AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!

ನಮ್ಮ ಮೆಟ್ರೋದಲ್ಲಿ ಒಳಾಂಗಣ ಜಾಹೀರಾತುಗಳಿಂದ ಕನಿಷ್ಠ 30-35 ಕೋಟಿ ಗಳಿಸುವ ನಿರೀಕ್ಷೆಯಿದೆ ಎನ್ನುತ್ತಾರೆ BMRCL ಮುಖ್ಯಸ್ಥರು.

Namma Metro:  ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
ಬಿಎಂಆರ್​​ಸಿಎಲ್​ - 50 ಮೆಟ್ರೋ ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
ಸಾಧು ಶ್ರೀನಾಥ್​
|

Updated on:Jun 27, 2023 | 2:51 PM

Share

ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ (BBMP) ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ಆದಾಯ ತರುತ್ತಿದ್ದ ಆದರೆ ಭ್ರಷ್ಟಾಚಾರ ಮತ್ತು ಅಕ್ರಮಗಳಿಗೆ ಅವಕಾಶ ಕಲ್ಪಿಸುತ್ತಿದ್ದ ಹೊರಾಂಗಣ ಜಾಹೀರಾತಿಗೆ ಹೈಕೋರ್ಟ್​​ ತಪರಾಕಿ ಕೊಟ್ಟು ಸ್ಥಗಿತಗೊಳಿಸಿದೆ. ನಗರದಲ್ಲಿ ರಸ್ತೆ ಬದಿಗಳಲ್ಲಿ ಜಾಹೀರಾತುಗಳು ಈಗ ಕಾಣೆಯಾಗಿವೆ. ಆದರೆ ಈ ಮಧ್ಯೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ (Advertisement) ಟೆಂಡರ್ ಕರೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಟೆಂಡರ್ ಡಾಕ್ಯುಮೆಂಟ್ ಪ್ರಕಾರ ಜಾಹೀರಾತುಗಳನ್ನು ಪ್ರದರ್ಶಿಸಲು ಸುಮಾರು 70,000 ಚದರ ಅಡಿ ಸ್ಥಳಾವಕಾಶವಿದೆ. ಮತ್ತು ಅದರಲ್ಲಿ ಸುಮಾರು 5 % ಡಿಜಿಟಲ್ ಜಾಹೀರಾತು ಪ್ರಚಾರಕ್ಕಾಗಿ ಕಾಯ್ದಿರಿಸಲಾಗಿದೆ. BMRCL ಅಧಿಕಾರಿಗಳ ಪ್ರಕಾರ, ಮೆಟ್ರೋ ನಿಲ್ದಾಣಗಳ (Namma Metro) ಮೂಲಕ ತನ್ನ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಜಾಹೀರಾತುದಾರರ ಬೇಡಿಕೆಗೆ ಅನುಗುಣವಾಗಿ ಜಾಹಿರಾತು ಸ್ಥಳ ನೀಡಲು ಟೆಂಡರ್ ಕರೆಯಲಾಗಿದೆ.

ಒಳಾಂಗಣ ಜಾಹೀರಾತು ಸ್ಥಳಗಳೆಂದರೆ ಮೆಟ್ಟಿಲುಗಳು, ಲಿಫ್ಟ್‌ಗಳು, ಎಸ್ಕಲೇಟರ್‌ಗಳು ಮತ್ತು ಫ್ರಿಸ್ಕಿಂಗ್ ಪ್ಯಾನೆಲ್‌ಗಳನ್ನು ಒಳಗೊಂಡಿರುತ್ತದೆ. ಜಾಹೀರಾತು ಬಿಡ್​​ದಾರರು BMRCL ನಿಂದ ಅನುಮೋದನೆಯನ್ನು ಪಡೆದರೆ, ಅವರು ಹೆಚ್ಚುವರಿ ಜಾಹೀರಾತು ಸ್ಥಳವನ್ನು ರಚಿಸಿಕೊಳ್ಳಲು, ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳನ್ನು ಸಹ ಬಳಸಿಕೊಳ್ಳಬಹುದು. ಮೆಟ್ರೋ ಕಾರ್ಪ್ ಇಂಡೋರ್ ಜಾಹೀರಾತಿನ ಮೂಲಕ ಅಂದಾಜು 30-35 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ ಎಂದು ಅಂಜುಮ್ ಪರ್ವೇಜ್, ಮ್ಯಾನೇಜಿಂಗ್ ಡೈರೆಕ್ಟರ್, BMRCL ತಿಳಿಸಿದ್ದಾರೆ.

Published On - 2:47 pm, Tue, 27 June 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ