AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!

ನಮ್ಮ ಮೆಟ್ರೋದಲ್ಲಿ ಒಳಾಂಗಣ ಜಾಹೀರಾತುಗಳಿಂದ ಕನಿಷ್ಠ 30-35 ಕೋಟಿ ಗಳಿಸುವ ನಿರೀಕ್ಷೆಯಿದೆ ಎನ್ನುತ್ತಾರೆ BMRCL ಮುಖ್ಯಸ್ಥರು.

Namma Metro:  ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
ಬಿಎಂಆರ್​​ಸಿಎಲ್​ - 50 ಮೆಟ್ರೋ ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
Follow us
ಸಾಧು ಶ್ರೀನಾಥ್​
|

Updated on:Jun 27, 2023 | 2:51 PM

ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ (BBMP) ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ಆದಾಯ ತರುತ್ತಿದ್ದ ಆದರೆ ಭ್ರಷ್ಟಾಚಾರ ಮತ್ತು ಅಕ್ರಮಗಳಿಗೆ ಅವಕಾಶ ಕಲ್ಪಿಸುತ್ತಿದ್ದ ಹೊರಾಂಗಣ ಜಾಹೀರಾತಿಗೆ ಹೈಕೋರ್ಟ್​​ ತಪರಾಕಿ ಕೊಟ್ಟು ಸ್ಥಗಿತಗೊಳಿಸಿದೆ. ನಗರದಲ್ಲಿ ರಸ್ತೆ ಬದಿಗಳಲ್ಲಿ ಜಾಹೀರಾತುಗಳು ಈಗ ಕಾಣೆಯಾಗಿವೆ. ಆದರೆ ಈ ಮಧ್ಯೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ (Advertisement) ಟೆಂಡರ್ ಕರೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಟೆಂಡರ್ ಡಾಕ್ಯುಮೆಂಟ್ ಪ್ರಕಾರ ಜಾಹೀರಾತುಗಳನ್ನು ಪ್ರದರ್ಶಿಸಲು ಸುಮಾರು 70,000 ಚದರ ಅಡಿ ಸ್ಥಳಾವಕಾಶವಿದೆ. ಮತ್ತು ಅದರಲ್ಲಿ ಸುಮಾರು 5 % ಡಿಜಿಟಲ್ ಜಾಹೀರಾತು ಪ್ರಚಾರಕ್ಕಾಗಿ ಕಾಯ್ದಿರಿಸಲಾಗಿದೆ. BMRCL ಅಧಿಕಾರಿಗಳ ಪ್ರಕಾರ, ಮೆಟ್ರೋ ನಿಲ್ದಾಣಗಳ (Namma Metro) ಮೂಲಕ ತನ್ನ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಜಾಹೀರಾತುದಾರರ ಬೇಡಿಕೆಗೆ ಅನುಗುಣವಾಗಿ ಜಾಹಿರಾತು ಸ್ಥಳ ನೀಡಲು ಟೆಂಡರ್ ಕರೆಯಲಾಗಿದೆ.

ಒಳಾಂಗಣ ಜಾಹೀರಾತು ಸ್ಥಳಗಳೆಂದರೆ ಮೆಟ್ಟಿಲುಗಳು, ಲಿಫ್ಟ್‌ಗಳು, ಎಸ್ಕಲೇಟರ್‌ಗಳು ಮತ್ತು ಫ್ರಿಸ್ಕಿಂಗ್ ಪ್ಯಾನೆಲ್‌ಗಳನ್ನು ಒಳಗೊಂಡಿರುತ್ತದೆ. ಜಾಹೀರಾತು ಬಿಡ್​​ದಾರರು BMRCL ನಿಂದ ಅನುಮೋದನೆಯನ್ನು ಪಡೆದರೆ, ಅವರು ಹೆಚ್ಚುವರಿ ಜಾಹೀರಾತು ಸ್ಥಳವನ್ನು ರಚಿಸಿಕೊಳ್ಳಲು, ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳನ್ನು ಸಹ ಬಳಸಿಕೊಳ್ಳಬಹುದು. ಮೆಟ್ರೋ ಕಾರ್ಪ್ ಇಂಡೋರ್ ಜಾಹೀರಾತಿನ ಮೂಲಕ ಅಂದಾಜು 30-35 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ ಎಂದು ಅಂಜುಮ್ ಪರ್ವೇಜ್, ಮ್ಯಾನೇಜಿಂಗ್ ಡೈರೆಕ್ಟರ್, BMRCL ತಿಳಿಸಿದ್ದಾರೆ.

Published On - 2:47 pm, Tue, 27 June 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ