AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ರಾತ್ರಿ ಮೊಬೈಲ್​ ಚಾರ್ಜ್ ಇಟ್ಟು ಮಲಗುವವರೇ ಎಚ್ಚರ, ಬೆಂಗಳೂರಿನಲ್ಲಿ ಇಡೀ ಮೊಬೈಲ್ ಅಂಗಡಿ ಭಸ್ಮ

ಇಡೀ ರಾತ್ರಿ ಮೊಬೈಲ್​ ಚಾರ್ಜ್​ ಇಟ್ಟಿದ್ದಕ್ಕೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿಯ ಕೆನ್ನಾಲಿಗೆಗೆ ಮೊಬೈಲ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಇಡೀ ರಾತ್ರಿ ಮೊಬೈಲ್​ ಚಾರ್ಜ್ ಇಟ್ಟು ಮಲಗುವವರೇ ಎಚ್ಚರ, ಬೆಂಗಳೂರಿನಲ್ಲಿ ಇಡೀ ಮೊಬೈಲ್ ಅಂಗಡಿ ಭಸ್ಮ
ಮೊಬೈಲ್ ಚಾರ್ಜ್ ಇಟ್ಟಿದ್ದರಿಂದ ಅಂಗಡಿ ಬೆಂಕಿಗಾಹುತಿ
ಆಯೇಷಾ ಬಾನು
| Edited By: |

Updated on:Mar 28, 2023 | 10:46 AM

Share

ಬೆಂಗಳೂರು: ಇಡೀ ರಾತ್ರಿ ಮೊಬೈಲ್​ ಚಾರ್ಜ್ ಇಟ್ಟು ಮಲಗುವವರೇ ಎಚ್ಚರ. ಬೆಂಗಳೂರಿನಲ್ಲೊಂದು ಭಯಾನಕ ಘಟನೆ ಸಂಭವಿಸಿದೆ. ಇಡೀ ರಾತ್ರಿ ಮೊಬೈಲ್​ ಚಾರ್ಜ್​ ಇಟ್ಟಿದ್ದಕ್ಕೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿಯ ಕೆನ್ನಾಲಿಗೆಗೆ ಮೊಬೈಲ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಒಂದು ಮೊಬೈಲ್ ಫೋನ್, ನಿರ್ಲಕ್ಷ್ಯದಿಂದ ಇಡೀ ಮೊಬೈಲ್ ಅಂಗಡಿ ಸುಟ್ಟು ಹೋಗಿದೆ. ರಾತ್ರಿ ಮೊಬೈಲ್ ಚಾರ್ಜ್​ಗೆ ಇಟ್ಟು ಬೆಳಗ್ಗೆ ನೋಡುವಷ್ಟುರಲ್ಲಿ ಭಾರೀ ಅನಾಹುತ ಸಂಭವಿಸಿದೆ. ಬೆಂಗಳೂರಿನ ವಿಜಯನಗರದಲ್ಲಿ ಬೆಳಗ್ಗೆ 7 ಗಂಟೆಗೆ ಘಟನೆ ನಡೆದಿದೆ. ಅಂಗಡಿ ಮಾಲೀಕ ರಾತ್ರಿ ಮೊಬೈಲ್​ ಚಾರ್ಜ್​​ ಇಟ್ಟು ಮನೆಗೆ ಹೋಗಿದ್ದ. ಇಂದು ಬೆಳಗ್ಗೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಮಾಲೀಕನಿಗೆ ಶಾಕ್ ಆಗಿದೆ. ಶಾರ್ಟ್​ಸರ್ಕ್ಯೂಟ್​ನಿಂದ ಅಂಗಡಿ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಂಬ್​ನಂತೆ ಸ್ಪೋಟಗೊಂಡ ಶವೋಮಿ ಕಂಪನಿಯ ಸ್ಮಾರ್ಟ್​ಫೋನ್

ಇಂದು ಸ್ಮಾರ್ಟ್​ಫೋನ್​ಗಳನ್ನು ಬಳಸದಿರುವವರ ಸಂಖ್ಯೆ ತೀರಾ ಕಡಿಮೆ. ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳು ಸಿಗುತ್ತಿರುವ ಕಾರಣ ಮಾರುಕಟ್ಟೆಯಲ್ಲಿ ಮೊಬೈಲ್​ಗಳು ಎಗ್ಗಿಲ್ಲದೆ ಸೇಲ್ ಆಗುತ್ತದೆ. ಇದರ ಜೊತೆಗೆ ಕಳೆದ ಕೆಲವು ವರ್ಷಗಳಿಂದ ಸ್ಮಾರ್ಟ್​ಫೋನ್‌ಗಳು ಸ್ಫೋಟಗೊಳ್ಳುವ (Mobile Blast) ಸಂಗತಿಗಳು ಕೂಡ ಹೆಚ್ಚುತ್ತಿದೆ. ಮೊಬೈಲ್ ಸ್ಪೋಟಗೊಂಡ ಸುದ್ದಿ ಇತ್ತೀಚಿನ ದಿನಗಳಲ್ಲಿ ವರದಿ ಆಗುತ್ತಲೇ ಇದೆ. ಇದರಿಂದ ಜೀವ ಹಾನಿ ಸಂಭವಿಸಿದ್ದೂ ಇದೆ. ಇತ್ತೀಚೆಗಷ್ಟೆ ಸ್ಯಾಮ್​ಸಂಗ್ (Samsung), ಒನ್​ಪ್ಲಸ್ ನಾರ್ಡ್ ಸ್ಮಾರ್ಟ್​ಫೋನ್​ಗಳು ಸ್ಪೋಟಗೊಂಡಿದ್ದು ಬಳಕೆದಾರರಲ್ಲಿ ಭಯ ಹುಟ್ಟಿಸಿತ್ತು. ಇದೀಗ ಶವೋಮಿ ಸರದಿ. ಶವೋಮಿ ಕಂಪನಿ 2021 ರಲ್ಲಿ ಬಿಡುಗಡೆ ಮಾಡಿದ್ದ ಶವೋಮಿ 11 ಲೈಟ್ ಎನ್​ಇ 5ಜಿ (Xiaomi 11 Lite NE 5G) ಸ್ಮಾರ್ಟ್​ಫೋನ್ ಬ್ಲಾಸ್ಟ್ ಆದ ಬಗ್ಗೆ ವರದಿ ಆಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:40 am, Tue, 28 March 23

2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!