AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!

ನಮ್ಮ ಮೆಟ್ರೋದಲ್ಲಿ ಒಳಾಂಗಣ ಜಾಹೀರಾತುಗಳಿಂದ ಕನಿಷ್ಠ 30-35 ಕೋಟಿ ಗಳಿಸುವ ನಿರೀಕ್ಷೆಯಿದೆ ಎನ್ನುತ್ತಾರೆ BMRCL ಮುಖ್ಯಸ್ಥರು.

Namma Metro:  ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
ಬಿಎಂಆರ್​​ಸಿಎಲ್​ - 50 ಮೆಟ್ರೋ ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!
Follow us
ಸಾಧು ಶ್ರೀನಾಥ್​
|

Updated on:Jun 27, 2023 | 2:51 PM

ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ (BBMP) ಸಂಸ್ಥೆಗೆ ನೂರಾರು ಕೋಟಿ ರೂಪಾಯಿ ಆದಾಯ ತರುತ್ತಿದ್ದ ಆದರೆ ಭ್ರಷ್ಟಾಚಾರ ಮತ್ತು ಅಕ್ರಮಗಳಿಗೆ ಅವಕಾಶ ಕಲ್ಪಿಸುತ್ತಿದ್ದ ಹೊರಾಂಗಣ ಜಾಹೀರಾತಿಗೆ ಹೈಕೋರ್ಟ್​​ ತಪರಾಕಿ ಕೊಟ್ಟು ಸ್ಥಗಿತಗೊಳಿಸಿದೆ. ನಗರದಲ್ಲಿ ರಸ್ತೆ ಬದಿಗಳಲ್ಲಿ ಜಾಹೀರಾತುಗಳು ಈಗ ಕಾಣೆಯಾಗಿವೆ. ಆದರೆ ಈ ಮಧ್ಯೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ (Advertisement) ಟೆಂಡರ್ ಕರೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಟೆಂಡರ್ ಡಾಕ್ಯುಮೆಂಟ್ ಪ್ರಕಾರ ಜಾಹೀರಾತುಗಳನ್ನು ಪ್ರದರ್ಶಿಸಲು ಸುಮಾರು 70,000 ಚದರ ಅಡಿ ಸ್ಥಳಾವಕಾಶವಿದೆ. ಮತ್ತು ಅದರಲ್ಲಿ ಸುಮಾರು 5 % ಡಿಜಿಟಲ್ ಜಾಹೀರಾತು ಪ್ರಚಾರಕ್ಕಾಗಿ ಕಾಯ್ದಿರಿಸಲಾಗಿದೆ. BMRCL ಅಧಿಕಾರಿಗಳ ಪ್ರಕಾರ, ಮೆಟ್ರೋ ನಿಲ್ದಾಣಗಳ (Namma Metro) ಮೂಲಕ ತನ್ನ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಜಾಹೀರಾತುದಾರರ ಬೇಡಿಕೆಗೆ ಅನುಗುಣವಾಗಿ ಜಾಹಿರಾತು ಸ್ಥಳ ನೀಡಲು ಟೆಂಡರ್ ಕರೆಯಲಾಗಿದೆ.

ಒಳಾಂಗಣ ಜಾಹೀರಾತು ಸ್ಥಳಗಳೆಂದರೆ ಮೆಟ್ಟಿಲುಗಳು, ಲಿಫ್ಟ್‌ಗಳು, ಎಸ್ಕಲೇಟರ್‌ಗಳು ಮತ್ತು ಫ್ರಿಸ್ಕಿಂಗ್ ಪ್ಯಾನೆಲ್‌ಗಳನ್ನು ಒಳಗೊಂಡಿರುತ್ತದೆ. ಜಾಹೀರಾತು ಬಿಡ್​​ದಾರರು BMRCL ನಿಂದ ಅನುಮೋದನೆಯನ್ನು ಪಡೆದರೆ, ಅವರು ಹೆಚ್ಚುವರಿ ಜಾಹೀರಾತು ಸ್ಥಳವನ್ನು ರಚಿಸಿಕೊಳ್ಳಲು, ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳನ್ನು ಸಹ ಬಳಸಿಕೊಳ್ಳಬಹುದು. ಮೆಟ್ರೋ ಕಾರ್ಪ್ ಇಂಡೋರ್ ಜಾಹೀರಾತಿನ ಮೂಲಕ ಅಂದಾಜು 30-35 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ ಎಂದು ಅಂಜುಮ್ ಪರ್ವೇಜ್, ಮ್ಯಾನೇಜಿಂಗ್ ಡೈರೆಕ್ಟರ್, BMRCL ತಿಳಿಸಿದ್ದಾರೆ.

Published On - 2:47 pm, Tue, 27 June 23

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು