AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆನ್‌ಲೈನ್ ಕ್ಲಾಸ್‌ನಿಂದ ಶ್ರೀಮಂತರ ಮಕ್ಕಳು ಕಲಿಯುತ್ತಾರೆ, ಬಡವರ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಾರೆ’

ಈಗಿನ ಕೊರೊನಾ ವೈರಸ್ ಬಹಳ ಗಂಭೀರವಾಗಿಲ್ಲ. ಶಾಲೆಗಳಿಗೆ ಬಿಡುವು ಕೊಟ್ಟರೆ ಮಕ್ಕಳ ಬದುಕು‌ ಹಾಳಾಗುತ್ತೆ ಎಂದು ಅಂತರ ಕಾಪಾಡಿಕೊಂಡು ಶಾಲೆ ನಡೆಸಲು ಹೊರಟ್ಟಿ ಸಲಹೆ ನೀಡಿದ್ದಾರೆ.

‘ಆನ್‌ಲೈನ್ ಕ್ಲಾಸ್‌ನಿಂದ ಶ್ರೀಮಂತರ ಮಕ್ಕಳು ಕಲಿಯುತ್ತಾರೆ, ಬಡವರ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಾರೆ’
ಸಭಾಪತಿ ಬಸವರಾಜ ಹೊರಟ್ಟಿ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Jan 15, 2022 | 2:32 PM

Share

ಬೆಂಗಳೂರು: ಆನ್‌ಲೈನ್ ಶಿಕ್ಷಣ ಸರಿಯಲ್ಲ. ಆನ್‌ಲೈನ್ ಶಿಕ್ಷಣ ನಗರ ಪ್ರದೇಶಗಳಿಗೆ ಸೂಕ್ತವಾಗುತ್ತೆ. ಗ್ರಾಮೀಣ ಭಾಗದ ಮಕ್ಕಳಿಗೆ ಇದರಿಂದ ಅನುಕೂಲವಿಲ್ಲ. ನೆಟ್‌ವರ್ಕ್ ಸಮಸ್ಯೆ, ವಿದ್ಯುತ್ ಇರಲ್ಲ, ಮೊಬೈಲ್ ಇರಲ್ಲ. ಹೀಗೆ ಹಲವು ಸಮಸ್ಯೆಗಳು ಇರುವುದರಿಂದ ಸರಿಯಾಗಲ್ಲ. ಆನ್‌ಲೈನ್ ಕ್ಲಾಸ್‌ನಿಂದ ಶ್ರೀಮಂತ ಮಕ್ಕಳು ಕಲಿಯುತ್ತಾರೆ. ಬಡವರ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಾರೆ ಎಂದು ಬೆಂಗಳೂರಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಶನಿವಾರ ಹೇಳಿಕೆ ನೀಡಿದ್ದಾರೆ.

ಕೆಲ ಜಿಲ್ಲೆಗಳಲ್ಲಿ 1ರಿಂದ 9ನೇ ತರಗತಿವರೆಗೆ ರಜೆ ಹಿನ್ನೆಲೆ ರಜೆ ನೀಡಿರುವುದಕ್ಕೆ ಕೂಡ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಈಗಿನ ಕೊರೊನಾ ವೈರಸ್ ಬಹಳ ಗಂಭೀರವಾಗಿಲ್ಲ. ಶಾಲೆಗಳಿಗೆ ಬಿಡುವು ಕೊಟ್ಟರೆ ಮಕ್ಕಳ ಬದುಕು‌ ಹಾಳಾಗುತ್ತೆ ಎಂದು ಅಂತರ ಕಾಪಾಡಿಕೊಂಡು ಶಾಲೆ ನಡೆಸಲು ಹೊರಟ್ಟಿ ಸಲಹೆ ನೀಡಿದ್ದಾರೆ. 1ರಿಂದ 5ನೇ ತರಗತಿವರೆಗೆ ಬೇಕಾದರೆ ಶಾಲೆ ಬಂದ್ ಮಾಡಿ ಎಂದು 6ನೇ ತರಗತಿಯಿಂದ ಶಾಲೆ ಪ್ರಾರಂಭ ಮಾಡಲು ಸಲಹೆ ಕೊಟ್ಟಿದ್ದಾರೆ. ವಿದ್ಯಾಗಮ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗವನ್ನು ಬೇರೆ ಮಾಡಬೇಕು. ವಿಧಾನಸೌಧ ಇರುವುದು ಶಾಸಕಾಂಗಕ್ಕೆ ಮಾತ್ರ. ಕಾರ್ಯಾಂಗ ಎಂ.ಎಸ್. ಬಿಲ್ಡಿಂಗ್‌ಗೆ ಶಿಫ್ಟ್ ಮಾಡಲಿ ಎಂದು ಸಭಾಪತಿ ಹೊರಟ್ಟಿ ಆಗ್ರಹ ವ್ಯಕ್ತಪಡಿಸಿದ್ಧಾರೆ. ನಮಗೆ ಕೊಠಡಿ ನೀಡಿ ಎಂದು ಕೇಳುವ ಪರಿಸ್ಥಿತಿ ಇದೆ. ಡಿಪಿಎಆರ್‌ನವರಿಗೆ ನಾವು ಕೇಳಬೇಕಾಗಿದೆ. ಚಿಕ್ಕ ಕೊಠಡಿಯಲ್ಲಿ 30 ಜನ ಸಿಬ್ಬಂದಿ ಕೂರುತ್ತಾರೆ. ಕೊವಿಡ್ ಸಂದರ್ಭದಲ್ಲಿ ಇದು ಸರಿಯಾಗುತ್ತಾ? ರೂಂ ನೀಡಲು DPAR ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಏನು ಮಾಡುತ್ತಾರೆಂದು ನೋಡಬೇಕಾಗಿದೆ ಎಂದು ಹೊರಟ್ಟಿ ಹೇಳಿದ್ದಾರೆ. ನಾವು ಆರ್ಡರ್ ಮಾಡಬೇಕು ಆದರೆ ಆ ಸ್ಥಿತಿ ಇಲ್ಲ. ನಾವು ಮನವಿ ಮಾಡುವ ಪರಿಸ್ಥಿತಿ ಇದೆ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಆನ್‌ಲೈನ್ ವ್ಯಸನದಿಂದ ಬಾಲಕ ಆತ್ಮಹತ್ಯೆ; ಆನ್‌ಲೈನ್ ಗೇಮ್‌ ನಿಯಂತ್ರಿಸಲು ಕಾನೂನು ರೂಪಿಸಿದ ಮಧ್ಯಪ್ರದೇಶ ಸರ್ಕಾರ

ಇದನ್ನೂ ಓದಿ: ಕೊರೊನಾ ಸೋಂಕು ಹೆಚ್ಚಳ: ಧಾರವಾಡ, ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ