AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗ್​ ಬೇಕ್ರೀ ನಿಮ್ ಪರಿಹಾರ: ಹೈಟೆನ್ಷನ್ ವೈರ್ ತಗುಲಿ ಬಾಲಕರ ಸಾವು ಪ್ರಕರಣ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಮಕ್ಕಳ ಸಾವಿಗೆ ಕೇವಲ ಬೆಸ್ಕಾಂ ಅಷ್ಟೇ ಕಾರಣವಲ್ಲ. ಬಿಬಿಎಂಪಿ ಕೂಡ ಕಾರಣವಾಗಿದೆ. ಹೈಟೆನ್ಷನ್ ವೈರ್ ಕೆಳಗೆ ಮನೆ ಕಟ್ಟಲು ಬಿಬಿಎಂಪಿ ಅಧಿಕಾರಿಗಳು ಅನುಮತಿ ನೀಡಿದ್ದು ಹೇಗೆ ಎಂದು ಪ್ರತಿಭಟನಾನಿರತರು ಪ್ರಶ್ನಿಸಿದರು.

ಯಾರಿಗ್​ ಬೇಕ್ರೀ ನಿಮ್ ಪರಿಹಾರ: ಹೈಟೆನ್ಷನ್ ವೈರ್ ತಗುಲಿ ಬಾಲಕರ ಸಾವು ಪ್ರಕರಣ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಎಲೆಕ್ಟ್ರಿಕ್ ಶಾಕ್​ನಿಂದ ಮೃತಪಟ್ಟ ಬಾಲಕರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 09, 2022 | 3:18 PM

Share

ಬೆಂಗಳೂರು: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಸಾವನ್ನಪ್ಪಿದ ಪ್ರಕರಣವು ಸಾರ್ವಜನಿಕರಲ್ಲಿ ಆಕ್ರೋಶ ಹೆಚ್ಚಿಸಿದೆ. ಈ ಸಂಬಂಧ ನಗರದ ಮಹಾಲಕ್ಷ್ಮೀ ಲೇಔಟ್ ಬಿಬಿಎಂಪಿ ಕಚೇರಿ ಎದುರು ಪೋಷಕರು, ಸಾರ್ವಜನಿಕರು ಹಾಗೂ ಜಯಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಶುಕ್ರವಾರ (ಡಿ 9) ಪ್ರತಿಭಟನೆ ನಡೆಸಿದರು. ಮಕ್ಕಳ ಸಾವಿಗೆ ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳೇ ನೇರ ಹೊಣೆ. ಹೈಟೆನ್ಷನ್ ವೈರ್ ಕೆಳಗೆ ಮನೆ ಕಟ್ಟಲು ಹೇಗೆ ಅವಕಾಶ ನೀಡಿದ್ದು ಹೇಗೆ? ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಿದ್ದಾದರೂ ಹೇಗೆ? ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನಂದಿನಿ ಬಡಾವಣೆಯಲ್ಲಿ ಹೈಟೆನ್ಷನ್ ವೈರ್ ಸ್ಪರ್ಶವಾಗಿದ್ದರಂತೆ ಚಂದ್ರು ಮತ್ತು ಸುಪ್ರೀತ್ ಎಂಬ ಬಾಲಕರು ಇತ್ತೀಚೆಗೆ ಸಾವನ್ನಪ್ಪಿದ್ದರು. ಮಕ್ಕಳ ಸಾವಿಗೆ ಕೇವಲ ಬೆಸ್ಕಾಂ ಅಷ್ಟೇ ಕಾರಣವಲ್ಲ. ಬಿಬಿಎಂಪಿ ಕೂಡ ಕಾರಣವಾಗಿದೆ. ಹೈಟೆನ್ಷನ್ ವೈರ್ ಕೆಳಗೆ ಮನೆ ಕಟ್ಟಲು ಬಿಬಿಎಂಪಿ ಅಧಿಕಾರಿಗಳು ಅನುಮತಿ ನೀಡಿದ್ದು ಹೇಗೆ? ಮಕ್ಕಳ ಸಾವಿಗೆ ನ್ಯಾಯ ಸಿಗಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಮೃತ ಬಾಲಕ ಸುಪ್ರೀತ್ ತಾಯಿ ಮಾತನಾಡಿ, ನನ್ನ ಮಗನಿಗೆ ಆದ ಪರಿಸ್ಥಿತಿ ಯಾರಿಗೂ ಆಗಬಾರದು. ಹೈಟೆನ್ಷನ್​ ತಂತಿ ಇರುವ ಕಡೆ ಕಟ್ಟಡ ನಿರ್ಮಿಸಲಾಗಿದೆ. ಮನೆಗಳ ಬಳಿ ಇರುವ ಹೈಟೆನ್ಷನ್​ ವೈರ್ ತೆರವು ಮಾಡಬೇಕು. ಇಲ್ಲದಿದ್ದರೆ ಬಿಬಿಎಂಪಿ, ಬೆಸ್ಕಾಂ ಕಚೇರಿ ಬಳಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದರು.

ಈ ವೇಳೆ ಸ್ಥಳಕ್ಕೆ ಬಂದ ಬಿಬಿಎಂಪಿ ಎಕ್ಸಿಕ್ಯುಟಿವ್ ಎಂಜಿನಿಯರ್ ತಿಮ್ಮರಸು​ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸಮರ್ಪಕ ಉತ್ತರ ನೀಡದಿದ್ದರೆ ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳನ್ನು ಕಚೇರಿಯಿಂದ ಹೊರಗೆ ಬರಲು ಬಿಡದೆ ದಿಗ್ಬಂಧನ ಹಾಕಲಾಗುವುದು. ಸ್ಥಳಕ್ಕೆ ಬಂದು ಮನವಿ ತೆಗೆದುಕೊಳ್ಳದಿದ್ದರೆ ಹೋರಾಟವು ಉಗ್ರರೂಪ ತಳೆಯಲಿದೆ ಎಂದು ಎಚ್ಚರಿಸಿದರು. ಮೃತಮಟ್ಟ ಮಕ್ಕಳ ಪೋಷಕರಿಗೆ ₹ 50 ಸಾವಿರ ಪರಿಹಾರ ನೀಡಲಾಗಿದೆ ಎಂಬ ಅಧಿಕಾರಿಗಳ ಉತ್ತರವೂ ಪೋಷಕರನ್ನು ಕೆರಳಿಸಿತು. ‘ನಿಮ್ 50 ಸಾವಿರ ಪರಿಹಾರ ಯಾರಿಗ್​ರೀ ಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಎರಡು ಸಾವು ಸಂಭವಿಸಿದ ನಂತರ ಕನಿಷ್ಠ ಪಕ್ಷ ಮಾನವೀಯತೆಗಾದರೂ ನೀವು ಹೋಗಿಲ್ಲ’ ಎಂದು ಪ್ರತಿಭಟನಾನಿರತರು ಬೇಸರ ವ್ಯಕ್ತಪಡಿಸಿದರು. ‘ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ. ನಿಮಗೆ ಯಾರ ಮೇಲಾದರೂ ಅನುಮಾನವಿದ್ದರೆ ದೂರುಕೊಡಿ. ತನಿಖೆ ಮಾಡಿಸುತ್ತೇವೆ’ ಎಂದು ಬಿಬಿಎಂಪಿ ಎಂಜಿನಿಯರ್ ತಿಮ್ಮರಸು ಪ್ರತಿಭಟನಾನಿರತರನ್ನು ಕೋರಿದರು.

ಇದನ್ನೂ ಓದಿ: Bengaluru: ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Fri, 9 December 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?