Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ 2ಎ ಮೀಸಲಾತಿ: ಮುಗಿದ ಗಡುವು, ಮತ್ತೆ ಹೋರಾಟ, ಏ 21ರಿಂದ ಧರಣಿ -ಮೃತ್ಯುಂಜಯ ಸ್ವಾಮೀಜಿ ಘೋಷಣೆ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ (Panchamasali 2A Reservation) ಆಗ್ರಹಿಸಿ ಮತ್ತೆ ಹೋರಾಟದ ಲಕ್ಷಣಗಳು ಕಾಣತೊಡಗಿವೆ. ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಒಂದೂವರೆ ವರ್ಷದಿಂದ ಮನವಿ ಮುಂದಿಟ್ಟು, ಹೋರಾಟ ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ವರ್ಷ ಸೆಪ್ಟೆಂಬರ್ 15ರೊಳಗೆ ಮೀಸಲಾತಿ ಕೊಡುವ ಭರವಸೆ ನೀಡಿದ್ದರು. ಅದನ್ನು ನಂಬಿ ಸತ್ಯಾಗ್ರಹವನ್ನ ನಾವು ತಾತ್ಕಾಲಿಕವಾಗಿ ಕೈಬಿಟ್ಟಿದ್ದೆವು. ಆದರೆ ಅದು ಕೈಗೂಡಲಿಲ್ಲ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ( Basavaraj Bommai) 3 ತಿಂಗಳು […]

ಪಂಚಮಸಾಲಿ 2ಎ ಮೀಸಲಾತಿ: ಮುಗಿದ ಗಡುವು, ಮತ್ತೆ ಹೋರಾಟ, ಏ 21ರಿಂದ ಧರಣಿ -ಮೃತ್ಯುಂಜಯ ಸ್ವಾಮೀಜಿ ಘೋಷಣೆ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 18, 2022 | 2:21 PM

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ (Panchamasali 2A Reservation) ಆಗ್ರಹಿಸಿ ಮತ್ತೆ ಹೋರಾಟದ ಲಕ್ಷಣಗಳು ಕಾಣತೊಡಗಿವೆ. ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಒಂದೂವರೆ ವರ್ಷದಿಂದ ಮನವಿ ಮುಂದಿಟ್ಟು, ಹೋರಾಟ ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ವರ್ಷ ಸೆಪ್ಟೆಂಬರ್ 15ರೊಳಗೆ ಮೀಸಲಾತಿ ಕೊಡುವ ಭರವಸೆ ನೀಡಿದ್ದರು. ಅದನ್ನು ನಂಬಿ ಸತ್ಯಾಗ್ರಹವನ್ನ ನಾವು ತಾತ್ಕಾಲಿಕವಾಗಿ ಕೈಬಿಟ್ಟಿದ್ದೆವು. ಆದರೆ ಅದು ಕೈಗೂಡಲಿಲ್ಲ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ( Basavaraj Bommai) 3 ತಿಂಗಳು ಸಮಯ ಕೋರಿದ್ದರು. ಆದರೆ ದುರ್ದೈವ ಬಜೆಟ್ ವೇಳೆಯೂ ಮೀಸಲಾತಿ ಸಿಗಲಿಲ್ಲ. ಏಪ್ರಿಲ್ 14ಕ್ಕೆ ಮತ್ತೊಮ್ಮೆ ಸಿಎಂಗೆ ಅಂತಿಮ ಗಡುವು ಕೊಟ್ಟಿದ್ದೆವು. ಈಗ ಅಂತಿಮ ಗಡುವು ಮುಗಿದಿರುವ ಹಿನ್ನೆಲೆ ಹೋರಾಟ ಮುಂದುವರಿಸುವೆವು. ನಮ್ಮ ಧರಣಿ ವೇಳೆಗೆ ಸರ್ಕಾರ ಸ್ಪಂದಿಸಬಹುದು ಅಂದುಕೊಂಡಿದ್ದೇವೆ. ಸ್ಪಂದಿಸದೆ ಹೋದರೆ… ತಾಲೂಕು ಮಟ್ಟದಲ್ಲಿ ಹೋರಾಟ ಕೈಗೆತ್ತಿಕೊಳ್ಳಲಿದ್ದೇವೆ. ಏಪ್ರಿಲ್ 21ರಂದು ಕೂಡಲಸಂಗಮದಿಂದ ಧರಣಿ ಪ್ರಾರಂಭಿಸುತ್ತೇವೆ. ಅಲ್ಲಿಗೂ ಬಗ್ಗದಿದ್ದರೆ ಆಯಾ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಧರಣಿ ನಡೆಸುವೆವು. ಮೇ 21ರಿಂದ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಧರಣಿ ಮಾಡ್ತೇವೆ. ಇದು ಐದು ಹಂತದ ನಮ್ಮ ಹೋರಾಟವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Kudalasamgama Mruthyunjaya Swamiji )ಅವರು ಬೆಂಗಳೂರಿನಲ್ಲಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಇದೂ ಓದಿ: KGF Chapter 2 Collection: ವಿಶ್ವಾದ್ಯಂತ 4 ದಿನಕ್ಕೆ 551 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ಹೆಚ್ಚುತ್ತಲೇ ಇದೆ ಯಶ್​ ಟೆರಿಟರಿ

ಇದೂ ಓದಿ: KGF 2 Collection: ಯಶ್​ ಅಬ್ಬರಕ್ಕೆ ಹಿಂದಿ ಮಾರ್ಕೆಟ್​ ಕಂಗಾಲು; 4 ದಿನಕ್ಕೆ ಬಾಲಿವುಡ್​ನಲ್ಲಿ 193 ಕೋಟಿ ರೂ. ಗಳಿಸಿದ ‘ಕೆಜಿಎಫ್​ 2’

Published On - 2:17 pm, Mon, 18 April 22

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್