AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಕೆಆರ್ ಪುರಂ, ವೈಟ್‌ಫೀಲ್ಡ್ ಹೊಸ ಮೆಟ್ರೋ ಮಾರ್ಗದಲ್ಲಿ ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ: ವರದಿ

ಹೊಸದಾಗಿ ಉದ್ಘಾಟನೆಗೊಂಡ ಕೆಆರ್ ಪುರಂ - ವೈಟ್‌ಫೀಲ್ಡ್ ಮೆಟ್ರೋ ಮಾರ್ಗದ ಸೇವೆಯನ್ನು ಮೊದಲ ದಿನವೇ 16,000 ಕ್ಕೂ ಹೆಚ್ಚು ಪ್ರಯಾಣಿಕರು ಬಳಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ . ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಮಾ.25) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು.

Bengaluru Metro:  ಕೆಆರ್ ಪುರಂ, ವೈಟ್‌ಫೀಲ್ಡ್ ಹೊಸ ಮೆಟ್ರೋ ಮಾರ್ಗದಲ್ಲಿ ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ: ವರದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 27, 2023 | 2:29 PM

Share

ಮುಖ್ಯಾಂಶಗಳು

  • ಹೊಸದಾಗಿ ಉದ್ಘಾಟನೆಗೊಂಡ ಕೆಆರ್ ಪುರಂ - ವೈಟ್‌ಫೀಲ್ಡ್ ಮೆಟ್ರೋ (Puram, Whitefield) ಮಾರ್ಗದ ಸೇವೆಯನ್ನು ಮೊದಲ ದಿನವೇ 16,000 ಕ್ಕೂ ಹೆಚ್ಚು ಪ್ರಯಾಣಿಕರು ಬಳಸಿದ್ದಾರೆ.
  • ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಮಾ.25) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು.
  • ಕೆಆರ್ ಪುರಂ - ವೈಟ್‌ಫೀಲ್ಡ್ ಮೆಟ್ರೋ ಮಾರ್ಗವು ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 6 ರ ನಡುವೆ 16, 319 ಜನರು ಪ್ರಯಾಣಿಸಿದ್ದಾರೆ.

ಬೆಂಗಳೂರು: ಹೊಸದಾಗಿ ಉದ್ಘಾಟನೆಗೊಂಡ ಕೆಆರ್ ಪುರಂ – ವೈಟ್‌ಫೀಲ್ಡ್ ಮೆಟ್ರೋ (Puram, Whitefield) ಮಾರ್ಗದ ಸೇವೆಯನ್ನು ಮೊದಲ ದಿನವೇ 16,000 ಕ್ಕೂ ಹೆಚ್ಚು ಪ್ರಯಾಣಿಕರು ಬಳಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ . ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಮಾ.25) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು. ವರದಿಯ ಪ್ರಕಾರ, ಕೆಆರ್ ಪುರಂ – ವೈಟ್‌ಫೀಲ್ಡ್ ಮೆಟ್ರೋ ಮಾರ್ಗದಲ್ಲಿ ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 6 ರ ನಡುವೆ 16, 319 ಜನರು ಪ್ರಯಾಣಿಸಿದ್ದಾರೆ. ಹೊಸದಾಗಿ ಉದ್ಘಾಟನೆಗೊಂಡ ಮೆಟ್ರೋ ನೇರಳೆ ಮಾರ್ಗದ ಮೆಟ್ರೋದ ವಿಸ್ತರಣೆಯಾಗಿದ್ದು, ಇದು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದೊಂದಿಗೆ ಇನ್ನೂ ಸಂಪರ್ಕವನ್ನು ಸಾಧಿಸಿಲ್ಲ. ಕೆಆರ್ ಪುರಂ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗದ ಕಾಮಗಾರಿಗಳು ನಡೆಯುತ್ತಿದ್ದು, ಈ ಮಾರ್ಗವು ಈ ವರ್ಷದ ಕೊನೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ವೈಟ್‌ಫೀಲ್ಡ್ ಮೆಟ್ರೋದಿಂದ ಕೆಆರ್ ಪುರಂವರೆಗಿನ ಬೆಂಗಳೂರು ಮೆಟ್ರೋದ 2 ನೇ ಹಂತದ ವಿಸ್ತರಣೆ ಯೋಜನೆಯಲ್ಲಿ, ಈಗಾಗಲೇ 13.71 ಕಿಲೋಮೀಟರ್ (ಕಿಮೀ) ವಿಸ್ತರಣೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. BMRCL (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ) ಪ್ರಕಾರ ಇದು 10 – 12 ನಿಮಿಷಗಳ ಸಮಯದಲ್ಲಿ ಏಳು ರೈಲುಗಳು ಸಂಚರಿಸಲಾಗುತ್ತದೆ. ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸಲು ಮತ್ತು ಸಂಚಾರ ದಟ್ಟಣೆಯನ್ನು ತಡೆಯಲು ಸುಮಾರು 4,250 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: Bengaluru Metro: ದೇಶದ ಎರಡನೇ ಅತಿದೊಡ್ಡ ಮೆಟ್ರೋ ನೆಟ್​ವರ್ಕ್ ಆಗಿ ಹೊರಹೊಮ್ಮಿದ ಬೆಂಗಳೂರು ನಮ್ಮ ಮೆಟ್ರೋ

ಕೆಆರ್ ಪುರಂ-ವೈಟ್‌ಫೀಲ್ಡ್ ಮಾರ್ಗವು ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರು ಹಳ್ಳಿ, ಕುಂದಲಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ ಸೇರಿದಂತೆ 12 ಮೆಟ್ರೋ ನಿಲ್ದಾಣಗಳನ್ನು ಹೊಂದಿರುತ್ತದೆ.

Published On - 2:29 pm, Mon, 27 March 23

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!