AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಲ್ಕದ ವಿಚಾರಕ್ಕೆ ಖಾಸಗಿ ಶಾಲೆ, ಪೋಷಕರ ನಡುವೆ ಫೈಟ್! ಬೆಂಗಳೂರಿನಲ್ಲಿ ಮಕ್ಕಳ ಜೊತೆ ಪೋಷಕರ ಪ್ರತಿಭಟನೆ

ಪ್ರತಿಭಟನೆಯಲ್ಲಿ ಪೋಷಕರು ಮತ್ತು ಮಕ್ಕಳು ಕಣ್ಣೀರು ಹಾಕಿದ್ದಾರೆ. ಶಾಲೆ ವಿರುದ್ಧ ಕಿಡಿಕಾರಿರುವ ಪೋಷಕರು, ಮಕ್ಕಳನ್ನು ಹೀಯಾಳಿಸುವುದು, ಹೋಂ ವರ್ಕ್ ವಿಚಾರದಲ್ಲಿ ತಗಾದೆ ತೆಗೆಯುವುದು ಮಾಡುತ್ತಾರೆ.

ಶುಲ್ಕದ ವಿಚಾರಕ್ಕೆ ಖಾಸಗಿ ಶಾಲೆ, ಪೋಷಕರ ನಡುವೆ ಫೈಟ್! ಬೆಂಗಳೂರಿನಲ್ಲಿ ಮಕ್ಕಳ ಜೊತೆ ಪೋಷಕರ ಪ್ರತಿಭಟನೆ
ಶಾಲೆ ಮುಂದೆ ಪ್ರತಿಭಟನೆ ನಡೆಸಿದ ಮಕ್ಕಳು, ಪೋಷಕರು
TV9 Web
| Edited By: |

Updated on:May 11, 2022 | 3:22 PM

Share

ಬೆಂಗಳೂರು: ಖಾಸಗಿ ಶಾಲೆ (Private School) ಮಕ್ಕಳಿಗೆ ಮಾನಸಿಕವಾಗಿ ಚಿತ್ರ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು (Parents) ಇಂದು (ಮೇ 11) ಪ್ರತಿಭಟನೆ ನಡೆಸಿದ್ದಾರೆ. ಲಗ್ಗೆರೆಯ ನಾರಾಯಣ ಇ-ಟೆಕ್ನೊ ಶಾಲೆ ವಿರುದ್ಧ ಪೋಷಕರು ಧರಣಿ ನಡೆಸಿದ್ದಾರೆ. ಪ್ರತಿಭಟಿಸಿದ್ದ ಪೋಷಕರ ಮಕ್ಕಳನ್ನ ಶಾಲೆ ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿರುವ ಪೋಷಕರು, ಬೇರೆ ಮಕ್ಕಳಿಗೆ ಇವರ ಜೊತೆ ಸೇರದಂತೆ ಸೂಚನೆ ನೀಡುತ್ತಾರೆ. ಮಕ್ಕಳಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಇಡೀ ದಿನ ಶಾಲೆಯಲ್ಲಿ ನಿಲ್ಲಿಸಿ ಮಕ್ಕಳಿಗೆ ಶಿಕ್ಷೆ ನೀಡುತ್ತಾರೆ, ಬೈಯ್ಯುತ್ತಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಪ್ರತಿಭಟನೆಯಲ್ಲಿ ಪೋಷಕರು ಮತ್ತು ಮಕ್ಕಳು ಕಣ್ಣೀರು ಹಾಕಿದ್ದಾರೆ. ಶಾಲೆ ವಿರುದ್ಧ ಕಿಡಿಕಾರಿರುವ ಪೋಷಕರು, ಮಕ್ಕಳನ್ನು ಹೀಯಾಳಿಸುವುದು, ಹೋಂ ವರ್ಕ್ ವಿಚಾರದಲ್ಲಿ ತಗಾದೆ ತೆಗೆಯುವುದು ಮಾಡುತ್ತಾರೆ. ಈ ಬಗ್ಗೆ ಚೈಲ್ಡ್ ರೈಟ್ಸ್ ಕಮಿಷನ್​ಗೂ ದೂರು ನೀಡಲಾಗಿದೆ. ಆದರೆ ಶಾಲೆಯ ವಿರುದ್ಧ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಶಾಲಾ ಆವರಣ ಮುಂಭಾಗ ಧರಣಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಮೇ 16ರಿಂದಲೇ ಶಾಲೆ ಆರಂಭ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಮೇ‌ 16ರಿಂದ ಜೂನ್ 15ರವರೆಗೆ, ಒಂದು ತಿಂಗಳ ಅವಧಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಮೇ 16ರಿಂದಲೇ ಮಕ್ಕಳ ದಾಖಲಾತಿ ಆರಂಭಿಸಿ, ಜುಲೈ 31ರೊಳಗೆ ಮುಗಿಸಬೇಕು. ಮೇ 14ರಿಂದ ತರಗತಿ ಆರಂಭಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಮೇ 16ರಿಂದ 20ರವರೆಗೆ ದಾಖಲಾತಿ ಆಂದೋಲನ ನಡೆಸಬೇಕು. ಜೂನ್ 1ರಿಂದ ಕಲಿಕಾ ಚೇತನ ಕಾರ್ಯಕ್ರಮದಡಿ ಪಠ್ಯ ಬೋಧನೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಹೇಳಿದೆ.

ಇದನ್ನೂ ಓದಿ

ಕರುಳ ಬಾಧೆ! ತಾಯಿಯ ಕೊಂದ ವಾಹನದ‌ ಮೇಲೆ ಶತಾಯಗತಾಯ ಸೇಡು ತೀರಿಸಿಕೊಳ್ಳಲು ಹವಣಿಸುವ ಈ ನಾಯಿಯನ್ನ ನೋಡಿ

IPL 2022 playoffs scenarios: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

Published On - 3:19 pm, Wed, 11 May 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು