AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!

ನಮ್ಮ ಮೆಟ್ರೋದಲ್ಲಿ ಒಳಾಂಗಣ ಜಾಹೀರಾತುಗಳಿಂದ ಕನಿಷ್ಠ 30-35 ಕೋಟಿ ಗಳಿಸುವ ನಿರೀಕ್ಷೆಯಿದೆ ಎನ್ನುತ್ತಾರೆ BMRCL ಮುಖ್ಯಸ್ಥರು.

Namma Metro:  ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
ಬಿಎಂಆರ್​​ಸಿಎಲ್​ - 50 ಮೆಟ್ರೋ ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
ಸಾಧು ಶ್ರೀನಾಥ್​
|

Updated on:Jun 27, 2023 | 2:51 PM

Share

ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ (BBMP) ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ಆದಾಯ ತರುತ್ತಿದ್ದ ಆದರೆ ಭ್ರಷ್ಟಾಚಾರ ಮತ್ತು ಅಕ್ರಮಗಳಿಗೆ ಅವಕಾಶ ಕಲ್ಪಿಸುತ್ತಿದ್ದ ಹೊರಾಂಗಣ ಜಾಹೀರಾತಿಗೆ ಹೈಕೋರ್ಟ್​​ ತಪರಾಕಿ ಕೊಟ್ಟು ಸ್ಥಗಿತಗೊಳಿಸಿದೆ. ನಗರದಲ್ಲಿ ರಸ್ತೆ ಬದಿಗಳಲ್ಲಿ ಜಾಹೀರಾತುಗಳು ಈಗ ಕಾಣೆಯಾಗಿವೆ. ಆದರೆ ಈ ಮಧ್ಯೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ (Advertisement) ಟೆಂಡರ್ ಕರೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಟೆಂಡರ್ ಡಾಕ್ಯುಮೆಂಟ್ ಪ್ರಕಾರ ಜಾಹೀರಾತುಗಳನ್ನು ಪ್ರದರ್ಶಿಸಲು ಸುಮಾರು 70,000 ಚದರ ಅಡಿ ಸ್ಥಳಾವಕಾಶವಿದೆ. ಮತ್ತು ಅದರಲ್ಲಿ ಸುಮಾರು 5 % ಡಿಜಿಟಲ್ ಜಾಹೀರಾತು ಪ್ರಚಾರಕ್ಕಾಗಿ ಕಾಯ್ದಿರಿಸಲಾಗಿದೆ. BMRCL ಅಧಿಕಾರಿಗಳ ಪ್ರಕಾರ, ಮೆಟ್ರೋ ನಿಲ್ದಾಣಗಳ (Namma Metro) ಮೂಲಕ ತನ್ನ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಜಾಹೀರಾತುದಾರರ ಬೇಡಿಕೆಗೆ ಅನುಗುಣವಾಗಿ ಜಾಹಿರಾತು ಸ್ಥಳ ನೀಡಲು ಟೆಂಡರ್ ಕರೆಯಲಾಗಿದೆ.

ಒಳಾಂಗಣ ಜಾಹೀರಾತು ಸ್ಥಳಗಳೆಂದರೆ ಮೆಟ್ಟಿಲುಗಳು, ಲಿಫ್ಟ್‌ಗಳು, ಎಸ್ಕಲೇಟರ್‌ಗಳು ಮತ್ತು ಫ್ರಿಸ್ಕಿಂಗ್ ಪ್ಯಾನೆಲ್‌ಗಳನ್ನು ಒಳಗೊಂಡಿರುತ್ತದೆ. ಜಾಹೀರಾತು ಬಿಡ್​​ದಾರರು BMRCL ನಿಂದ ಅನುಮೋದನೆಯನ್ನು ಪಡೆದರೆ, ಅವರು ಹೆಚ್ಚುವರಿ ಜಾಹೀರಾತು ಸ್ಥಳವನ್ನು ರಚಿಸಿಕೊಳ್ಳಲು, ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳನ್ನು ಸಹ ಬಳಸಿಕೊಳ್ಳಬಹುದು. ಮೆಟ್ರೋ ಕಾರ್ಪ್ ಇಂಡೋರ್ ಜಾಹೀರಾತಿನ ಮೂಲಕ ಅಂದಾಜು 30-35 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ ಎಂದು ಅಂಜುಮ್ ಪರ್ವೇಜ್, ಮ್ಯಾನೇಜಿಂಗ್ ಡೈರೆಕ್ಟರ್, BMRCL ತಿಳಿಸಿದ್ದಾರೆ.

Published On - 2:47 pm, Tue, 27 June 23

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು