AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆನ್‌ಲೈನ್ ಕ್ಲಾಸ್‌ನಿಂದ ಶ್ರೀಮಂತರ ಮಕ್ಕಳು ಕಲಿಯುತ್ತಾರೆ, ಬಡವರ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಾರೆ’

ಈಗಿನ ಕೊರೊನಾ ವೈರಸ್ ಬಹಳ ಗಂಭೀರವಾಗಿಲ್ಲ. ಶಾಲೆಗಳಿಗೆ ಬಿಡುವು ಕೊಟ್ಟರೆ ಮಕ್ಕಳ ಬದುಕು‌ ಹಾಳಾಗುತ್ತೆ ಎಂದು ಅಂತರ ಕಾಪಾಡಿಕೊಂಡು ಶಾಲೆ ನಡೆಸಲು ಹೊರಟ್ಟಿ ಸಲಹೆ ನೀಡಿದ್ದಾರೆ.

‘ಆನ್‌ಲೈನ್ ಕ್ಲಾಸ್‌ನಿಂದ ಶ್ರೀಮಂತರ ಮಕ್ಕಳು ಕಲಿಯುತ್ತಾರೆ, ಬಡವರ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಾರೆ’
ಸಭಾಪತಿ ಬಸವರಾಜ ಹೊರಟ್ಟಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jan 15, 2022 | 2:32 PM

Share

ಬೆಂಗಳೂರು: ಆನ್‌ಲೈನ್ ಶಿಕ್ಷಣ ಸರಿಯಲ್ಲ. ಆನ್‌ಲೈನ್ ಶಿಕ್ಷಣ ನಗರ ಪ್ರದೇಶಗಳಿಗೆ ಸೂಕ್ತವಾಗುತ್ತೆ. ಗ್ರಾಮೀಣ ಭಾಗದ ಮಕ್ಕಳಿಗೆ ಇದರಿಂದ ಅನುಕೂಲವಿಲ್ಲ. ನೆಟ್‌ವರ್ಕ್ ಸಮಸ್ಯೆ, ವಿದ್ಯುತ್ ಇರಲ್ಲ, ಮೊಬೈಲ್ ಇರಲ್ಲ. ಹೀಗೆ ಹಲವು ಸಮಸ್ಯೆಗಳು ಇರುವುದರಿಂದ ಸರಿಯಾಗಲ್ಲ. ಆನ್‌ಲೈನ್ ಕ್ಲಾಸ್‌ನಿಂದ ಶ್ರೀಮಂತ ಮಕ್ಕಳು ಕಲಿಯುತ್ತಾರೆ. ಬಡವರ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಾರೆ ಎಂದು ಬೆಂಗಳೂರಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಶನಿವಾರ ಹೇಳಿಕೆ ನೀಡಿದ್ದಾರೆ.

ಕೆಲ ಜಿಲ್ಲೆಗಳಲ್ಲಿ 1ರಿಂದ 9ನೇ ತರಗತಿವರೆಗೆ ರಜೆ ಹಿನ್ನೆಲೆ ರಜೆ ನೀಡಿರುವುದಕ್ಕೆ ಕೂಡ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಈಗಿನ ಕೊರೊನಾ ವೈರಸ್ ಬಹಳ ಗಂಭೀರವಾಗಿಲ್ಲ. ಶಾಲೆಗಳಿಗೆ ಬಿಡುವು ಕೊಟ್ಟರೆ ಮಕ್ಕಳ ಬದುಕು‌ ಹಾಳಾಗುತ್ತೆ ಎಂದು ಅಂತರ ಕಾಪಾಡಿಕೊಂಡು ಶಾಲೆ ನಡೆಸಲು ಹೊರಟ್ಟಿ ಸಲಹೆ ನೀಡಿದ್ದಾರೆ. 1ರಿಂದ 5ನೇ ತರಗತಿವರೆಗೆ ಬೇಕಾದರೆ ಶಾಲೆ ಬಂದ್ ಮಾಡಿ ಎಂದು 6ನೇ ತರಗತಿಯಿಂದ ಶಾಲೆ ಪ್ರಾರಂಭ ಮಾಡಲು ಸಲಹೆ ಕೊಟ್ಟಿದ್ದಾರೆ. ವಿದ್ಯಾಗಮ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗವನ್ನು ಬೇರೆ ಮಾಡಬೇಕು. ವಿಧಾನಸೌಧ ಇರುವುದು ಶಾಸಕಾಂಗಕ್ಕೆ ಮಾತ್ರ. ಕಾರ್ಯಾಂಗ ಎಂ.ಎಸ್. ಬಿಲ್ಡಿಂಗ್‌ಗೆ ಶಿಫ್ಟ್ ಮಾಡಲಿ ಎಂದು ಸಭಾಪತಿ ಹೊರಟ್ಟಿ ಆಗ್ರಹ ವ್ಯಕ್ತಪಡಿಸಿದ್ಧಾರೆ. ನಮಗೆ ಕೊಠಡಿ ನೀಡಿ ಎಂದು ಕೇಳುವ ಪರಿಸ್ಥಿತಿ ಇದೆ. ಡಿಪಿಎಆರ್‌ನವರಿಗೆ ನಾವು ಕೇಳಬೇಕಾಗಿದೆ. ಚಿಕ್ಕ ಕೊಠಡಿಯಲ್ಲಿ 30 ಜನ ಸಿಬ್ಬಂದಿ ಕೂರುತ್ತಾರೆ. ಕೊವಿಡ್ ಸಂದರ್ಭದಲ್ಲಿ ಇದು ಸರಿಯಾಗುತ್ತಾ? ರೂಂ ನೀಡಲು DPAR ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಏನು ಮಾಡುತ್ತಾರೆಂದು ನೋಡಬೇಕಾಗಿದೆ ಎಂದು ಹೊರಟ್ಟಿ ಹೇಳಿದ್ದಾರೆ. ನಾವು ಆರ್ಡರ್ ಮಾಡಬೇಕು ಆದರೆ ಆ ಸ್ಥಿತಿ ಇಲ್ಲ. ನಾವು ಮನವಿ ಮಾಡುವ ಪರಿಸ್ಥಿತಿ ಇದೆ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಆನ್‌ಲೈನ್ ವ್ಯಸನದಿಂದ ಬಾಲಕ ಆತ್ಮಹತ್ಯೆ; ಆನ್‌ಲೈನ್ ಗೇಮ್‌ ನಿಯಂತ್ರಿಸಲು ಕಾನೂನು ರೂಪಿಸಿದ ಮಧ್ಯಪ್ರದೇಶ ಸರ್ಕಾರ

ಇದನ್ನೂ ಓದಿ: ಕೊರೊನಾ ಸೋಂಕು ಹೆಚ್ಚಳ: ಧಾರವಾಡ, ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ