ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಭರತ್ ಭೂಷಣ್ ಮನೆಯಲ್ಲಿ ಸದ್ಯ ನೀರವ ಮೌನ ಆವರಿಸಿದೆ. ಇದೇ ಹೊತ್ತಿನಲ್ಲಿ ದಾಳಿಯ ತನಿಖೆ ಹೊಣೆ ಹೊತ್ತಿರುವ ಎನ್​ಐಎ ಅಧಿಕಾರಿಗಳ ತಂಡ ಬೆಂಗಳೂರಿಗೆ ಬಂದಿದ್ದು, ಭರತ್ ಪತ್ನಿ ಬಳಿ ಸಾಕಷ್ಟು ಮಾಹಿತಿ ಸಂಗ್ರಹಿಸಿದೆ. ದಾಳಿ ಸಂದರ್ಭದ ಬಗ್ಗೆ ಹೇಳಿಕೆ ಪಡೆದಿದೆ. ಶಿವಮೊಗ್ಗದ ಮಂಜುನಾಥ್ ಮನೆಗೂ ತೆರಳಲಿರುವ ಎನ್​ಐಎ ತಂಡ, ಮಂಜುನಾಥ್ ಪತ್ನಿ ಪಲ್ಲವಿ ಅವರಿಂದಲೂ ಮಾಹಿತಿ ಕಲೆ ಹಾಕಲಿದೆ.

ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು
ಬೆಂಗಳೂರಿನಲ್ಲಿರುವ ಭರತ್ ಭೂಷಣ್ ನಿವಾಸ ಮತ್ತು ಎನ್​ಐಎ ಅಧಿಕಾರಿಗಳ ಸಂಗ್ರಹ ಚಿತ್ರ

Updated on: Apr 29, 2025 | 10:01 AM

ಬೆಂಗಳೂರು, ಏಪ್ರಿಲ್ 29: ದೇಶವನ್ನೇ ಬೆಚ್ಚಿಬೀಳಿಸಿದ್ದ ಕಾಶ್ಮೀರದ ಪಹಲ್ಗಾಮ್ ದಾಳಿಯ (Pahalgam Terror Attack) ಬಗ್ಗೆ ಎನ್​ಐಎ (NIA) ಅಧಿಕಾರಿಗಳು ತನಿಖೆಗೆ ಆರಂಭಿಸಿದ್ದಾರೆ. ಉಗ್ರರ ಗುಂಡೇಟಿಗೆ ಬಲಿಯಾದ, ಬೆಂಗಳೂರಿನ ಮತ್ತಿಕೆರೆಯ ನಿವಾಸಿ ಭರತ್ ಭೂಷಣ್ (Bharath Bhushan) ಮನೆಗೂ ಎನ್​ಐಎ ಅಧಿಕಾರಿಗಳ ತಂಡ ಆಗಮಿಸಿದೆ. ಭರತ್ ಭೂಷಣ್ ನಿವಾಸಕ್ಕೆ ಭೇಟಿ ನೀಡಿದ ನಾಲ್ವರು ಅಧಿಕಾರಿಗಳು ದಾಳಿ ಬಗ್ಗೆ ಮಹತ್ವದ ಮಾಹಿತಿ ಸಂಗ್ರಹ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ವರು ಅಧಿಕಾರಿಗಳ ತಂಡ ಭರತ್ ಭೂಷಣ್ ಪತ್ನಿ ಡಾ.ಸುಜಾತಾರನ್ನು ವಿಚಾರಣೆ ನಡೆಸಿದೆ. ಈ ವೇಳೆ ಘಟನೆ ಬಗ್ಗೆ ಕೆಲ ಮಾಹಿತಿ ಕಲೆ ಹಾಕಿದ ತಂಡ, ಶಂಕಿತ ಉಗ್ರರ ರೇಖಾಚಿತ್ರಗಳನ್ನು ತೋರಿಸಿ ಹೇಳಿಕೆ ಪಡೆದಿದ್ದಾರೆ.

ಭರತ್ ಪತ್ನಿ ಬಳಿ ಎನ್​ಐಎ ಕೇಳಿದ ಪ್ರಶ್ನೆಗಳೇನು?

  • ಕಾಶ್ಮೀರಕ್ಕೆ ಯಾವಾಗ ಹೋಗಿದ್ರು, ಯಾರ್ಯಾರು ಹೋಗಿದ್ರಿ?
  • ಉಗ್ರರು ಬಂದಾಗ ನೀವು ಎಲ್ಲಿದ್ರಿ, ಭರತ್ ಭೂಷಣ್ ಎಲ್ಲಿದ್ರು?
  • ಉಗ್ರರು ಬಂದಾಗ ಯಾವ ಭಾಷೆ ಮಾತಾಡಿದ್ರು, ಎಷ್ಟು ಜನ ಇದ್ರು?
  • ಉಗ್ರರ ಮುಖ ಚಹರೆ, ವೇಷ ಭೂಷಣ ನೆನಪಿದ್ಯಾ?
  • ಉಗ್ರರ ಸ್ಕೇಚ್ ತೋರಿಸಿ ಮಾಹಿತಿ ಸಂಗ್ರಹ
  • ಉಗ್ರರ ಬಳಿಯಿದ್ದ ಆಯುಧವನ್ನ ನೋಡಿದ್ರಾ? ಅದು ಯಾವ ರೀತಿ ಇತ್ತು?

ಹೀಗೆ ಎನ್​ಐಎ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ‌ಉಗ್ರರ ಪೈಶಾಚಿಕ ಕೃತ್ಯವನ್ನು ಕಣ್ಣಾರೆ ಕಂಡಿದ್ದ ಸುಜಾತಾ ಕಂಡಿದ್ದೆಲ್ಲವನ್ನು ವಿವರಿಸಿದ್ದಾರೆ. ಮುಂದೆಯೂ ತನಿಖೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಇಷ್ಟಲ್ಲದೇ ಉಗ್ರರ ದಾಳಿಗೆ ಬಲಿಯಾದ ಎಲ್ಲರ ಮನೆಗೂ ಹೋಗಿ ಎನ್​ಐಎ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಉಗ್ರರ ದಾಳಿಯಲ್ಲಿ ಹತರಾಗಿದ್ದ ಶಿವಮೊಗ್ಗದ ಮಂಜುನಾಥ್ ಅವರ ಮನೆಗೂ ತೆರಳಿ ಅವರ ಪತ್ನಿ ಪಲ್ಲವಿ ಅವರಿಂದ ಎನ್​ಐಎ ಅಧಿಕಾರಿಗಳು ಮಾಹಿತಿ ಕಲೆ ಹಾಕಲಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯ ಪಹಲ್ಗಾಮ್​ನಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದರಲ್ಲಿ 25 ಮಂದಿ ಪ್ರವಾಸಿಗರು ಹಾಗೂ ಒಬ್ಬ ಸ್ಥಳೀಯ ವ್ಯಕ್ತಿ ಸೇರಿದ್ದಾನೆ. ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಸಹ ಘಟನೆಯಲ್ಲಿ ಸಾವಿಗೀಡಾಗಿದ್ದರು.

ವರದಿ: ಪ್ರದೀಪ್ ಚಿಕ್ಕಾಟಿ, ‘ಟಿವಿ9’

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us