ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ.

ದಸರಾ ಸಂಭ್ರಮ ಕಿತ್ತುಕೊಂಡ ಮಳೆ; ಅಬ್ಬಯ್ಯ ಲೇಔಟ್‌ನ ಮನೆಗಳಿಗೆ ನುಗ್ಗಿದ ಮಳೆ ನೀರು, ಮುಳುಗಿದ ವಾಹನಗಳು
ಸಂಗ್ರಹ ಚಿತ್ರ
Edited By: ಆಯೇಷಾ ಬಾನು

Updated on: Oct 14, 2021 | 1:27 PM

ಬೆಂಗಳೂರು: ಒಂದು ಕಡೆ ಬಿಬಿಎಂಪಿ ಅಧಿಕಾರಿಗಳಿಗೆ ದಸರಾ ಹಬ್ಬದ ಸಂಭ್ರಮವಾದರೆ ಮತ್ತೊಂದು ಕಡೆ ಭಾರಿ ಮಳೆಗೆ ಬೆಂಗಳೂರಿನ ಜನತೆ ಪರದಾಡುವಂತಾಗಿದೆ. ದಸರಾ ಹಬ್ಬಕ್ಕೆ ವಾಹನಗಳ ಪೂಜೆಗೆ ಸಿದ್ಧತೆ ಮಾಡಿಕೊಂಡವರಿಗೆ ಶಾಕ್ ಆಗಿದ್ದು ಮಳೆ ನೀರಿನಲ್ಲಿ ವಾಹನಗಳು ಜಲಾವೃತಗೊಂಡಿವೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಸಮಸ್ಯೆಗಳು ಎದುರಾಗುತ್ತಿವೆ. ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಬೈಕ್, ಕಾರುಗಳು ಜಲಾವೃತಗೊಂಡಿವೆ. ನಗರದ ಕೋಡಿಚಿಕ್ಕನಹಳ್ಳಿಯ ಅಬ್ಬಯ್ಯ ಲೇಔಟ್‌ನ ಮನೆಯೊಳಗೆ 3 ಅಡಿಯಷ್ಟು ಮಳೆ‌ ನೀರು ನಿಂತಿದ್ದು ಪೂಜೆಗೂ ಜಾಗವಿಲ್ಲದೆ ದಸರಾ ಹಬ್ಬ ಮಾಡಲಾಗದೆ ಜನ ಪರದಾಡುತ್ತಿದ್ದಾರೆ. ಆಯುಧ ಪೂಜೆಗೆಂದು ನಿನ್ನೆ ಫ್ಯಾಕ್ಟರಿ ಸ್ವಚ್ಛ ಮಾಡಿ, ಯಂತ್ರೋಪಕರಣಗಳಿಗೆ ಅಲಂಕಾರ ಮಾಡಿ ಮನೆಗೆ ಹೋಗಿದ್ದ ಮಾಲೀಕ ಇಂದು ಬಂದು ನೋಡಿದರೆ ಇಡೀ ಫ್ಯಾಕ್ಟರಿ ಮಳೆ ನೀರಿನಲ್ಲಿ ಮುಳುಗಿ ಹೋಗಿದೆ. ನಿನ್ನೆ ಮಧ್ಯ ರಾತ್ರಿಯಿಂದಲೇ ಮನವಿ ಮಾಡಿದ್ರು ಬಿಬಿಎಂಪಿ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ. ಮಳೆ ದಸರಾ ಸಂಭ್ರಮವನ್ನೇ ಕಿತ್ತುಕೊಂಡಿದೆ.

ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತ
ಇನ್ನು, ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತಗೊಂಡಿದ್ದು, ಲೇಔಟ್ ನಿವಾಸಿಗಳ ಪರದಾಟ ಹೇಳತೀರದಾಗಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳು, ಬೈಕ್‌ಗಳು ಜಲಾವೃತಗೊಂಡಿವೆ. ಐಷಾರಾಮಿ ಕಾರುಗಳು ಮಳೆ ನೀರಿನಲ್ಲಿ ಮುಳುಗಿವೆ.

ಮಳೆ ನೀರಲ್ಲಿ ಮುಳುಗಿದ ವಾಹನಗಳು

ಮನೆಗೆ ನುಗ್ಗಿದ ಮಳೆ ನೀರು

ಮನೆಗೆ ನುಗ್ಗಿದ ಮಳೆ ನೀರನ್ನು ಆಚೆ ಹಾಗುತ್ತಿರುವ ವ್ಯಕ್ತಿ

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ

Web contact

TV9 Kannada

Read More
Follow Us