AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರು ಬಿಟ್ಟು ಹೋಗಲು ಒಪ್ಪದ ಪಾಕ್ ಮಹಿಳೆ, ಪೊಲೀಸರಿಗೆ ಈಕೆಯ ಮದುವೆ ಬಗ್ಗೆಯೇ ಶಂಕೆ

ಪಾಕಿಸ್ಥಾನ ಮೂಲದ ಮಹಿಳೆ ಇಕ್ರಾ ಜಿವಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ ಪ್ರಕರಣ ಸಂಬಂಧ ಮಹಿಳೆ ಭಾರತ ಬಿಟ್ಟು ಹೋಗಲು ನಿರಾಕರಿಸಿದ್ದು, ನಾನು ಭಾರತದ ಮೂಲದವನ್ನು ಮದುವೆಯಾಗಿದ್ದೇನೆ ಇಲ್ಲೇ ಇರುತ್ತೇನೆ ಎಂದು ಪೊಲೀಸರ ಕಾಲು ಹಿಡಿದಿದ್ದಾಳೆ.

Bengaluru News: ಬೆಂಗಳೂರು ಬಿಟ್ಟು ಹೋಗಲು ಒಪ್ಪದ ಪಾಕ್ ಮಹಿಳೆ, ಪೊಲೀಸರಿಗೆ ಈಕೆಯ ಮದುವೆ ಬಗ್ಗೆಯೇ ಶಂಕೆ
ಇಕ್ರಾ ಜಿವಾನಿ ಮತ್ತು ಮುಲಾಯಂ ಸಿಂಗ್​
TV9 Web
| Edited By: |

Updated on: Jan 25, 2023 | 1:48 PM

Share

ಬೆಂಗಳೂರು: ಪಾಕಿಸ್ಥಾನ ಮೂಲದ ಮಹಿಳೆ ಇಕ್ರಾ ಜಿವಾನಿ ಗಡಿ ದಾಡಿ ಭಾರತಕ್ಕೆ ಬಂದು ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ ಪ್ರಕರಣ ಸಂಬಂಧ ಪೊಲೀಸರು ಮಹಿಳೆಯನ್ನು ಮರಳಿ ಪಾಕಿಸ್ತಾನಕ್ಕೆ ಕಳಿಸಲು ಸಿದ್ಧತೆ ನಡೆಸಿದ್ದರು. ಆದರೆ ಇಕ್ರಾ ಜಿವಾನಿ ಮಾತ್ರ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ನಾನು ಭಾರತದ ಮುಲಾಯಂ ಸಿಂಗ್​ನನ್ನು​ ಮದುವೆ ಆಗಿದ್ದೇನೆ. ನಾನು ಪತಿ ಮುಲಾಯಂ ಸಿಂಗ್​ನನ್ನು​ ಬಿಟ್ಟು ಹೋಗಲ್ಲ ಎಂದು ಪೊಲೀಸರ ಕಾಲು ಹಿಡಿದು ಬೇಡಿಕೊಂಡಿದ್ದಾಳೆ.

ಸದ್ಯ ಇಕ್ರಾ ಜಿವಾನಿ ಎಫ್​ಆರ್​ಆರ್​ಒ ಅಧೀನದಲ್ಲಿದ್ದಾಳೆ. ಇನ್ನೂ ಯುವತಿ ಭಾರತಕ್ಕೆ ಬಂದಿರೋದೆ ಅಕ್ರಮವಾದ ಕಾರಣ ಅಧಿಕಾರಿಗಳು ಯುವತಿಯನ್ನು ಪಾಕಿಸ್ತಾನಕ್ಕೆ ಡಿಪೋರ್ಟ್ ಮಾಡಲು ತಯಾರು ಮಾಡಿಕೊಳ್ಳುತ್ತಿದ್ದಾರೆ. ಯುವತಿಯನ್ನು ಕಳುಹಿಸಲು ಸುಮಾರು ಎರಡು ತಿಂಗಳು ಸಮಯ ಬೇಕಾಗುತ್ತದೆ. ಪಾಕಿಸ್ತಾನದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಬೇಕಾಗುತ್ತದೆ. ಈ ನಡುವೆ ಮದುವೆ ಕಾರಣ ಕೊಟ್ಟು ಯುವತಿ ರಂಪಾಟ ಮಾಡುತ್ತಿದ್ದಾಳೆ.

ಇದನ್ನೂ ಓದಿ: ಪಾಕಿಸ್ತಾನ್ ಟು ಇಂಡಿಯಾ ಲವ್ ಸ್ಟೋರಿ: ಇಕ್ರಾ-ಮುಲಾಯಂ ಪ್ರೀತಿ ಕಥೆಯಲ್ಲಿ ಅನುಮಾನ, ಈ ಜೋಡಿ ಗಡಿ ಪ್ರವೇಶಿಸಿದ್ದು ಹೇಗೆ?

ಇಕ್ರಾ ಜಿವಾನಿ ಮತ್ತು ಮುಲಾಯಂ ಸಿಂಗ್ ಮದುವೆ ಆಗಿರೋದೆ ಅನುಮಾನ

ಇಕ್ರಾ ಜಿವಾನಿ ಮತ್ತು ಮುಲಾಯಂ ಸಿಂಗ್ ಮದುವೆ ಬಗ್ಗೆಯೇ ಪೊಲೀಸರಿಗೆ ಅನುಮಾನ ಮೂಡಿದೆ. ಪೊಲೀಸರ ವಿಚಾರಣೆ ವೇಳೆ ಇಬ್ಬರು ಮದುವೆಯಾಗಿದ್ದೀವಿ ಎಂದಿದ್ದಾರೆ. ಅದರೆ ಮದುವೆಯಾದ ಬಗ್ಗೆ ಯಾವುದೇ ಅಧಿಕೃತ ದಾಖಲೆ, ಪೋಟೊಗಳಿಲ್ಲ. ಮದುವೆಯಾದ ಬಗ್ಗೆ ಮ್ಯಾರೇಜ್ ಸರ್ಟಿಫಿಕೇಟ್ ಕೂಡ ಇಲ್ಲ. ಬೇರೆ ದಾಖಲಾತಿಗಳು ಕೂಡ ಪತ್ತೆಯಾಗಿಲ್ಲ. ಈ ರೀತಿ ಮದುವೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ವಿದೇಶಿ ಮಹಿಳೆಯನ್ನ ಮದುವೆಯಾದಾಗ ಕಾನೂನಾತ್ಮಕ ದಾಖಲೆ ಇರಬೇಕು. ಈ ಹಿನ್ನೆಲೆ ಮುಲಾಯಂ ಸಿಂಗ್ ಯಾದವ್​ನನ್ನು ಕಸ್ಟಡಿಗೆ ಪಡೆದು ಪೊಲೀಸರ ವಿಚಾರಣೆ ನಡೆಸಲು ಸಿದ್ದತೆ ನಡೆಸಿದ್ದಾರೆ. ಸದ್ಯ ಈ ಬಗ್ಗೆ ಹಲವು ಆಯಾಮಗಳಲ್ಲಿ ಬೆಳ್ಳಂದೂರು ಪೊಲೀಸರು ತನಿಖೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ