AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವನ್ರೀ ಆ ಕೆಇಬಿ ಎಂಜಿನಿಯರ್? ಫೋನ್ ರಿಸಿವ್ ಮಾಡ್ಲಿ ಉಗೀತೀನಿ‘: ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

15ನೇ ಪೇ ಕಮಿಷನ್‌ನಿಂದ 5495 ಕೋಟಿ ರೂ. ಬರಬೇಕು. ರಾಜ್ಯಕ್ಕೆ ಬರಬೇಕಾದ ಹಣ ಕೇಂದ್ರ ವಿತ್ತ ಸಚಿವೆ ತಡೆದಿದ್ದಾರೆ. ನಾನು ಆಯೋಗದಿಂದಲೇ ಮಾಹಿತಿ ಪಡೆದಿದ್ದು, ಇದರ ಬಗ್ಗೆ ಸಿಎಂ ಯಡಿಯೂರಪ್ಪ ಕೂಡ ಮಾತನಾಡಿಲ್ಲ. ನಿರ್ಮಲಾ ಸೀತಾರಾಮನ್‌ ರಾಜ್ಯಸಭೆ ಸದಸ್ಯೆ ಮಾಡಿದ್ದು ಇದಕ್ಕಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

‘ಯಾವನ್ರೀ ಆ ಕೆಇಬಿ ಎಂಜಿನಿಯರ್? ಫೋನ್ ರಿಸಿವ್ ಮಾಡ್ಲಿ ಉಗೀತೀನಿ‘: ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 03, 2021 | 3:06 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಾಜಾಜಿನಗರದಲ್ಲಿ ಫುಡ್ ಕಿಟ್ ವಿತರಣೆ ಕಾರ್ಯಕ್ರಮವೊಂದರಲ್ಲಿ ಮಾಜಿ ಮುಖ್ಯಮಂತ್ರಿ, ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪದೇ ಪದೇ ವಿದ್ಯುತ್ ಸ್ಥಗಿತವಾಗುತ್ತಿತ್ತು. ಇದರಿಂದ ಅಸಮಾಧಾನಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶಗೊಂಡರು. ‘ಯಾವನ್ರೀ ಆ ಕೆಇಬಿ ಎಂಜಿನಿಯರ್? ಫೋನ್ ರಿಸಿವ್ ಮಾಡ್ಲಿ..’ ಎಂದು ಜೋರಾಗಿಯೇ ಅವರು ಹರಿಹಾಯ್ದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧವೂ ಟೀಕಿಸಿದರು. ಸಚಿವ ಬಿ.ಶ್ರೀರಾಮುಲು ಆಪ್ತ ಸಹಾಯಕರನ್ನು ಇವರು ಹಿಡಿದುಕೊಟ್ಟಿದ್ದಾರಾ? ಇವರೇ ಎಲ್ಲದರಲ್ಲೂ ಶಾಮೀಲಾಗಿ ಹಣ ಹೊಡೆಯುತ್ತಿದ್ದಾರೆ. ಮಂತ್ರಿಗಳ ಪಿಎಗಳು, ಸಿಎಂ ಮಗ, ಎಲ್ಲರೂ ಶಾಮೀಲಾಗಿದ್ದಾರೆ. ಇಂತಹ ಸರ್ಕಾರ ನಿಮಗೆ ಬೇಕೇ? ಎಂದು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಲಸಿಕೆ ವಿಚಾರದಲ್ಲಿ ಈ ಸರ್ಕಾರ ಪದೇಪದೆ ವಿಫಲವಾಗಿದೆ. ಉಚಿತವಾಗಿ ಲಸಿಕೆ ಕೊಡುವುದಾಗಿ ಪ್ರಧಾನಿ ಹೇಳಿದ್ದರು. 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಕೊಡುತ್ತೇವೆ ಅಂದಿದ್ದರು. ಆದರೆ ರಾಜ್ಯದಲ್ಲಿ ಕೊವಿಡ್ ಲಸಿಕೆಯೇ ಸಿಗುತ್ತಿಲ್ಲ. ಲಸಿಕೆ ಸಂಗ್ರಹವಿಲ್ಲ ಎಂದು ಬಿಬಿಎಂಪಿ ಆಯುಕ್ತರೇ ಹೇಳಿದ್ದರು. ಸಚಿವ ಸುಧಾಕರ್ ಮಾತ್ರ ನಮ್ಮಲ್ಲಿ ಸಮಸ್ಯೆ ಇಲ್ಲ ಅಂತಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು. ಆ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

15ನೇ ಪೇ ಕಮಿಷನ್‌ನಿಂದ 5495 ಕೋಟಿ ರೂ. ಬರಬೇಕು. ರಾಜ್ಯಕ್ಕೆ ಬರಬೇಕಾದ ಹಣ ಕೇಂದ್ರ ವಿತ್ತ ಸಚಿವೆ ತಡೆದಿದ್ದಾರೆ. ನಾನು ಆಯೋಗದಿಂದಲೇ ಮಾಹಿತಿ ಪಡೆದಿದ್ದು, ಇದರ ಬಗ್ಗೆ ಸಿಎಂ ಯಡಿಯೂರಪ್ಪ ಕೂಡ ಮಾತನಾಡಿಲ್ಲ. ನಿರ್ಮಲಾ ಸೀತಾರಾಮನ್‌ ರಾಜ್ಯಸಭೆ ಸದಸ್ಯೆ ಮಾಡಿದ್ದು ಇದಕ್ಕಾ? ಎಂದು ಪ್ರಶ್ನಿಸಿದರು.

ರಾಜಾಜಿನಗರದಲ್ಲಿ ಕಾಂಗ್ರೆಸ್‌ನಿಂದ ಫುಡ್ ಕಿಟ್ ವಿತರಣೆ ವೇಳೆ ದೈಹಿಕ ಅಂತರ ಮಾಯವಾಗಿತ್ತು. ದೈಹಿಕ ಅಂತರ ಮರೆತು ಕಿಟ್‌ಗಾಗಿ ಜನರು ಮುಗಿಬಿದ್ದಿದ್ದರು.

ಇದನ್ನೂ ಓದಿ: 

ಇದು ಕೊವಿಡ್​ 19 ಸಾಂಕ್ರಾಮಿಕದ ಅತ್ಯಂತ ಅಪಾಯಕಾರಿ ಹಂತ; ಡೆಲ್ಟಾ ವೈರಾಣು ಬಗ್ಗೆ ಡಬ್ಲ್ಯೂಎಚ್​ಒ ತೀವ್ರ ಆತಂಕ

ಟಿವಿ9 ವಿಶೇಷ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಂದರ್ಶನ: ‘ಎಲ್ಲರೂ ಕಾಂಗ್ರೆಸ್ ಮುಖ್ಯಮಂತ್ರಿಯ ಮಾತಾಡುವಂತೆ ಪಕ್ಷವನ್ನು ಬೆಳೆಸಿದ್ದೇವೆ‘

(Opposition Leader Siddaramaiah questions Who is that KEB engineer in food kit distribution programme)

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ