AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭರವಸೆ: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದೂಡಲು ಜಯಮೃತ್ಯುಂಜಯ ಸ್ವಾಮೀಜಿ ನಿರ್ಧಾರ

ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಸಿಎಂ ಭರವಸೆ: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದೂಡಲು ಜಯಮೃತ್ಯುಂಜಯ ಸ್ವಾಮೀಜಿ ನಿರ್ಧಾರ
ಪಂಚಮಸಾಲಿ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಇತರ ನಾಯಕರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಭೆ ನಡೆಸಿದರು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 01, 2021 | 4:37 PM

Share

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಸಲು ಉದ್ದೇಶಿರುವ ಧರಣಿಯನ್ನು ಮುಖ್ಯಮಂತ್ರಿ ಭರವಸೆ ಮೇರೆಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟದ ಬಗ್ಗೆ ನನಗೆ ಅರಿವಿದೆ. ಮೀಸಲಾತಿ ಬಗ್ಗೆ ಸರ್ಕಾರ ಆದಷ್ಟು ಬೇಗ ಪ್ರಕ್ರಿಯೆ ಆರಂಭಿಸುತ್ತದೆ. ಮೀಸಲಾತಿ ನೀಡುವ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಇದೀಗ ರಾಜ್ಯಗಳಿಗೆ ಕೊಡಲಾಗಿದೆ. ಮೀಸಲಾತಿ ಒದಗಿಸುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸುವ ಕುರಿತು ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಮಾಹಿತಿ ನೀಡಿರುವೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಅಗತ್ಯ ಕ್ರಮ ಜರುಗಿಸಲಾಗುವುದು. ಸ್ವಾಮೀಜಿ ಸತ್ಯಾಗ್ರಹ ಕೈಬಿಟ್ಟಿರುವ ಬಗ್ಗೆ ಮಾಧ್ಯಮಗಳಿಂದಲೇ ಗೊತ್ತಾಗಿದ್ದು ಎಂದು ತಿಳಿಸಿದರು.

ಬಿಜೆಪಿ ಕರ್ನಾಟಕ ಘಟಕದ ಕೋರ್ ಕಮಿಟಿ ಸಭೆಯ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಾಡಿದ್ದು (ಅ.3) ರಾಜ್ಯಕ್ಕೆ ಬರುತ್ತಿದ್ದಾರೆ. ಅವರ ಸಮಕ್ಷಮ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಸಿ.ಸಿ.ಪಾಟೀಲ ಪಂಚಮಸಾಲಿ ಸಮುದಾಯದ ಸಮಾವೇಶದಲ್ಲಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ, ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದ ಬಗ್ಗೆ ಸರ್ಕಾರಕ್ಕೆ ಬದ್ಧತೆಯಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ತಕ್ಷಣ ಮೀಸಲಾತಿ ನಿರ್ಧಾರವನ್ನು ಜಾರಿಗೊಳಿಸಲಾಗುವುದು. ಮುಖ್ಯಮಂತ್ರಿಗಳೇ ಈ ಬಗ್ಗೆ ಭರವಸೆ ನೀಡಿದ್ದಾರೆ. ಮೀಸಲಾತಿ ಸಿಗುವ ದಿನ ಬರುತ್ತೆದೆ. ಆ ಬಗ್ಗೆ ವಿಶ್ವಾಸ ಇರಬೇಕು ಎಂದು ಸಲಹೆ ಮಾಡಿದರು.

ಸತ್ಯಾಗ್ರಹ ಮುಂದೂಡಲು ಸಮುದಾಯದ ನಾಯಕರು ಗಮನ ಹರಿಸಬೇಕು ಎಂದು ಮನವಿ ಮಾಡಿದ ಅವರು, ಹೋರಾಟ ಇರಲಿ, ಸತ್ಯಾಗ್ರಹ ಬೇಡ. ಒಳ್ಳೆಯ ದಿನಗಳು ಬರುತ್ತವೆ. ಆಶಾಭಾವನೆ ಜತೆ ಸತ್ಯಾಗ್ರಹ ಕೈಬಿಡಲು ಮನವಿ ಮಾಡುತ್ತೇನೆ ಎಂದು ವಿನಂತಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ವಾಮೀಜಿಗಳ ಜೊತೆ ಸಭೆ ನಡೆಸಿದ್ದರು. ಬೊಮ್ಮಾಯಿ ಅವರಷ್ಟು ಸುದೀರ್ಘ ಚರ್ಚೆ ಈವರೆಗೂ ಯಾವ ಮುಖ್ಯಮಂತ್ರಿಯೂ ನಡೆಸಿಲ್ಲ. ಇಷ್ಟುದಿನ ಮೀಸಲಾತಿ ಕೇಂದ್ರ ಸರ್ಕಾರ ನೀಡ್ತಿತ್ತು. ಆದರೆ ಈಗ ಮೀಸಲಾತಿ ನೀಡುವ ಅಧಿಕಾರ ರಾಜ್ಯಕ್ಕೆ ಸಿಕ್ಕಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ತಕ್ಷಣ ಮುಖ್ಯಮಂತ್ರಿಗಳು ಮೀಸಲಾತಿ ನಿರ್ಧಾರವನ್ನು ಜಾರಿ ಮಾಡುತ್ತಾರೆ. ಮೀಸಲಾತಿ ಸಿಗುವ ದಿನ ಬಂದೇ ಬರುತ್ತೆ. ಆ ಬಗ್ಗೆ ವಿಶ್ವಾಸ ಇರಲಿ. ನಾಳೆಯಿಂದ ಆರಂಭ ಮಾಡಬೇಕು ಎಂದುಕೊಂಡಿರುವ ಸತ್ಯಾಗ್ರಹ ಮುಂದೂಡಬೇಕೆಂದ ಮನವಿ ಮಾಡುತ್ತೇನೆ ಎಂದರು.

ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವ ಮಾಜಿ ಸಚಿವ ವಿನಯ್​ ಕುಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನರ್​ ಪಾಲ್ಗೊಂಡಿದ್ದರು.

(Panchamasali Reservation Agitation Postponed on Assurance of CM Basavaraj Bommai)

ಇದನ್ನೂ ಓದಿ: ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಸರ್ಕಾರ ಮರೆತಿದೆ ಎಂದ ಜಯಮೃತ್ಯುಂಜಯ ಸ್ವಾಮೀಜಿ, ನೆನಪಿದೆ ಎಂದ ಮುರುಗೇಶ್ ನಿರಾಣಿ

ಇದನ್ನೂ ಓದಿ: ಪಂಚಮಸಾಲಿ ಸೇರಿ 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಸದ್ಯದಲ್ಲೇ ಸರ್ಕಾರಕ್ಕೆ ಶಿಫಾರಸು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ