AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪ್ರೆಸ್ ಕ್ಲಬ್​ನಿಂದ ಅಗತ್ಯವುಳ್ಳ ಪತ್ರಕರ್ತರ ಮನೆಗೆ ಆಕ್ಸಿಜನ್ ಕಾನ್ಸ್ಂಟ್ರೇಟರ್ ಸೌಲಭ್ಯ

Bengaluru Press Club Medical Oxygen: ಪ್ರೆಸ್ ಕ್ಲಬ್​ ನೀಡುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ನ್ನು ಉಚಿತವಾಗಿ ರೋಗಿಯ ಮನೆಗೆ ತಲುಪಿಸಲು ಸಮಾಜ ಸೇವಕ ಯತೀಶ್ ಮತ್ತು ಅವರ ಉತ್ಸಾಹಿ ತಂಡ ತಲುಪಿಸಲಿದೆ. ಅಗತ್ಯವುಳ್ಳವರು ಯತೀಶ್ ಅವರ ಸಂಪರ್ಕ ಸಂಖ್ಯೆ 9845900666 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ಪ್ರೆಸ್ ಕ್ಲಬ್​ನಿಂದ ಅಗತ್ಯವುಳ್ಳ ಪತ್ರಕರ್ತರ ಮನೆಗೆ ಆಕ್ಸಿಜನ್ ಕಾನ್ಸ್ಂಟ್ರೇಟರ್ ಸೌಲಭ್ಯ
ಬೆಂಗಳೂರು ಪ್ರೆಸ್ ಕ್ಲಬ್​ ಆಕ್ಸಿಜನ್ ಕಾನ್ಸ್ಂಟ್ರೇಟರ್ ವ್ಯವಸ್ಥೆ ಮಾಡಿದೆ
guruganesh bhat
|

Updated on:May 24, 2021 | 9:36 PM

Share

ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಮತ್ತೊಮ್ಮೆ ಪತ್ರಕರ್ತರ ರಕ್ಷಣೆಗೆ ಮುಂದೆ ಬಂದಿದೆ. ಕೊವಿಡ್​ನ ಮೊದಲ ಅಲೆಯ ವೇಳೆ ಅಗತ್ಯವಿರುವವರಿಗೆ ಕ್ಲಬ್ ಫುಡ್ ಕಿಟ್ ನೀಡಿದ್ದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಈ ಬಾರಿ ಕೊವಿಡ್ ಲಸಿಕೆ ವಿತರಣೆಯ ವ್ಯವಸ್ಥೆ ಮಾಡಿದೆ. ಜತೆಗೆ ತನ್ನ ಸದಸ್ಯರ ಮತ್ತು ಅವರ ಕುಟುಂಬದ ಮಂದಿ ಉಸಿರಾಟದ ಸಮಸ್ಯೆಗೆ ಒಳಗಾದರೆ ಉಚಿತವಾಗಿ ಅವರ ಮನೆಗೆ ಆಕ್ಸಿಜನ್ ಒದಗಿಸುವ ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ಬಹುಮುಖ್ಯವಾಗಿ ಪ್ರೆಸ್ ಕ್ಲಬ್ ಸದಸ್ಯರಲ್ಲದ ಪತ್ರಕರ್ತರಿಗೂ ಈ ಸೌಲಭ್ಯವನ್ನು ಕಾರ್ಯಕಾರಿಣಿ ಸಮಿತಿ ವಿಸ್ತರಿಸಿದೆ. ಪ್ರೆಸ್ ಕ್ಲಬ್ ಸದಸ್ಯರ ಶಿಫಾರಸ್ಸು ಪಡೆದು ಬಂದಲ್ಲಿ ಮಾತ್ರ ಈ ಸೇವೆ ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಸದಸ್ಯರು ಅನಾರೋಗ್ಯಕ್ಕೆ ಒಳಗಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಲ್ಲಿ ವೈದ್ಯರ ಶಿಫಾರಸ್ಸು ಇದ್ದಲ್ಲಿ ಕ್ಲಬ್​ನ ಮ್ಯಾನೇಜರ್ ಮಂಜುನಾಥ್ (9845482307) ಅವರನ್ನು ಸಂಪರ್ಕಿಸಿದರೆ ಆಕ್ಸಿಜನ್ ವ್ಯವಸ್ಥೆ ಮಾಡಲಾಗುತ್ತದೆ. ಈ ಕುರಿತು ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಕಿರಣ್ ಹೆಚ್.ವಿ. ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಪ್ರೆಸ್ ಕ್ಲಬ್​ನ ಈ ಯೋಜನೆಗೆ ಯಶ್ ಟೆಲ್ ಸಂಸ್ಥೆಯ ಮಾಲಿಕ ಮಂಜುನಾಥ್ ಸಹಕಾರ ನೀಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ 4 ಆಕ್ಸಿಜನ್ ಕಾನ್ಸ್​ಂಟ್ರೇಟರ್ ಒದಗಿಸಿಕೊಟ್ಟಿದ್ದಾರೆ. ಆಂಬ್ಯುಲೆನ್ಸ್ ಯೋಜನೆಯನ್ನೂ ಜಾರಿಗೆ ತಂದಿತ್ತು ಎಂಬುದು ಇಲ್ಲಿ ಉಲ್ಲೇಖನೀಯ.

ಪ್ರೆಸ್ ಕ್ಲಬ್​ ನೀಡುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ನ್ನು ಉಚಿತವಾಗಿ ರೋಗಿಯ ಮನೆಗೆ ತಲುಪಿಸಲು ಸಮಾಜ ಸೇವಕ ಯತೀಶ್ ಮತ್ತು ಅವರ ಉತ್ಸಾಹಿ ತಂಡ ತಲುಪಿಸಲಿದೆ. ಅಗತ್ಯವುಳ್ಳವರು ಯತೀಶ್ ಅವರ ಸಂಪರ್ಕ ಸಂಖ್ಯೆ 9845900666 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್ (Oxygen Constrictor Facility for the home of the needy from Bangalore Press Club)

Published On - 8:50 pm, Mon, 24 May 21

Follow Us
guruganesh bhat
guruganesh bhat
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು