AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ತಡೆಗೆ ದಿಟ್ಟ ನಿರ್ಧಾರ; ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ IPS ಅಧಿಕಾರಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಐಷಾರಾಮಿ ಜೀವನದ ವೀಡಿಯೋ ವೈರಲ್ ಆದ ನಂತರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಸೆಂಟರ್ ಜೈಲು ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿ ನೇಮಕ ಮಾಡಲಿದೆ. ಸಿಸಿಟಿವಿ, ಜಾಮರ್ ಅಳವಡಿಕೆ, ಪ್ರತಿದಿನ ಮೂರು ಬಾರಿ ತಪಾಸಣೆ, ಹಾಗೂ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿಪಡಿಸುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲು ಯೋಚಿಸಿದೆ.

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ತಡೆಗೆ ದಿಟ್ಟ ನಿರ್ಧಾರ; ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ IPS ಅಧಿಕಾರಿ
ಪರಪ್ಪನ ಅಗ್ರಹಾರ ಜೈಲಿನ ಚೀಫ್ ಸೂಪರಿಂಟೆಂಡೆಂಟ್ ಆಗಿ IPS ಅಧಿಕಾರಿ ನೇಮಕ
Shivaprasad B
| Updated By: ಭಾವನಾ ಹೆಗಡೆ|

Updated on: Nov 28, 2025 | 8:29 AM

Share

ಬೆಂಗಳೂರು, ನವೆಂಬರ್ 28: ಪರಪ್ಪನ ಅಗ್ರಹಾರದಲ್ಲಿ (Parappana Agrahara) ಕೈದಿಗಳ ಐಷಾರಾಮಿ ಜೀವನದ ವೀಡಿಯೋಗಳು ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗುರಿಯಾಗಿತ್ತು. ಈ ಪ್ರಕರಣದಲ್ಲಿ ಉನ್ನತಮಟ್ಟದ ಸಮಿತಿ ತನಿಖೆ ನಡೆಸುತ್ತಿರುವುದರ ಜೊತೆಗೆ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಸರ್ಕಾರ ಯೋಚಿಸಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಸೆಂಟರ್ ಜೈಲು ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿಗಳ ನೇಮಕಕ್ಕೆ ನಿರ್ಧರಿಸಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ ತಡೆಗೆ ದಿಟ್ಟ ಕ್ರಮ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸರಣಿ ಕೊಲೆ ಪಾತಕಿ ಉಮೇಶ್ ರೆಡ್ಡಿ, ಐಎಸ್ ಸಂಘಟನೆಯ ಉಗ್ರ ಜುಹಾದ್, ದುಬೈನಿಂದ ಚಿನ್ನ ಕಳ್ಳಸಾಗಣೆ ಆರೋಪಿ ತರುಣ್ ರಾಜ್ ಜೈಲಿನ ಬ್ಯಾರಕ್‌ನಲ್ಲಿ ಮೊಬೈಲ್‌ ಹಿಡಿದು ಮಾತನಾಡುತ್ತಿರುವ, ಟಿ.ವಿ ವೀಕ್ಷಿಸುತ್ತಿರುವ ವಿಡಿಯೊಗಳು ಇತ್ತೀಚೆಗಷ್ಟೇ ಹರಿದಾಡಿದ್ದವು. ಮಾಂಸ, ಮದ್ಯ ಸೇವಿಸಿ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳು ನೃತ್ಯ ಮಾಡುತ್ತಿರುವ ವಿಡಿಯೊ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಪ್ರಕರಣದ ಬಗ್ಗೆ ಈಗಾಗಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ನೇತೃತ್ವದ ಉನ್ನತಮಟ್ಟದ ಸಮಿತಿ ತನಿಖೆ ನಡೆಸುತ್ತಿದೆ. ಈ ನಡುವೆ ಪರಪ್ಪನ ಅಗ್ರಹಾರ ಜೈಲಿನ ಅಕ್ರಮಗಳನ್ನು ತಡೆಯಲು ಮುಂದಾಗಿರುವ ಸರ್ಕಾರ, ಇತಿಹಾಸದಲ್ಲೇ ಮೊದಲ ಬಾರಿಗೆ ಸೆಂಟರ್ ಜೈಲು ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿಗಳನ್ನೇ ನೇಮಕ ಮಾಡಲು ನಿರ್ಧರಿಸಿದೆ. ಇದರ ಜೊತೆ ಇನ್ನು ಹತ್ತು ಹಲವು ಸುಧಾರಣಾ ಕ್ರಮಗಳ ಬಗ್ಗೆ ಗೃಹ ಇಲಾಖೆ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಪುನಃ ಅಕ್ರಮ ನಡೆದರೆ ಹಿರಿಯ ಅಧಿಕಾರಿಗಳೇ ಹೊಣೆ

ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿ ನಿಯೋಜ‌ನೆಯ ಜೊತೆಗೆ ದಿನಕ್ಕೊಮ್ಮೆ ರೌಂಡ್ಸ್‌ ಕೈಗೊಳ್ಳುವ ಬದಲು ಇನ್ನು ಮುಂದೆ ಪ್ರತಿದಿನ ಮೂರು ಬಾರಿ ಜೈಲಿನ ಸಿಬ್ಬಂದಿ ಪರಿಶೀಲನೆ ನಡಸಬೇಕು. ಪ್ರತಿ ಬ್ಯಾರಕ್‌ಗಳಲ್ಲೂ ಹೆಚ್ಚೆಚ್ಚು ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಪರಿಣಾಮಕಾರಿಯಾಗಿ ಜಾಮರ್ ವ್ಯವಸ್ಥೆ ಅಳವಡಿಸಲಾಗಿದೆ. ಬ್ಯಾರಕ್ ಸುತ್ತ-ಮುತ್ತ ಸಿಗ್ನಲ್ ಮುಕ್ತ ವಲಯಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೈದಿಗಳ ಮೇಲೆ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಲಿದ್ದು, ಪುನಃ ಅಕ್ರಮ ನಡೆದರೆ ಹಿರಿಯ ಅಧಿಕಾರಿಗಳೇ ನೇರ ಹೊಣೆಯಾಗಲಿದ್ದಾರೆ.

ಇದನ್ನೂ ಓದಿ ಪರಪ್ಪನ ಅಗ್ರಹಾರ ಜೈಲಲ್ಲ, ಮದ್ಯದ ಫ್ಯಾಕ್ಟರಿ!: ತನಿಖೆ ವೇಳೆ ಶಾಕಿಂಗ್​​ ಮಾಹಿತಿ ಬಹಿರಂಗ

ಜೈಲಿನೊಳಗಿನ ಸಿಬ್ಬಂದಿಗೆ ಬಾಡಿವೋರ್ನ್​ ಕ್ಯಾಮರಾ ಕಡ್ಡಾಯವಾಗಿದೆ. ಅಲ್ಲದೆ ವಿಚಾರಣಾಧೀನ ಮತ್ತು ಸಜಾಬಂಧಿ ಕೈದಿಗಳು ಒಂದೇ ಬ್ಯಾರಕ್‌ನಲ್ಲಿರುವಂತಿಲ್ಲ. ಪುನಃ ಅಕ್ರಮ ನಡೆದರೆ ಹಿರಿಯ ಅಧಿಕಾರಿಗಳೇ ನೇರ ಹೊಣೆ ಅಥವಾ ಎರಡು ಬಾರಿ ಹಿರಿಯ ಅಧಿಕಾರಿಗಳು ಕಾರಾಗೃಹ ಭೇಟಿ ಕೈಗೊಳ್ಳಬೇಕು. ಪ್ರಧಾನ ಕಚೇರಿಗೆ ಸಿಸಿಟಿವಿ ದೃಶ್ಯ ಮತ್ತು ಮಾಹಿತಿ ಲಭ್ಯವಾಗುವಂತೆ ಕ್ರಮಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ