AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಕೆಆರ್ ಪುರಂ, ವೈಟ್‌ಫೀಲ್ಡ್ ಹೊಸ ಮೆಟ್ರೋ ಮಾರ್ಗದಲ್ಲಿ ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ: ವರದಿ

ಹೊಸದಾಗಿ ಉದ್ಘಾಟನೆಗೊಂಡ ಕೆಆರ್ ಪುರಂ - ವೈಟ್‌ಫೀಲ್ಡ್ ಮೆಟ್ರೋ ಮಾರ್ಗದ ಸೇವೆಯನ್ನು ಮೊದಲ ದಿನವೇ 16,000 ಕ್ಕೂ ಹೆಚ್ಚು ಪ್ರಯಾಣಿಕರು ಬಳಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ . ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಮಾ.25) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು.

Bengaluru Metro:  ಕೆಆರ್ ಪುರಂ, ವೈಟ್‌ಫೀಲ್ಡ್ ಹೊಸ ಮೆಟ್ರೋ ಮಾರ್ಗದಲ್ಲಿ ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ: ವರದಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 27, 2023 | 2:29 PM

ಬೆಂಗಳೂರು: ಹೊಸದಾಗಿ ಉದ್ಘಾಟನೆಗೊಂಡ ಕೆಆರ್ ಪುರಂ – ವೈಟ್‌ಫೀಲ್ಡ್ ಮೆಟ್ರೋ (Puram, Whitefield) ಮಾರ್ಗದ ಸೇವೆಯನ್ನು ಮೊದಲ ದಿನವೇ 16,000 ಕ್ಕೂ ಹೆಚ್ಚು ಪ್ರಯಾಣಿಕರು ಬಳಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ . ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಮಾ.25) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು. ವರದಿಯ ಪ್ರಕಾರ, ಕೆಆರ್ ಪುರಂ – ವೈಟ್‌ಫೀಲ್ಡ್ ಮೆಟ್ರೋ ಮಾರ್ಗದಲ್ಲಿ ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 6 ರ ನಡುವೆ 16, 319 ಜನರು ಪ್ರಯಾಣಿಸಿದ್ದಾರೆ. ಹೊಸದಾಗಿ ಉದ್ಘಾಟನೆಗೊಂಡ ಮೆಟ್ರೋ ನೇರಳೆ ಮಾರ್ಗದ ಮೆಟ್ರೋದ ವಿಸ್ತರಣೆಯಾಗಿದ್ದು, ಇದು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದೊಂದಿಗೆ ಇನ್ನೂ ಸಂಪರ್ಕವನ್ನು ಸಾಧಿಸಿಲ್ಲ. ಕೆಆರ್ ಪುರಂ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗದ ಕಾಮಗಾರಿಗಳು ನಡೆಯುತ್ತಿದ್ದು, ಈ ಮಾರ್ಗವು ಈ ವರ್ಷದ ಕೊನೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ವೈಟ್‌ಫೀಲ್ಡ್ ಮೆಟ್ರೋದಿಂದ ಕೆಆರ್ ಪುರಂವರೆಗಿನ ಬೆಂಗಳೂರು ಮೆಟ್ರೋದ 2 ನೇ ಹಂತದ ವಿಸ್ತರಣೆ ಯೋಜನೆಯಲ್ಲಿ, ಈಗಾಗಲೇ 13.71 ಕಿಲೋಮೀಟರ್ (ಕಿಮೀ) ವಿಸ್ತರಣೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. BMRCL (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ) ಪ್ರಕಾರ ಇದು 10 – 12 ನಿಮಿಷಗಳ ಸಮಯದಲ್ಲಿ ಏಳು ರೈಲುಗಳು ಸಂಚರಿಸಲಾಗುತ್ತದೆ. ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸಲು ಮತ್ತು ಸಂಚಾರ ದಟ್ಟಣೆಯನ್ನು ತಡೆಯಲು ಸುಮಾರು 4,250 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: Bengaluru Metro: ದೇಶದ ಎರಡನೇ ಅತಿದೊಡ್ಡ ಮೆಟ್ರೋ ನೆಟ್​ವರ್ಕ್ ಆಗಿ ಹೊರಹೊಮ್ಮಿದ ಬೆಂಗಳೂರು ನಮ್ಮ ಮೆಟ್ರೋ

ಕೆಆರ್ ಪುರಂ-ವೈಟ್‌ಫೀಲ್ಡ್ ಮಾರ್ಗವು ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರು ಹಳ್ಳಿ, ಕುಂದಲಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ ಸೇರಿದಂತೆ 12 ಮೆಟ್ರೋ ನಿಲ್ದಾಣಗಳನ್ನು ಹೊಂದಿರುತ್ತದೆ.

Published On - 2:29 pm, Mon, 27 March 23

ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ