AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗ್​ ಬೇಕ್ರೀ ನಿಮ್ ಪರಿಹಾರ: ಹೈಟೆನ್ಷನ್ ವೈರ್ ತಗುಲಿ ಬಾಲಕರ ಸಾವು ಪ್ರಕರಣ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಮಕ್ಕಳ ಸಾವಿಗೆ ಕೇವಲ ಬೆಸ್ಕಾಂ ಅಷ್ಟೇ ಕಾರಣವಲ್ಲ. ಬಿಬಿಎಂಪಿ ಕೂಡ ಕಾರಣವಾಗಿದೆ. ಹೈಟೆನ್ಷನ್ ವೈರ್ ಕೆಳಗೆ ಮನೆ ಕಟ್ಟಲು ಬಿಬಿಎಂಪಿ ಅಧಿಕಾರಿಗಳು ಅನುಮತಿ ನೀಡಿದ್ದು ಹೇಗೆ ಎಂದು ಪ್ರತಿಭಟನಾನಿರತರು ಪ್ರಶ್ನಿಸಿದರು.

ಯಾರಿಗ್​ ಬೇಕ್ರೀ ನಿಮ್ ಪರಿಹಾರ: ಹೈಟೆನ್ಷನ್ ವೈರ್ ತಗುಲಿ ಬಾಲಕರ ಸಾವು ಪ್ರಕರಣ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಎಲೆಕ್ಟ್ರಿಕ್ ಶಾಕ್​ನಿಂದ ಮೃತಪಟ್ಟ ಬಾಲಕರು
TV9 Web
| Edited By: |

Updated on:Dec 09, 2022 | 3:18 PM

Share

ಬೆಂಗಳೂರು: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿದ ಪ್ರಕರಣವು ಸಾರ್ವಜನಿಕರಲ್ಲಿ ಆಕ್ರೋಶ ಹೆಚ್ಚಿಸಿದೆ. ಈ ಸಂಬಂಧ ನಗರದ ಮಹಾಲಕ್ಷ್ಮೀ ಲೇಔಟ್ ಬಿಬಿಎಂಪಿ ಕಚೇರಿ ಎದುರು ಪೋಷಕರು, ಸಾರ್ವಜನಿಕರು ಹಾಗೂ ಜಯಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಶುಕ್ರವಾರ (ಡಿ 9) ಪ್ರತಿಭಟನೆ ನಡೆಸಿದರು. ಮಕ್ಕಳ ಸಾವಿಗೆ ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳೇ ನೇರ ಹೊಣೆ. ಹೈಟೆನ್ಷನ್ ವೈರ್ ಕೆಳಗೆ ಮನೆ ಕಟ್ಟಲು ಹೇಗೆ ಅವಕಾಶ ನೀಡಿದ್ದು ಹೇಗೆ? ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಿದ್ದಾದರೂ ಹೇಗೆ? ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನಂದಿನಿ ಬಡಾವಣೆಯಲ್ಲಿ ಹೈಟೆನ್ಷನ್ ವೈರ್ ಸ್ಪರ್ಶವಾಗಿದ್ದರಂತೆ ಚಂದ್ರು ಮತ್ತು ಸುಪ್ರೀತ್ ಎಂಬ ಬಾಲಕರು ಇತ್ತೀಚೆಗೆ ಸಾವನ್ನಪ್ಪಿದ್ದರು. ಮಕ್ಕಳ ಸಾವಿಗೆ ಕೇವಲ ಬೆಸ್ಕಾಂ ಅಷ್ಟೇ ಕಾರಣವಲ್ಲ. ಬಿಬಿಎಂಪಿ ಕೂಡ ಕಾರಣವಾಗಿದೆ. ಹೈಟೆನ್ಷನ್ ವೈರ್ ಕೆಳಗೆ ಮನೆ ಕಟ್ಟಲು ಬಿಬಿಎಂಪಿ ಅಧಿಕಾರಿಗಳು ಅನುಮತಿ ನೀಡಿದ್ದು ಹೇಗೆ? ಮಕ್ಕಳ ಸಾವಿಗೆ ನ್ಯಾಯ ಸಿಗಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಮೃತ ಬಾಲಕ ಸುಪ್ರೀತ್ ತಾಯಿ ಮಾತನಾಡಿ, ನನ್ನ ಮಗನಿಗೆ ಆದ ಪರಿಸ್ಥಿತಿ ಯಾರಿಗೂ ಆಗಬಾರದು. ಹೈಟೆನ್ಷನ್​ ತಂತಿ ಇರುವ ಕಡೆ ಕಟ್ಟಡ ನಿರ್ಮಿಸಲಾಗಿದೆ. ಮನೆಗಳ ಬಳಿ ಇರುವ ಹೈಟೆನ್ಷನ್​ ವೈರ್ ತೆರವು ಮಾಡಬೇಕು. ಇಲ್ಲದಿದ್ದರೆ ಬಿಬಿಎಂಪಿ, ಬೆಸ್ಕಾಂ ಕಚೇರಿ ಬಳಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದರು.

ಈ ವೇಳೆ ಸ್ಥಳಕ್ಕೆ ಬಂದ ಬಿಬಿಎಂಪಿ ಎಕ್ಸಿಕ್ಯುಟಿವ್ ಎಂಜಿನಿಯರ್ ತಿಮ್ಮರಸು​ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸಮರ್ಪಕ ಉತ್ತರ ನೀಡದಿದ್ದರೆ ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳನ್ನು ಕಚೇರಿಯಿಂದ ಹೊರಗೆ ಬರಲು ಬಿಡದೆ ದಿಗ್ಬಂಧನ ಹಾಕಲಾಗುವುದು. ಸ್ಥಳಕ್ಕೆ ಬಂದು ಮನವಿ ತೆಗೆದುಕೊಳ್ಳದಿದ್ದರೆ ಹೋರಾಟವು ಉಗ್ರರೂಪ ತಳೆಯಲಿದೆ ಎಂದು ಎಚ್ಚರಿಸಿದರು. ಮೃತಮಟ್ಟ ಮಕ್ಕಳ ಪೋಷಕರಿಗೆ ₹ 50 ಸಾವಿರ ಪರಿಹಾರ ನೀಡಲಾಗಿದೆ ಎಂಬ ಅಧಿಕಾರಿಗಳ ಉತ್ತರವೂ ಪೋಷಕರನ್ನು ಕೆರಳಿಸಿತು. ‘ನಿಮ್ 50 ಸಾವಿರ ಪರಿಹಾರ ಯಾರಿಗ್​ರೀ ಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಎರಡು ಸಾವು ಸಂಭವಿಸಿದ ನಂತರ ಕನಿಷ್ಠ ಪಕ್ಷ ಮಾನವೀಯತೆಗಾದರೂ ನೀವು ಹೋಗಿಲ್ಲ’ ಎಂದು ಪ್ರತಿಭಟನಾನಿರತರು ಬೇಸರ ವ್ಯಕ್ತಪಡಿಸಿದರು. ‘ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ. ನಿಮಗೆ ಯಾರ ಮೇಲಾದರೂ ಅನುಮಾನವಿದ್ದರೆ ದೂರುಕೊಡಿ. ತನಿಖೆ ಮಾಡಿಸುತ್ತೇವೆ’ ಎಂದು ಬಿಬಿಎಂಪಿ ಎಂಜಿನಿಯರ್ ತಿಮ್ಮರಸು ಪ್ರತಿಭಟನಾನಿರತರನ್ನು ಕೋರಿದರು.

ಇದನ್ನೂ ಓದಿ: Bengaluru: ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Fri, 9 December 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್