AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪರ ಘೋಷಣೆ ಜಟಾಪಟಿ: ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ

ನಿನ್ನೆ(ಫೆ.27) ರಾಜ್ಯಸಭೆಯ ನೂತನ ಸಂಸದರಾಗಿ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಆಯ್ಕೆಯಾಗಿದ್ದು, ಈ ಹಿನ್ನಲೆ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಇದೀಗ ವಿಧಾನಸಭೆಯ ಕಲಾಪದಲ್ಲಿ ದೊಡ್ಡಮಟ್ಟದಲ್ಲಿ ಜಟಾಪಟಿ ಶುರುವಾಗಿದೆ.

ಪಾಕ್​ ಪರ ಘೋಷಣೆ ಜಟಾಪಟಿ: ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ
ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ
ಕಿರಣ್​ ಹನಿಯಡ್ಕ
| Edited By: |

Updated on:Feb 28, 2024 | 2:58 PM

Share

ಬೆಂಗಳೂರು, ಫೆ.28: ರಾಜ್ಯಸಭಾ ಚುನಾವಣೆ ನಡೆದು ಕಾಂಗ್ರೆಸ್​ನ ಮೂವರು ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನಲೆ ನಿನ್ನೆ(ಫೆ.27) ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದನ್ನು ಖಂಡಿಸಿ ಇಂದು(ಫೆ,28) ವಿಧಾನಸಭೆ ಕಲಾಪದಲ್ಲಿ ಸದನದ ಬಾವಿಯಲ್ಲಿ ವಿಪಕ್ಷ ಬಿಜೆಪಿ ಧರಣಿ ನಡೆಸಿದೆ. ಈ ಹಿನ್ನಲೆ ಕಲಾಪವನ್ನು ನಾಳೆ ಬೆಳಗ್ಗೆ 9 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.

ನಾಳೆ ರಾಜ್ಯಪಾಲರಿಗೆ ದೂರು ನೀಡಲಿರುವ ಬಿಜೆಪಿ

ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದಲ್ಲದೆ ಸ್ಪೀಕರ್ ಪೀಠದ ಎದುರು ಬಿಜೆಪಿ ಸದಸ್ಯರು ಕಾಗದ ಹರಿದು ಎಸೆದಿದ್ದಾರೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನು ಕೂಡಲೇ ಬಂಧಿಸಿ ಎಂದು ಬಿಜೆಪಿ ಒತ್ತಾಯಿಸಿದ್ದಾರೆ. ಈ ಹಿನ್ನಲೆ ವಿಧಾನಸಭೆ ಕಲಾಪವನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದ್ದು, ಇವತ್ತಿನ ಬದಲು ನಾಳೆ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ.

ಇದನ್ನೂ ಓದಿ:ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ: ರಾಜ್ಯಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ

ಕಿಡಿಕಾರಿದ್ದ ಆರ್​ ಅಶೋಕ

ಈ ಘಟನೆ ಕುರಿತು ಬೆಂಗಳೂರಿನಲ್ಲಿ ಕಿಡಿಕಾರಿದ ಆರ್​ ಅಶೋಕ ಎಕ್ಸ್​ನಲ್ಲಿ ‘ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಈ ಘಟನೆ ಕಾಂಗ್ರೆಸ್​ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ. ಚುನಾವಣೆಯಲ್ಲಿ ಗೆದ್ದಿದ್ದರೆ ನಿಮ್ಮ ಅಭ್ಯರ್ಥಿಗಳಿಗೆ ಜೈಕಾರ ಹಾಕಿ, ನಿಮ್ಮ ಪಕ್ಷಕ್ಕೆ ಜೈಕಾರ ಹಾಕಿ, ನಿಮ್ಮ ನಾಯಕರಿಗೆ ಜೈಕಾರ ಹಾಕಿ, ಅದು ಬಿಟ್ಟು ಪಾಕಿಸ್ತಾನ ಜಿಂದಾಬಾದ್ ಎಂದು ನಿಮ್ಮ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುತ್ತಾರಲ್ಲ ಸಿಎಂ ಸಿದ್ದರಾಮಯ್ಯ ಅವರೇ, ಮೂರು ರಾಜ್ಯಸಭೆ ಸ್ಥಾನ ಗೆದ್ದ ಮಾತ್ರಕ್ಕೆ ಮತೊಮ್ಮೆ ದೇಶ ವಿಭಜನೆ ಮಾಡಬಹುದು ಎಂದು ಕೊಂಡಿದ್ದೀರಾ?, ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ ಡಿಕೆ ಶಿವಕುಮಾರ್​ ಅವರೇ ಎಂದು ವಾಗ್ದಾಳಿ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Wed, 28 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್