AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಬಿಎಂಟಿಸಿ ಬಸ್​ ಚಾಲಕ, ನಿರ್ವಾಹಕನ ಕರ್ತವ್ಯ ನಿಷ್ಠೆಗೆ ಸಲಾಂ

ಬಿಎಂಟಿಸಿ ಬಸ್​ನಲ್ಲಿ ಬಿಟ್ಟುಹೋಗಿದ್ದ ಬ್ಯಾಗ್ ಅನ್ನು ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕನಿಗೆ ಹಿಂದಿರುಗಿಸಿದ್ದಾರೆ.

BMTC: ಬಿಎಂಟಿಸಿ ಬಸ್​ ಚಾಲಕ, ನಿರ್ವಾಹಕನ ಕರ್ತವ್ಯ ನಿಷ್ಠೆಗೆ ಸಲಾಂ
ಬಸ್​ನಲ್ಲಿ ಬಿಟ್ಟು ಹೋಗಿದ್ದ ಬ್ಯಾಗ್ ಅನ್ನು ಪ್ರಯಾಣಿಕನಿಗೆ ಹಿಂದಿರುಗಿಸಿದ ಬಿಎಂಟಿಸಿ ಬಸ್​ ಚಾಲಕ ಹಾಗೂ ನಿರ್ವಾಹಕ
Rakesh Nayak Manchi
|

Updated on:May 16, 2023 | 9:13 PM

Share

ಬೆಂಗಳೂರು: ಬಸ್ ಹಾಗೂ ಆಟೋದಲ್ಲಿ ಪ್ರಯಾಣ ಮಾಡುವಾಗ ಪ್ರಯಾಣಿಕರು ಕೆಲವೊಮ್ಮೆ ತಮ್ಮ ಅಮೂಲ್ಯವಾದ ವಸ್ತುಗಳನ್ನು ಬಿಟ್ಟು ಹೋಗುತ್ತಾರೆ. ಚಿನ್ನಾಭರಣ, ನಗದು ಇರುವ ಪರ್ಸ್ ಅಥವಾ ಇನ್ಯಾವುದೇ ವಸ್ತು. ಇಂತಹ ಸಂದರ್ಭದಲ್ಲಿ ಚಾಲಕರು ಅಥವಾ ನಿರ್ವಾಹಕರು ಮಾನವೀಯತೆ ಮರೆದ ಹಲವು ನಿದರ್ಶನಗಳು ನಮ್ಮ ಕಣ್ಣ ಮುಂದಿದೆ. ಬೆಂಗಳೂರಿನಲ್ಲಿ ಇಂತಹ ಅನೇಕ ಘಟನೆಗಳು ನಡೆದಿವೆ. ಇದೀಗ ಬಿಎಂಟಿಸಿ (BMTC) ಬಸ್​ನಲ್ಲಿ ಬಿಟ್ಟುಹೋಗಿದ್ದ ಬ್ಯಾಗ್ ಅನ್ನು ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕನಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ನಿನ್ನೆ (ಮೇ 15) ಬೆಳಿಗ್ಗೆ ಪ್ರಯಾಣಿಕರೊಬ್ಬರು ತಮ್ಮ ಲಗೇಜ್​ ಅನ್ನು ಬಿಎಂಸಿಟಿ (ಬಿಐಎಎಲ್ -8 ರಲ್ಲಿ) ಬಸ್​ನಲ್ಲಿ ಬಿಟ್ಟು ಹೋಗಿದ್ದರು. ಬಸ್ ವಿಮಾನ ನಿಲ್ದಾಣಕ್ಕೆ ಹಿಂದಿರುಗುವ ವೇಳೆ ತನ್ನ ಬ್ಯಾಗ್ ಅನ್ನು ಪ್ರಯಾಣಿಕ ವಾಪಸ್ ಪಡೆದಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ಬಿಎಂಟಿಸಿ ಹಾಗೂ ಬಸ್​ ನಿರ್ಹಾಕರನ್ನು ಹೊಗಳುತ್ತಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿನ ಕಾರಿಗೆ ಬಿಎಂಟಿಸಿ ಬಸ್​ ನಂಬರ್ ಪ್ಲೇಟ್, ನಿವೃತ್ತ ಬಿಎಂಟಿಸಿ ಚಾಲಕನಿಗೆ ವಿಶೇಷ ಗೌರವ

Sood_Geet ಎಂಬ ಟ್ವಿಟರ್​ ಖಾತೆಯಲ್ಲಿ ನಿನ್ನೆ ಬೆಳಗ್ಗೆ ಟ್ವೀಟ್ ಮಾಡಲಾಗಿದ್ದು, “ಬೆಳಿಗ್ಗೆ ಬಿಐಎಎಲ್ -8 ನಲ್ಲಿ ಬ್ಯಾಗ್​ ಅನ್ನು ಬಿಟ್ಟು ಹೋಗಲಾಗಿತ್ತು. ಈ ಬಗ್ಗೆ ಬಸ್ ಡಿಪೋವನ್ನು ಸಂಪರ್ಕಿಸಿ ಚಾಲಕನ ಸಂಖ್ಯೆಯನ್ನು ಪಡೆದುಕೊಂಡ ಪ್ರಯಾಣಿಕ, ಬಸ್ ವಿಮಾನ ನಿಲ್ದಾಣಕ್ಕೆ ಹಿಂತಿರುಗುವ ಮಾರ್ಗದಲ್ಲಿ ತನ್ನ ಬ್ಯಾಗ್ ಅನ್ನು ಸ್ವೀಕರಿಸಿದ್ದಾರೆ, ಧನ್ಯವಾದಗಳು” ಎಂದು ಬರೆದು ಫೋಟೋ ಹಂಚಿಕೊಳ್ಳಲಾಗಿದೆ.

ಸದ್ಯ ಈ ಫೋಟೋ ವೈರಲ್ ಆಗುತ್ತಿದ್ದು, ಪೋಸ್ಟ್​ ಅನ್ನು 10 ಸಾವಿರಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದು, 200ಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ಒಂದಷ್ಟು ನೆಟ್ಟಿಗರು ಮಾಹಿತಿಯನ್ನು ಹಂಚಿಕೊಂಡಿದ್ದು, ಇನ್ನು ಕೆಲವರು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. “ಬಿಎಂಟಿಸಿ ಸಿಬ್ಬಂದಿ ಯಾವಾಗಲೂ ಸಹಾಯ ಮಾಡುತ್ತಾರೆ ಮತ್ತು ಸೌಜನ್ಯದಿಂದ ವರ್ತಿಸುತ್ತಾರೆ, ವಿಶೇಷವಾಗಿ ನೀವು ಬಿಐಎಎಲ್​ನಿಂದ ಬರುವಾಗ ಅಥವಾ ನಗರಕ್ಕೆ ಹೋಗುವಾಗ” ಎಂದು ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:08 pm, Tue, 16 May 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!