AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ.

ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು
ಸಂಗ್ರಹ ಚಿತ್ರ
TV9 Web
| Edited By: |

Updated on: Oct 14, 2021 | 1:27 PM

Share

ಬೆಂಗಳೂರು: ಒಂದು ಕಡೆ ಬಿಬಿಎಂಪಿ ಅಧಿಕಾರಿಗಳಿಗೆ ದಸರಾ ಹಬ್ಬದ ಸಂಭ್ರಮವಾದರೆ ಮತ್ತೊಂದು ಕಡೆ ಭಾರಿ ಮಳೆಗೆ ಬೆಂಗಳೂರಿನ ಜನತೆ ಪರದಾಡುವಂತಾಗಿದೆ. ದಸರಾ ಹಬ್ಬಕ್ಕೆ ವಾಹನಗಳ ಪೂಜೆಗೆ ಸಿದ್ಧತೆ ಮಾಡಿಕೊಂಡವರಿಗೆ ಶಾಕ್ ಆಗಿದ್ದು ಮಳೆ ನೀರಿನಲ್ಲಿ ವಾಹನಗಳು ಜಲಾವೃತಗೊಂಡಿವೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ. ನಗರದ ಕೋಡಿಚಿಕ್ಕನಹಳ್ಳಿಯ ಅಬ್ಬಯ್ಯ ಲೇಔಟ್‌ನ ಮನೆಯೊಳಗೆ 3 ಅಡಿಯಷ್ಟು ಮಳೆ‌ ನೀರು ನಿಂತಿದ್ದು ಪೂಜೆಗೂ ಜಾಗವಿಲ್ಲದೆ ದಸರಾ ಹಬ್ಬ ಮಾಡಲಾಗದೆ ಜನ ಪರದಾಡುತ್ತಿದ್ದಾರೆ. ಆಯುಧ ಪೂಜೆಗೆಂದು ನಿನ್ನೆ ಫ್ಯಾಕ್ಟರಿ ಸ್ವಚ್ಛ ಮಾಡಿ, ಯಂತ್ರೋಪಕರಣಗಳಿಗೆ ಅಲಂಕಾರ ಮಾಡಿ ಮನೆಗೆ ಹೋಗಿದ್ದ ಮಾಲೀಕ ಇಂದು ಬಂದು ನೋಡಿದರೆ ಇಡೀ ಫ್ಯಾಕ್ಟರಿ ಮಳೆ ನೀರಿನಲ್ಲಿ ಮುಳುಗಿ ಹೋಗಿದೆ. ನಿನ್ನೆ ಮಧ್ಯ ರಾತ್ರಿಯಿಂದಲೇ ಮನವಿ ಮಾಡಿದ್ರು ಬಿಬಿಎಂಪಿ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ. ಮಳೆ ದಸರಾ ಸಂಭ್ರಮವನ್ನೇ ಕಿತ್ತುಕೊಂಡಿದೆ.

ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತ ಇನ್ನು, ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತಗೊಂಡಿದ್ದು, ಲೇಔಟ್ ನಿವಾಸಿಗಳ ಪರದಾಟ ಹೇಳತೀರದಾಗಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳು, ಬೈಕ್‌ಗಳು ಜಲಾವೃತಗೊಂಡಿವೆ. ಐಷಾರಾಮಿ ಕಾರುಗಳು ಮಳೆ ನೀರಿನಲ್ಲಿ ಮುಳುಗಿವೆ.

bng rain

ಮಳೆ ನೀರಲ್ಲಿ ಮುಳುಗಿದ ವಾಹನಗಳು

bng rain

ಮನೆಗೆ ನುಗ್ಗಿದ ಮಳೆ ನೀರು

bng rain

ಮನೆಗೆ ನುಗ್ಗಿದ ಮಳೆ ನೀರನ್ನು ಆಚೆ ಹಾಗುತ್ತಿರುವ ವ್ಯಕ್ತಿ

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ