AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಕರಡು ಪ್ರತಿಗೆ 1400 ಕ್ಕೂ ಹೆಚ್ಚು ಆಕ್ಷೇಪಣೆ; ಗಡುವು ವಿಸ್ತರಣೆ ಸಾಧ್ಯತೆ ಅನುಮಾನ

BBMP ward delimitation draft; ಇಲ್ಲಿಯವರೆಗೆ ಬಂದಿರುವ ಆಕ್ಷೇಪಣೆಗಳಲ್ಲಿ ಕೆಲವು, ತಮ್ಮ ಗಡಿಗಳನ್ನು ಒಂದು ವಿಧಾನಸಭಾ ಕ್ಷೇತ್ರದೊಳಗೆ ಸೇರಿಸುವಂತೆ ನಗರಾಭಿವೃದ್ಧಿ ಇಲಾಖೆಯನ್ನು ಕೇಳಿಕೊಂಡಿವೆ. ಏಕೆಂದರೆ ಕೆಲವು ವಾರ್ಡ್‌ಗಳನ್ನು ಎರಡು ವಿಭಿನ್ನ ಕ್ಷೇತ್ರಗಳ ಅಡಿಯಲ್ಲಿ ಬರುವ ರೀತಿಯಲ್ಲಿ ಸೇರಿಸಿರುವುದು ಕರಡು ಪ್ರತಿಯಿಂದ ತಿಳಿದುಬಂದಿತ್ತು.

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಕರಡು ಪ್ರತಿಗೆ 1400 ಕ್ಕೂ ಹೆಚ್ಚು ಆಕ್ಷೇಪಣೆ; ಗಡುವು ವಿಸ್ತರಣೆ ಸಾಧ್ಯತೆ ಅನುಮಾನ
ಬಿಬಿಎಂಪಿ
TV9 Web
| Edited By: |

Updated on: Sep 02, 2023 | 1:08 PM

Share

ಬೆಂಗಳೂರು, ಸೆಪ್ಟೆಂಬರ್ 2: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವಾರ್ಡ್ ಪುನರ್ ವಿಂಗಡಣೆಯ ಕರಡು ಪ್ರತಿಯು ಶನಿವಾರದವರೆಗೆ ನಾಗರಿಕರು ಮತ್ತು ನಾಗರಿಕ ವೇದಿಕೆಗಳಿಂದ 1,400 ಕ್ಕೂ ಹೆಚ್ಚು ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಿದೆ. ನಗರಾಭಿವೃದ್ಧಿ ಇಲಾಖೆ (UDD) ಆಗಸ್ಟ್ 18 ರಿಂದ ನಾಗರಿಕರಿಗೆ ಅಂಚೆ ಮೂಲಕ ಮಾತ್ರ ಆಕ್ಷೇಪಣೆಗಳನ್ನು ಕಳುಹಿಸಲು ಅವಕಾಶ ನೀಡಿದೆ. ಅಂಚೆ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಇಂದು (ಸೆಪ್ಟೆಂಬರ್ 2) ಕೊನೆಯ ದಿನವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ನಗರಾಭಿವೃದ್ಧಿ ಇಲಾಖೆಯು ಗಡುವನ್ನು ಮತ್ತಷ್ಟು ವಿಸ್ತರಿಸುವ ಯಾವುದೇ ಸಾಧ್ಯತೆ ಇಲ್ಲ.

ಆಗಸ್ಟ್ 18 ರಂದು, 225 ವಾರ್ಡ್‌ಗಳ ಪುನರ್ ವಿಂಗಡಣೆಯ ಕರಡು ಪ್ರತಿಯನ್ನು ಬಿಡುಗಡೆ ಮಾಡಲಾಗಿತ್ತು ಮತ್ತು 15 ದಿನಗಳ ಒಳಗಾಗಿ ಆಕ್ಷೇಪಣೆ, ಸಲಹೆ ನೀಡುವಂತೆ ಸಾರ್ವಜನಿಕರನ್ನು ಕೋರಿತ್ತು. ಕಾಂಗ್ರೆಸ್ ಸರ್ಕಾರವು ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225 ಕ್ಕೆ ಇಳಿಸಿದೆ.

ಸಲಹೆಗಳನ್ನು ಅಂಚೆ ಮೂಲಕ ಮಾತ್ರ ಕಳುಹಿಸಬೇಕು ಎಂಬ ಷರತ್ತು ವಿಧಿಸಿದ್ದಕ್ಕೆ ಹಲವಾರು ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ನೀಡಲು ಆನ್‌ಲೈನ್ ಚಾನೆಲ್ ಅನ್ನು ಸಕ್ರಿಯಗೊಳಿಸಲು ಸರ್ಕಾರವನ್ನು ಒತ್ತಾಯಿಸಿದ್ದರು.

ಇಲ್ಲಿಯವರೆಗೆ ಬಂದಿರುವ ಆಕ್ಷೇಪಣೆಗಳಲ್ಲಿ ಕೆಲವು, ತಮ್ಮ ಗಡಿಗಳನ್ನು ಒಂದು ವಿಧಾನಸಭಾ ಕ್ಷೇತ್ರದೊಳಗೆ ಸೇರಿಸುವಂತೆ ನಗರಾಭಿವೃದ್ಧಿ ಇಲಾಖೆಯನ್ನು ಕೇಳಿಕೊಂಡಿವೆ. ಏಕೆಂದರೆ ಕೆಲವು ವಾರ್ಡ್‌ಗಳನ್ನು ಎರಡು ವಿಭಿನ್ನ ಕ್ಷೇತ್ರಗಳ ಅಡಿಯಲ್ಲಿ ಬರುವ ರೀತಿಯಲ್ಲಿ ಸೇರಿಸಿರುವುದು ಕರಡು ಪ್ರತಿಯಿಂದ ತಿಳಿದುಬಂದಿತ್ತು.

ಬಿಬಿಎಂಪಿಯು ತನ್ನ ವೆಬ್‌ಸೈಟ್‌ನಲ್ಲಿ ಅಸ್ತಿತ್ವದಲ್ಲಿರುವ ಮತ್ತು ವಿಂಗಡಣೆಯಾದ ವಾರ್ಡ್, ವಾರ್ಡ್ ವಿಸ್ತೀರ್ಣ, ಜನಸಂಖ್ಯೆ, ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರದ ವಿವರಗಳನ್ನು ನೀಡುವ ನಕ್ಷೆಯನ್ನು ಸಹ ಅಪ್‌ಲೋಡ್ ಮಾಡಿದೆ.

ಇದನ್ನೂ ಓದಿ: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಬಿಎಲ್ ಸಂತೋಷ್ ಉತ್ತರಿಸಲಿ ಎಂದ ಪ್ರಿಯಾಂಕ್ ಖರ್ಗೆ

ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ, ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದ್ದರಿಂದ ಸೆಪ್ಟೆಂಬರ್ 18 ರೊಳಗೆ ವಾರ್ಡ್ ಗಡಿಯನ್ನು ಗುರುತಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಹಿಂದಿನ ಬಿಜೆಪಿ ಸರಕಾರದ ವಾರ್ಡ್ ವಿಂಗಡಣೆಯಲ್ಲಿನ ಲೋಪದೋಷಗಳನ್ನು ಉಲ್ಲೇಖಿಸಿ ಸರಕಾರವು ಹೈಕೋರ್ಟ್‌ನಲ್ಲಿ ಸಮಯ ಕೋರಿತ್ತು.

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!