AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪ್ರೆಸ್ ಕ್ಲಬ್​ನಿಂದ ಅಗತ್ಯವುಳ್ಳ ಪತ್ರಕರ್ತರ ಮನೆಗೆ ಆಕ್ಸಿಜನ್ ಕಾನ್ಸ್ಂಟ್ರೇಟರ್ ಸೌಲಭ್ಯ

Bengaluru Press Club Medical Oxygen: ಪ್ರೆಸ್ ಕ್ಲಬ್​ ನೀಡುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ನ್ನು ಉಚಿತವಾಗಿ ರೋಗಿಯ ಮನೆಗೆ ತಲುಪಿಸಲು ಸಮಾಜ ಸೇವಕ ಯತೀಶ್ ಮತ್ತು ಅವರ ಉತ್ಸಾಹಿ ತಂಡ ತಲುಪಿಸಲಿದೆ. ಅಗತ್ಯವುಳ್ಳವರು ಯತೀಶ್ ಅವರ ಸಂಪರ್ಕ ಸಂಖ್ಯೆ 9845900666 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ಪ್ರೆಸ್ ಕ್ಲಬ್​ನಿಂದ ಅಗತ್ಯವುಳ್ಳ ಪತ್ರಕರ್ತರ ಮನೆಗೆ ಆಕ್ಸಿಜನ್ ಕಾನ್ಸ್ಂಟ್ರೇಟರ್ ಸೌಲಭ್ಯ
ಬೆಂಗಳೂರು ಪ್ರೆಸ್ ಕ್ಲಬ್​ ಆಕ್ಸಿಜನ್ ಕಾನ್ಸ್ಂಟ್ರೇಟರ್ ವ್ಯವಸ್ಥೆ ಮಾಡಿದೆ
guruganesh bhat
|

Updated on:May 24, 2021 | 9:36 PM

Share

ಬೆಂಗಳೂರು: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಮತ್ತೊಮ್ಮೆ ಪತ್ರಕರ್ತರ ರಕ್ಷಣೆಗೆ ಮುಂದೆ ಬಂದಿದೆ. ಕೊವಿಡ್​ನ ಮೊದಲ ಅಲೆಯ ವೇಳೆ ಅಗತ್ಯವಿರುವವರಿಗೆ ಕ್ಲಬ್ ಫುಡ್ ಕಿಟ್ ನೀಡಿದ್ದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಈ ಬಾರಿ ಕೊವಿಡ್ ಲಸಿಕೆ ವಿತರಣೆಯ ವ್ಯವಸ್ಥೆ ಮಾಡಿದೆ. ಜತೆಗೆ ತನ್ನ ಸದಸ್ಯರ ಮತ್ತು ಅವರ ಕುಟುಂಬದ ಮಂದಿ ಉಸಿರಾಟದ ಸಮಸ್ಯೆಗೆ ಒಳಗಾದರೆ ಉಚಿತವಾಗಿ ಅವರ ಮನೆಗೆ ಆಕ್ಸಿಜನ್ ಒದಗಿಸುವ ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ಬಹುಮುಖ್ಯವಾಗಿ ಪ್ರೆಸ್ ಕ್ಲಬ್ ಸದಸ್ಯರಲ್ಲದ ಪತ್ರಕರ್ತರಿಗೂ ಈ ಸೌಲಭ್ಯವನ್ನು ಕಾರ್ಯಕಾರಿಣಿ ಸಮಿತಿ ವಿಸ್ತರಿಸಿದೆ. ಪ್ರೆಸ್ ಕ್ಲಬ್ ಸದಸ್ಯರ ಶಿಫಾರಸ್ಸು ಪಡೆದು ಬಂದಲ್ಲಿ ಮಾತ್ರ ಈ ಸೇವೆ ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಸದಸ್ಯರು ಅನಾರೋಗ್ಯಕ್ಕೆ ಒಳಗಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಲ್ಲಿ ವೈದ್ಯರ ಶಿಫಾರಸ್ಸು ಇದ್ದಲ್ಲಿ ಕ್ಲಬ್​ನ ಮ್ಯಾನೇಜರ್ ಮಂಜುನಾಥ್ (9845482307) ಅವರನ್ನು ಸಂಪರ್ಕಿಸಿದರೆ ಆಕ್ಸಿಜನ್ ವ್ಯವಸ್ಥೆ ಮಾಡಲಾಗುತ್ತದೆ. ಈ ಕುರಿತು ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಕಿರಣ್ ಹೆಚ್.ವಿ. ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಪ್ರೆಸ್ ಕ್ಲಬ್​ನ ಈ ಯೋಜನೆಗೆ ಯಶ್ ಟೆಲ್ ಸಂಸ್ಥೆಯ ಮಾಲಿಕ ಮಂಜುನಾಥ್ ಸಹಕಾರ ನೀಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ 4 ಆಕ್ಸಿಜನ್ ಕಾನ್ಸ್​ಂಟ್ರೇಟರ್ ಒದಗಿಸಿಕೊಟ್ಟಿದ್ದಾರೆ. ಆಂಬ್ಯುಲೆನ್ಸ್ ಯೋಜನೆಯನ್ನೂ ಜಾರಿಗೆ ತಂದಿತ್ತು ಎಂಬುದು ಇಲ್ಲಿ ಉಲ್ಲೇಖನೀಯ.

ಪ್ರೆಸ್ ಕ್ಲಬ್​ ನೀಡುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ನ್ನು ಉಚಿತವಾಗಿ ರೋಗಿಯ ಮನೆಗೆ ತಲುಪಿಸಲು ಸಮಾಜ ಸೇವಕ ಯತೀಶ್ ಮತ್ತು ಅವರ ಉತ್ಸಾಹಿ ತಂಡ ತಲುಪಿಸಲಿದೆ. ಅಗತ್ಯವುಳ್ಳವರು ಯತೀಶ್ ಅವರ ಸಂಪರ್ಕ ಸಂಖ್ಯೆ 9845900666 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್ (Oxygen Constrictor Facility for the home of the needy from Bangalore Press Club)

Published On - 8:50 pm, Mon, 24 May 21

Follow Us
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ