂಆರ್​ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಎಲ್. ಯಶ್ವಂತ್ ಚೌವ್ಹಾಣ್, ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ. ಆ ಕುರಿತು ಚರ್ಚೆ ಮಾಡಲಾಗುತ್ತದೆ. ರ್ಯಾಂಪ್ ಅನ್ನು ಜೆಪಿ ನಗರದ ಕಡೆ ಇಳಿಸಬೇಕಾ ಅಥವಾ ಬನ್ನೇರುಘಟ್ಟ ರೋಡ್ ಕಡೆ ಇಳಿಸಬೇಕಾ ಎಂದು ತೀರ್ಮಾನ ಮಾಡಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಹೊಸೂರು ರಸ್ತೆ ಟ್ರಾಫಿಕ್​ಗೆ ಬಿಗ್ ರಿಲೀಫ್ ನೀಡಿದ ಮೆಟ್ರೋ ಯೆಲ್ಲೋ ಲೈನ್!

ಒಟ್ಟಿನಲ್ಲಿ ಬಿಎಂಆರ್​ಸಿಎಲ್ ಅಧಿಕಾರಿಗಳು ಟ್ರಾಫಿಕ್ ಕಡಿಮೆ ಆಗಲಿ ಎಂದು ಮೆಟ್ರೋ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಆದರೆ ಅದೇ ಮೆಟ್ರೋ ನಿರ್ಮಾಣದ ಡಬಲ್ ಡೆಕ್ಕರ್ ರ್ಯಾಂಪ್​​ನಿಂದ ಟ್ರಾಫಿಕ್ ಸಮಸ್ಯೆ ಎದುರಾಗುತ್ತದೆ ಎಂದು ಜನ ಹೇಳುತ್ತಿರುವುದು ವಿಶೇಷ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ