Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮದು ಭಾರತ ಮಾತಾಕೀ ಜೈ, ಅವರದು ಸೋನಿಯಾ ಮಾತಾಕೀ ಜೈ: ಕಾಂಗ್ರೆಸ್​ ವಿರುದ್ಧ ಸಿಎಂ ಬೊಮ್ಮಾಯಿ ವ್ಯಂಗ್ಯ

ಬಿಜೆಪಿ ದೇಶ ಭಕ್ತರ ಪಕ್ಷ. ಇಡೀ ಜಗತ್ತಿನಲ್ಲೇ ಭಾರತೀಯ ಜನತಾ ಪಾರ್ಟಿ ದೊಡ್ಡ ಪಕ್ಷವಾಗಿದ್ದು, ಚೀನಾದ ಕಮ್ಯುನಿಸ್ಟ್ ಪಾರ್ಟಿಗಿಂತ ಹೆಚ್ಚು ಸದಸ್ಯರನ್ನು ಹೊಂದಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ನಮ್ಮದು ಭಾರತ ಮಾತಾಕೀ ಜೈ, ಅವರದು ಸೋನಿಯಾ ಮಾತಾಕೀ ಜೈ: ಕಾಂಗ್ರೆಸ್​ ವಿರುದ್ಧ ಸಿಎಂ ಬೊಮ್ಮಾಯಿ ವ್ಯಂಗ್ಯ
ಸಿಎಂ ಬೊಮ್ಮಾಯಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 31, 2022 | 4:28 PM

ಬೆಂಗಳೂರು: ಕಾಂಗ್ರೆಸ್ (Congress) ಸದಸ್ಯರು ಕೇವಲ ಅಧಿಕಾರಕ್ಕಾಗಿ ಇರುವ ಪಕ್ಷದ ಸದಸ್ಯರು. ನಮ್ಮದು ಭಾರತ ಮಾತಾಕೀ ಜೈ, ಆದರೆ ಅವರದ್ದು ಸೋನಿಯಾ ಮಾತಾಕೀ ಜೈ ಎನ್ನುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ (BJP) ಬೂತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿ, ಮನಮೋಹನ್ ಸಿಂಗ್ ಇದ್ದಾಗ ದೇಶ ಹಿಂದೆ ಹೋಗುತ್ತಿತ್ತು. 5 ವರ್ಷದ ಕಾಂಗ್ರೆಸ್, ಒಂದೂವರೆ ವರ್ಷದ ಸಮ್ಮಿಶ್ರ ಸರ್ಕಾರದ ದೌರ್ಭಾಗ್ಯವನ್ನು ಅನುಭವಿಸಿದ್ದೀರಿ. ಹತಾಶರಾಗಿ ಈಗ ನಮ್ಮ ಮೇಲೆ ಆರೋಪ ಮಾಡುತ್ತಾರೆ. ಲೋಕಾಯುಕ್ತ ಮುಚ್ಚಿದವರು ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತಾರೆ. ಇವರ ಅವಧಿಯಲ್ಲಿ ಎಸಿಬಿಯಲ್ಲಿ ಬಿ ರಿಪೋರ್ಟ್ ಆಗಿದ್ದ ಎಲ್ಲಾ ಪ್ರಕರಣಗಳು ಲೋಕಾಯುಕ್ತಕ್ಕೆ ಶಿಫಾರಸು ಆಗಿವೆ. ಇವರ ಎಲ್ಲಾ ಹಗರಣಗಳು ಹೊರ ಬರುತ್ತವೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದರು.

ಬಿಜೆಪಿ ದೇಶ ಭಕ್ತರ ಪಕ್ಷ

ಇಡೀ ಜಗತ್ತಿನಲ್ಲೇ ಭಾರತೀಯ ಜನತಾ ಪಾರ್ಟಿ ದೊಡ್ಡ ಪಕ್ಷ. ಚೀನಾದ ಕಮ್ಯುನಿಸ್ಟ್ ಪಾರ್ಟಿಗಿಂತ ಹೆಚ್ಚು ಸದಸ್ಯರನ್ನು ಹೊಂದಿದೆ. ಸಂಖ್ಯೆಯಲ್ಲಿ ಮಾತ್ರವಲ್ಲ ವಿಚಾರಗಳಲ್ಲೂ ವಿಶಾಲತೆ ಹೊಂದಿದ್ದೇವೆ. ಒಂದು ಪಕ್ಷ ಯಶಸ್ವಿಯಾಗಲು ಮೂರು ವಿಚಾರಗಳು ಬಹಳ ಅಗತ್ಯ. ನೀತಿ, ಸಿದ್ಧಾಂತ ಮತ್ತು ಒಳ್ಳೆಯ ನಾಯಕತ್ವ ಬಹಳ ಅಗತ್ಯವಾದದ್ದು. ಜೊತೆಗೆ ಕ್ರಿಯಾಶೀಲ ಸದಸ್ಯರು ಕೂಡ ಪಕ್ಷದ ಯಶಸ್ಸಿಗೆ ಕಾರಣ. ಬಿಜೆಪಿಯನ್ನು ಯಾಕೆ ಸೇರಿದ್ದೇವೆ ಎಂದು ಅರ್ಥ ಮಾಡಿಕೊಂಡಾಗ ಮಾತ್ರ ನಾವು ಕೆಲಸ ಮಾಡಲು ಸಾಧ್ಯ. ಬಿಜೆಪಿ ದೇಶ ಭಕ್ತರ ಪಕ್ಷ. ಇದನ್ನು ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಹೇಳಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿನಿಮಾಗಳಲ್ಲಿ ಅನವಶ್ಯಕವಾಗಿ ಕೇಸರಿ ಬಟ್ಟೆ ಬಳಕೆ ಯಾಕೆ? ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್ ಎಂದ ಬಿ ಎಲ್​ ಸಂತೋಷ್

ಪ್ಯಾಂಟ್, ಶರ್ಟ್ ಹೊಲಿಸಿಕೊಂಡವರಿಗೆ ಈಗ ಭಯ ಶುರುವಾಗಿದೆ: ನಳಿನ್ ಕುಮಾರ್

ಬೂತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಮಾತನಾಡಿ, ಕಾಂಗ್ರೆಸ್​​ನಲ್ಲಿ ಸಿಎಂ ಅಭ್ಯರ್ಥಿ ಅಂತಾ ಪ್ಯಾಂಟ್, ಶರ್ಟ್ ಹೊಲಿಸಿದ್ದಾರೆ. ಈಗ ಭಯ ಶುರುವಾಗಿದೆ. ಒಂದು ಮತಗಟ್ಟೆಯ 25 ಮನೆಯಲ್ಲಿ ಬಿಜೆಪಿಯ ಧ್ವಜ ಹಾರಿಸಬೇಕು. ಜನವರಿ 21ರಿಂದ 29ರವರೆಗೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪಿಸಲು ಅಭಿಯಾನ ನಡೆಯಲಿದೆ. ಮನೆಗಳಿಗೆ ಸ್ಟಿಕ್ಕರ್ ಅಂಟಿಸಬೇಕು, ಪ್ರತಿ ವಾರ್ಡ್​ನಲ್ಲಿ 5ಗೋಡೆ ಬರಹ ಇರಬೇಕು ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕ್ಷೀರ ಕ್ರಾಂತಿ ಆಗುತ್ತಿದೆ; ಮಂಡ್ಯ ಗೆಜ್ಜಲಗೆರೆಯಲ್ಲಿ ಬಸವರಾಜ ಬೊಮ್ಮಾಯಿ

ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ನಿರ್ಮೂಲನೆ: ಪ್ರಹ್ಲಾದ್ ಜೋಶಿ 

ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದು, ಅನೇಕ ಬಾರಿ ನಮ್ಮ ಬೂತ್​​ನಲ್ಲೇ ನಮಗೆ ಕಡಿಮೆ ಮತ ಬಂದಿರುತ್ತದೆ. ನಾವು ಅಧಿಕಾರಕ್ಕೆ ಬರುವ ಮುನ್ನ ಹಗರಣಗಳದ್ದೇ ಸುದ್ದಿಯಾಗುತ್ತಿತ್ತು. ಕುಟುಂಬ ರಾಜಕಾರಣದಿಂದಲೇ ಭ್ರಷ್ಟಾಚಾರ ನಡೆಯುತ್ತಿತ್ತು. ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ನಿರ್ಮೂಲನೆಗೊಳಿಸುವ ಕೆಲಸ ಕರ್ನಾಟಕದಲ್ಲಿ ಕೂಡಾ ಜಾರಿಗೆ ಬರಲಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ