AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆಯ ಅಕ್ರಮ ಹೆಚ್ಚಿದ್ದು, ಮೊಬೈಲ್ ವಶಕ್ಕೆ ಮುಂದಾದ ಸಿಬ್ಬಂದಿಗೆ ಕೈದಿಗಳು ಜೀವ ಬೆದರಿಕೆ ಹಾಕಿದ್ದಾರೆ. ಹತ್ತು ದಿನಗಳಲ್ಲಿ 21 ಮೊಬೈಲ್‌ಗಳು ಪತ್ತೆಯಾಗಿದ್ದು, ಇವುಗಳನ್ನು ಒಳಚರಂಡಿ ಪೈಪ್‌ಗಳಲ್ಲಿ ಬಚ್ಚಿಡಲಾಗಿತ್ತು ಎಂದು ಹೇಳಲಾಗಿದೆ. ಜಾಮರ್ ವ್ಯವಸ್ಥೆ ಇದ್ದರೂ ನೆಟ್‌ವರ್ಕ್ ಸಿಗುತ್ತಿರುವುದು ಆತಂಕ ಮೂಡಿಸಿದ್ದು, ಜೈಲರ್ ಮತ್ತು ವಾರ್ಡನ್‌ಗಳ ಶಾಮೀಲು ಬಗ್ಗೆ ಡಿಜಿಪಿ ಅಸಮಾಧಾನ ವ್ಯಕ್ತಪಡಿಸಿ ತನಿಖೆಗೆ ಆದೇಶಿಸಿದ್ದಾರೆ.

'ಸ್ಮಶಾನಕ್ಕೆ ಕಳುಹಿಸುತ್ತೇವೆ': ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!
ಜೈಲಿನ ಕೈದಿಗಳು ಅಡಗಿಸಿಟ್ಟ ಮೊಬೈಲ್
ಪ್ರದೀಪ್​ ಚಿಕ್ಕಾಟಿ
| Edited By: |

Updated on: Mar 31, 2026 | 8:49 AM

Share

ಬೆಂಗಳೂರು, ಮಾರ್ಚ್​ 31: ಇತ್ತೀಚೆಗೆ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾನುವಾರ ಬೆಳಕಿಗೆ ಬಂದ ಬೆನ್ನಲ್ಲೇ ಹಲವು ಮೊಬೈಲ್ ಫೋನ್​ಗಳನ್ನು ಡ್ರೈನೇಜ್ ಮಾರ್ಗದಲ್ಲಿ ಬಚ್ಚಿಟ್ಟಿದ್ದೂ ತಿಳಿದು ಬಂದಿತ್ತು. ಕಟ್ಟುನಿಟ್ಟಿನ ನಿಯಮಗಳಿದ್ದರೂ ಈ ರೀತಿಯ ಅಕ್ರಮ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಈ ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲು ಮುಂದಾದ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವುದೂ ತಿಳಿದುಬಂದಿದೆ.

ಹತ್ತು ದಿನಗಳಲ್ಲಿ 21 ಮೊಬೈಲ್ ಪತ್ತೆ, ಡಿಜಿಪಿ ಅಸಮಾಧಾನ

ಕಳೆದ ಹತ್ತು ದಿನಗಳಲ್ಲಿ ಜೈಲು ಅಧಿಕಾರಿಗಳು 21 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ, ಬಹುತೇಕ ಫೋನ್‌ಗಳನ್ನು ಹಾಲಿನ ಕವರ್‌ಗಳಲ್ಲಿ ಮೊಬೈಲ್‌ಗಳನ್ನು ಪ್ಯಾಕ್ ಮಾಡಿ ಕೊಳಚೆ ನೀರು ಹರಿಯುವ ಪೈಪ್‌ಗಳಲ್ಲಿ ಮರೆಮಾಚಿ ಇಟ್ಟಿರುವುದು ಪತ್ತೆಯಾಗಿದೆ. ಜೈಲಿನೊಳಗೆ ಜಾಮರ್ ವ್ಯವಸ್ಥೆ ಇದ್ದರೂ ನೆಟ್‌ವರ್ಕ್ ಸಿಗುತ್ತಿರುವುದರ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಜೈಲರ್‌ಗಳು ಹಾಗೂ ವಾರ್ಡರ್‌ಗಳ ಶಾಮೀಲು ಇರುವ ಶಂಕೆ ವ್ಯಕ್ತವಾಗಿದ್ದು, ಎಲ್ಲರ ಮೇಲೂ ವಿಚಾರಣೆ ನಡೆಸಲು ಸೂಚಿಸಲಾಗಿದೆ. ಎಸ್‌ಪಿ ಅಂಶುಕುಮಾರ್ ನೇತೃತ್ವದಲ್ಲಿ ಕೆಲ ಅನುಮಾನಿತ ವಾರ್ಡರ್‌ಗಳನ್ನು ವಿಚಾರಣೆಗೊಳಪಡಿಸಲಾಗಿದೆ.

ಇದನ್ನೂ ಓದಿ ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈದಿಗಳು!

ಬೆದರಿಕೆ ಹಾಕಿದವರ ವಿರುದ್ಧ ಕೇಸ್

ಮೊಬೈಲ್ ವಶಕ್ಕೆ ಪಡೆಯಲು ಮುಂದಾದ ಜೈಲು ಸಿಬ್ಬಂದಿಗೆ ಕೆಲವು ಕೈದಿಗಳು ಜೀವ ಬೆದರಿಕೆ ಹಾಕಿರುವ ಘಟನೆ ಕೂಡ ನಡೆದಿದೆ. ರಿಜ್ವಾನ್ ಅಲಿ ಮತ್ತು ಮೊಹಮ್ಮದ್ ಸಾಧಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮನೆಗೆ ಹೋಗುವುದಿಲ್ಲ, ಸ್ಮಶಾನಕ್ಕೆ ಕಳುಹಿಸುತ್ತೇವೆ ಎಂದು ಬೆದರಿಕೆ ಹಾಕಿದ ಆರೋಪ ಇದೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ