AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ.

ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು
ಸಂಗ್ರಹ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Oct 14, 2021 | 1:27 PM

Share

ಬೆಂಗಳೂರು: ಒಂದು ಕಡೆ ಬಿಬಿಎಂಪಿ ಅಧಿಕಾರಿಗಳಿಗೆ ದಸರಾ ಹಬ್ಬದ ಸಂಭ್ರಮವಾದರೆ ಮತ್ತೊಂದು ಕಡೆ ಭಾರಿ ಮಳೆಗೆ ಬೆಂಗಳೂರಿನ ಜನತೆ ಪರದಾಡುವಂತಾಗಿದೆ. ದಸರಾ ಹಬ್ಬಕ್ಕೆ ವಾಹನಗಳ ಪೂಜೆಗೆ ಸಿದ್ಧತೆ ಮಾಡಿಕೊಂಡವರಿಗೆ ಶಾಕ್ ಆಗಿದ್ದು ಮಳೆ ನೀರಿನಲ್ಲಿ ವಾಹನಗಳು ಜಲಾವೃತಗೊಂಡಿವೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ. ನಗರದ ಕೋಡಿಚಿಕ್ಕನಹಳ್ಳಿಯ ಅಬ್ಬಯ್ಯ ಲೇಔಟ್‌ನ ಮನೆಯೊಳಗೆ 3 ಅಡಿಯಷ್ಟು ಮಳೆ‌ ನೀರು ನಿಂತಿದ್ದು ಪೂಜೆಗೂ ಜಾಗವಿಲ್ಲದೆ ದಸರಾ ಹಬ್ಬ ಮಾಡಲಾಗದೆ ಜನ ಪರದಾಡುತ್ತಿದ್ದಾರೆ. ಆಯುಧ ಪೂಜೆಗೆಂದು ನಿನ್ನೆ ಫ್ಯಾಕ್ಟರಿ ಸ್ವಚ್ಛ ಮಾಡಿ, ಯಂತ್ರೋಪಕರಣಗಳಿಗೆ ಅಲಂಕಾರ ಮಾಡಿ ಮನೆಗೆ ಹೋಗಿದ್ದ ಮಾಲೀಕ ಇಂದು ಬಂದು ನೋಡಿದರೆ ಇಡೀ ಫ್ಯಾಕ್ಟರಿ ಮಳೆ ನೀರಿನಲ್ಲಿ ಮುಳುಗಿ ಹೋಗಿದೆ. ನಿನ್ನೆ ಮಧ್ಯ ರಾತ್ರಿಯಿಂದಲೇ ಮನವಿ ಮಾಡಿದ್ರು ಬಿಬಿಎಂಪಿ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ. ಮಳೆ ದಸರಾ ಸಂಭ್ರಮವನ್ನೇ ಕಿತ್ತುಕೊಂಡಿದೆ.

ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತ ಇನ್ನು, ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತಗೊಂಡಿದ್ದು, ಲೇಔಟ್ ನಿವಾಸಿಗಳ ಪರದಾಟ ಹೇಳತೀರದಾಗಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳು, ಬೈಕ್‌ಗಳು ಜಲಾವೃತಗೊಂಡಿವೆ. ಐಷಾರಾಮಿ ಕಾರುಗಳು ಮಳೆ ನೀರಿನಲ್ಲಿ ಮುಳುಗಿವೆ.

bng rain

ಮಳೆ ನೀರಲ್ಲಿ ಮುಳುಗಿದ ವಾಹನಗಳು

bng rain

ಮನೆಗೆ ನುಗ್ಗಿದ ಮಳೆ ನೀರು

bng rain

ಮನೆಗೆ ನುಗ್ಗಿದ ಮಳೆ ನೀರನ್ನು ಆಚೆ ಹಾಗುತ್ತಿರುವ ವ್ಯಕ್ತಿ

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು