Namma Metro: ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!

ನಮ್ಮ ಮೆಟ್ರೋದಲ್ಲಿ ಒಳಾಂಗಣ ಜಾಹೀರಾತುಗಳಿಂದ ಕನಿಷ್ಠ 30-35 ಕೋಟಿ ಗಳಿಸುವ ನಿರೀಕ್ಷೆಯಿದೆ ಎನ್ನುತ್ತಾರೆ BMRCL ಮುಖ್ಯಸ್ಥರು.

Namma Metro:  ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
ಬಿಎಂಆರ್​​ಸಿಎಲ್​ - 50 ಮೆಟ್ರೋ ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
Follow us
|

Updated on:Jun 27, 2023 | 2:51 PM

ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ (BBMP) ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ಆದಾಯ ತರುತ್ತಿದ್ದ ಆದರೆ ಭ್ರಷ್ಟಾಚಾರ ಮತ್ತು ಅಕ್ರಮಗಳಿಗೆ ಅವಕಾಶ ಕಲ್ಪಿಸುತ್ತಿದ್ದ ಹೊರಾಂಗಣ ಜಾಹೀರಾತಿಗೆ ಹೈಕೋರ್ಟ್​​ ತಪರಾಕಿ ಕೊಟ್ಟು ಸ್ಥಗಿತಗೊಳಿಸಿದೆ. ನಗರದಲ್ಲಿ ರಸ್ತೆ ಬದಿಗಳಲ್ಲಿ ಜಾಹೀರಾತುಗಳು ಈಗ ಕಾಣೆಯಾಗಿವೆ. ಆದರೆ ಈ ಮಧ್ಯೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ (Advertisement) ಟೆಂಡರ್ ಕರೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಟೆಂಡರ್ ಡಾಕ್ಯುಮೆಂಟ್ ಪ್ರಕಾರ ಜಾಹೀರಾತುಗಳನ್ನು ಪ್ರದರ್ಶಿಸಲು ಸುಮಾರು 70,000 ಚದರ ಅಡಿ ಸ್ಥಳಾವಕಾಶವಿದೆ. ಮತ್ತು ಅದರಲ್ಲಿ ಸುಮಾರು 5 % ಡಿಜಿಟಲ್ ಜಾಹೀರಾತು ಪ್ರಚಾರಕ್ಕಾಗಿ ಕಾಯ್ದಿರಿಸಲಾಗಿದೆ. BMRCL ಅಧಿಕಾರಿಗಳ ಪ್ರಕಾರ, ಮೆಟ್ರೋ ನಿಲ್ದಾಣಗಳ (Namma Metro) ಮೂಲಕ ತನ್ನ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಜಾಹೀರಾತುದಾರರ ಬೇಡಿಕೆಗೆ ಅನುಗುಣವಾಗಿ ಜಾಹಿರಾತು ಸ್ಥಳ ನೀಡಲು ಟೆಂಡರ್ ಕರೆಯಲಾಗಿದೆ.

ಒಳಾಂಗಣ ಜಾಹೀರಾತು ಸ್ಥಳಗಳೆಂದರೆ ಮೆಟ್ಟಿಲುಗಳು, ಲಿಫ್ಟ್‌ಗಳು, ಎಸ್ಕಲೇಟರ್‌ಗಳು ಮತ್ತು ಫ್ರಿಸ್ಕಿಂಗ್ ಪ್ಯಾನೆಲ್‌ಗಳನ್ನು ಒಳಗೊಂಡಿರುತ್ತದೆ. ಜಾಹೀರಾತು ಬಿಡ್​​ದಾರರು BMRCL ನಿಂದ ಅನುಮೋದನೆಯನ್ನು ಪಡೆದರೆ, ಅವರು ಹೆಚ್ಚುವರಿ ಜಾಹೀರಾತು ಸ್ಥಳವನ್ನು ರಚಿಸಿಕೊಳ್ಳಲು, ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳನ್ನು ಸಹ ಬಳಸಿಕೊಳ್ಳಬಹುದು. ಮೆಟ್ರೋ ಕಾರ್ಪ್ ಇಂಡೋರ್ ಜಾಹೀರಾತಿನ ಮೂಲಕ ಅಂದಾಜು 30-35 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ ಎಂದು ಅಂಜುಮ್ ಪರ್ವೇಜ್, ಮ್ಯಾನೇಜಿಂಗ್ ಡೈರೆಕ್ಟರ್, BMRCL ತಿಳಿಸಿದ್ದಾರೆ.

Published On - 2:47 pm, Tue, 27 June 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್