AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಮೇಲೆ ಹಲ್ಲೆ: ಐವರ ವಿರುದ್ಧ ಎಫ್ಐಆರ್!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡರ್ ಮಂಜುನಾಥ್ ಮೇಲೆ ಐವರು ಕೈದಿಗಳು ಭೀಕರ ಹಲ್ಲೆ ನಡೆಸಿದ್ದಾರೆ. ಹೆಚ್ಚುವರಿ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಅನೆಕ್ಸ್-1 ಕಟ್ಟಡದ ಕೊಠಡಿಗೆ ಎಳೆದುಕೊಂಡು ಹೋಗಿ ರಕ್ತ ಬರುವಂತೆ ಥಳಿಸಲಾಗಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್ ಸೇರಿದಂತೆ ಐವರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಮೇಲೆ ಹಲ್ಲೆ: ಐವರ ವಿರುದ್ಧ ಎಫ್ಐಆರ್!
ಪರಪ್ಪನ ಅಗ್ರಹಾರImage Credit source: Deccan herald
ರಾಮು, ಆನೇಕಲ್​
| Edited By: |

Updated on: Sep 05, 2026 | 7:48 AM

Share

ಮುಖ್ಯಾಂಶಗಳು

  • ಪರಪ್ಪನ ಅಗ್ರಹಾರದಲ್ಲಿ ವಾರ್ಡರ್ ಮಂಜುನಾಥ್ ಮೇಲೆ ಕೈದಿಗಳಿಂದ ಭೀಕರ ಹಲ್ಲೆ.
  • ಹೆಚ್ಚುವರಿ ವಸ್ತು ತಡೆದಿದ್ದಕ್ಕೆ ಜೈಲು ವಾರ್ಡರ್ ಮೇಲಿನ ಹಳೆ ದ್ವೇಷ.
  • ಹಲ್ಲೆ ನಡೆಸಿದ ಐವರು ಕೊಲೆ ಕೇಸ್ ಆರೋಪಿಗಳ ವಿರುದ್ಧ ಎಫ್‌ಐಆರ್.

ಬೆಂಗಳೂರು, ಸೆಪ್ಟೆಂಬರ್ 05: ಪರಪ್ಪನ ಅಗ್ರಹಾರ ಮಧ್ಯವರ್ತಿ ಕಾರಾಗೃಹದಲ್ಲಿ ಕೈದಿಗಳ ಅಟ್ಟಹಾಸ ಮಿತಿಮೀರಿದ್ದು, ಸಿಬ್ಬಂದಿಯೇ ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಜೈಲಿನಲ್ಲಿ ಕೈದಿಗಳ ನಿಯಂತ್ರಣವೇ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು,  ಜೈಲು ವಾರ್ಡರ್ ಮಂಜುನಾಥ್ ಹವೇಲಿ ಅವರ ಮೇಲೆ ನಡೆದ ಭೀಕರ ಹಲ್ಲೆ ನಡೆದಿದೆ. ಈ ಹಿನ್ನೆಲೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಘಟನೆಯ ಹಿನ್ನೆಲೆ

ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಆಗಸ್ಟ್ 22 ರಂದು ಪರಪ್ಪನ ಅಗ್ರಹಾರದ ‘ಅನೆಕ್ಸ್-1’ ಕಟ್ಟಡಕ್ಕೆ ವರ್ಗಾಯಿಸಲಾಗಿತ್ತು. ಆ ವೇಳೆ ಆರೋಪಿಗಳು ತಮ್ಮೊಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವಸ್ತುಗಳನ್ನು ಜೈಲಿನೊಳಗೆ ತೆಗೆದುಕೊಂಡು ಹೋಗಲು ಯತ್ನಿಸಿದ್ದರು. ಆದರೆ ಜೈಲು ವಾರ್ಡರ್ ಮಂಜುನಾಥ್ ಅವರು ಕಾನೂನಿನಂತೆ ಆ ಹೆಚ್ಚುವರಿ ವಸ್ತುಗಳನ್ನು ಒಳಗೆ ಬಿಡದೆ ತಡೆದಿದ್ದರು. ಇದೇ ವಿಷಯವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆರೋಪಿಗಳು ಮಂಜುನಾಥ್ ವಿರುದ್ಧ ವೈಷಮ್ಯ ಬೆಳೆಸಿಕೊಂಡಿದ್ದರು.

ಕೊಠಡಿಗೆ ಎಳೆದೊಯ್ದು ಹಲ್ಲೆ

ಸೆಪ್ಟೆಂಬರ್ 2 ರಂದು ಆರೋಪಿಗಳ ವಿಡಿಯೋ ಕಾನ್ಫರೆನ್ಸ್ (VC) ಹಾಜರಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲು ವಾರ್ಡರ್ ಮಂಜುನಾಥ್ ಅವರು ಅನೆಕ್ಸ್-1 ಕಟ್ಟಡಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಆರೋಪಿ ಮೊಹಮ್ಮದ್ ಮುಜಾಮಿಲ್ ಹಳೆಯ ದ್ವೇಷವನ್ನು ಮುಂದಿಟ್ಟುಕೊಂಡು ವಾರ್ಡರ್ ಜೊತೆ ವಾಗ್ವಾದ ನಡೆಸಿದ್ದಾನೆ. ಹಠಾತ್ತನೆ ಮಂಜುನಾಥ್ ಅವರ ಮುಖ ಹಾಗೂ ಮೂಗಿಗೆ ಮುಷ್ಠಿಯಿಂದ ಬಲವಾಗಿ ಗುದ್ದಿ ರಕ್ತ ಬರುವಂತೆ ಗಾಯಗೊಳಿಸಿದ್ದಾನೆ. ತಕ್ಷಣವೇ ಆತನ ಸಹಚರರು ಕೈಜೋಡಿಸಿ, ಮಂಜುನಾಥ್ ಅವರನ್ನು ಕೊಠಡಿ ಸಂಖ್ಯೆ 4 ಕ್ಕೆ ಎಳೆದುಕೊಂಡು ಹೋಗಿ ಮನಸೋಇಚ್ಛೆ ಥಳಿಸಿದ್ದಾರೆ.

ಇದನ್ನೂ ಓದಿ ಪರಪ್ಪನ ಅಗ್ರಹಾರದಲ್ಲಿ ಜೈಲು ಬಂಧಿಗಳ ಪುಂಡಾಟ: ವಾರ್ಡರ್​​ ಕೊಲೆಗೆ ಯತ್ನ

ಐವರು ಆರೋಪಿಗಳ ವಿರುದ್ಧ FIR ದಾಖಲು

ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಗನ್ (ಶಫ್ವಾನ್), ಮೊಹಮ್ಮದ್ ರಿಜ್ವಾನ್, ನಿಯಾಜ್ (ನಯಾಜ್), ಕಲಂದರ್ ಶಫಿ ವಿರುದ್ಧ ಕೊಲೆ ಯತ್ನ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳ ಅಡಿಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಘಟನೆಯ ಬಳಿಕ ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಾರ್ಡರ್ ಅವರನ್ನು ರಕ್ಷಿಸಿದ್ದು, ಜೈಲಿನ ಆಡಳಿತ ವ್ಯವಸ್ಥೆ ಮತ್ತು ಭದ್ರತೆಯ ಬಗ್ಗೆ ಸಾರ್ವಜನಿಕವಾಗಿ ತೀವ್ರ ಕಳವಳ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!