AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ.

ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು
ಸಂಗ್ರಹ ಚಿತ್ರ
TV9 Web
| Edited By: |

Updated on: Oct 14, 2021 | 1:27 PM

Share

ಬೆಂಗಳೂರು: ಒಂದು ಕಡೆ ಬಿಬಿಎಂಪಿ ಅಧಿಕಾರಿಗಳಿಗೆ ದಸರಾ ಹಬ್ಬದ ಸಂಭ್ರಮವಾದರೆ ಮತ್ತೊಂದು ಕಡೆ ಭಾರಿ ಮಳೆಗೆ ಬೆಂಗಳೂರಿನ ಜನತೆ ಪರದಾಡುವಂತಾಗಿದೆ. ದಸರಾ ಹಬ್ಬಕ್ಕೆ ವಾಹನಗಳ ಪೂಜೆಗೆ ಸಿದ್ಧತೆ ಮಾಡಿಕೊಂಡವರಿಗೆ ಶಾಕ್ ಆಗಿದ್ದು ಮಳೆ ನೀರಿನಲ್ಲಿ ವಾಹನಗಳು ಜಲಾವೃತಗೊಂಡಿವೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ. ನಗರದ ಕೋಡಿಚಿಕ್ಕನಹಳ್ಳಿಯ ಅಬ್ಬಯ್ಯ ಲೇಔಟ್‌ನ ಮನೆಯೊಳಗೆ 3 ಅಡಿಯಷ್ಟು ಮಳೆ‌ ನೀರು ನಿಂತಿದ್ದು ಪೂಜೆಗೂ ಜಾಗವಿಲ್ಲದೆ ದಸರಾ ಹಬ್ಬ ಮಾಡಲಾಗದೆ ಜನ ಪರದಾಡುತ್ತಿದ್ದಾರೆ. ಆಯುಧ ಪೂಜೆಗೆಂದು ನಿನ್ನೆ ಫ್ಯಾಕ್ಟರಿ ಸ್ವಚ್ಛ ಮಾಡಿ, ಯಂತ್ರೋಪಕರಣಗಳಿಗೆ ಅಲಂಕಾರ ಮಾಡಿ ಮನೆಗೆ ಹೋಗಿದ್ದ ಮಾಲೀಕ ಇಂದು ಬಂದು ನೋಡಿದರೆ ಇಡೀ ಫ್ಯಾಕ್ಟರಿ ಮಳೆ ನೀರಿನಲ್ಲಿ ಮುಳುಗಿ ಹೋಗಿದೆ. ನಿನ್ನೆ ಮಧ್ಯ ರಾತ್ರಿಯಿಂದಲೇ ಮನವಿ ಮಾಡಿದ್ರು ಬಿಬಿಎಂಪಿ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ. ಮಳೆ ದಸರಾ ಸಂಭ್ರಮವನ್ನೇ ಕಿತ್ತುಕೊಂಡಿದೆ.

ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತ ಇನ್ನು, ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತಗೊಂಡಿದ್ದು, ಲೇಔಟ್ ನಿವಾಸಿಗಳ ಪರದಾಟ ಹೇಳತೀರದಾಗಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳು, ಬೈಕ್‌ಗಳು ಜಲಾವೃತಗೊಂಡಿವೆ. ಐಷಾರಾಮಿ ಕಾರುಗಳು ಮಳೆ ನೀರಿನಲ್ಲಿ ಮುಳುಗಿವೆ.

bng rain

ಮಳೆ ನೀರಲ್ಲಿ ಮುಳುಗಿದ ವಾಹನಗಳು

bng rain

ಮನೆಗೆ ನುಗ್ಗಿದ ಮಳೆ ನೀರು

bng rain

ಮನೆಗೆ ನುಗ್ಗಿದ ಮಳೆ ನೀರನ್ನು ಆಚೆ ಹಾಗುತ್ತಿರುವ ವ್ಯಕ್ತಿ

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು