AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಸಿಬ್ಬಂದಿಗೆ ಉಗ್ರನೆಂದು ಬೆದರಿಕೆ ಹಾಕಿದ ಪ್ರಯಾಣಿಕ: ಆರೋಪಿ ಕೆಂಪೇಗೌಡ ಏರ್​​ಪೋರ್ಟ್​ ಪೊಲೀಸ್ ವಶಕ್ಕೆ

Kempegowda International Airport: ಪ್ರಯಾಣಿಕನೊಬ್ಬ ತಾನು ಉಗ್ರರ ಗುಂಪಿಗೆ ಸೇರಿದವನು ಎಂದು ಏರ್​ ಇಂಡಿಯಾ ಸಿಬ್ಬಂದಿಗೆ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆರೋಪಿಯನ್ನು ಸದ್ಯ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಏರ್ ಇಂಡಿಯಾ ಸಿಬ್ಬಂದಿಗೆ ಉಗ್ರನೆಂದು ಬೆದರಿಕೆ ಹಾಕಿದ ಪ್ರಯಾಣಿಕ: ಆರೋಪಿ ಕೆಂಪೇಗೌಡ ಏರ್​​ಪೋರ್ಟ್​ ಪೊಲೀಸ್ ವಶಕ್ಕೆ
ಏರ್ ಇಂಡಿಯಾ ವಿಮಾನ
ನವೀನ್ ಕುಮಾರ್ ಟಿ
| Edited By: |

Updated on:Feb 21, 2024 | 10:17 AM

Share

ಬೆಂಗಳೂರು, ಫೆಬ್ರವರಿ 21: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣಗಳ ಮುನ್ನ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ ವಿಚಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಇತ್ತೀಚೆಗೆ ನಡೆದಿತ್ತು. ಇದರ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಘಟನೆ ನಡೆದಿದೆ. ಪ್ರಯಾಣಿಕನೋರ್ವ, ತಾನು ಉಗ್ರಗಾಮಿ (Terrorist) ಎಂದು ಏರ್ ಇಂಡಿಯಾ (Air India) ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ.

ಸದ್ಯ ಆರೋಪಿ ಕೆಂಪೇಗೌಡ ಏರ್​​ಪೋರ್ಟ್​ ಠಾಣೆ ಪೊಲೀಸರ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ. ಕೆಂಪೇಗೌಡ ಏರ್​ಪೋರ್ಟ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆರೋಪಿ ಆದರ್ಶ್ ಕುಮಾರ್ ಸಿಂಗ್ ಎಂಬಾತ ಫೆಬ್ರವರಿ 17ರಂದು ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ. ವಿಮಾನ ಏರಲು ತೆರಳಿದ್ದ ಆತ ಕೊನೇ ಕ್ಷಣದಲ್ಲಿ ಹಿಂತಿರುಗಿ ವಾಪಸ್ ತೆರಳಲು ಮುಂದಾಗಿದ್ದ. ಈ ಬಗ್ಗೆ ಏರ್ ಇಂಡಿಯಾ ಸಿಬ್ಬಂದಿ ಭದ್ರತಾ ಪಡೆಗೆ ಮಾಹಿತಿ ನೀಡಿದ್ದರು. ಇದೇ ವೇಳೆ, ವಿಮಾನ ಹತ್ತದೆ ಯಾಕೆ ವಾಪಸ್ ತೆರಳುತ್ತಿದ್ದೀರಿ ಎಂದು ಏರ್​ಪೋರ್ಟ್ ಭದ್ರತಾ ಪಡೆ ಸಿಬ್ಬಂದಿ ಪ್ರಶ್ನಿಸಿದ್ದಾರೆ.

ಭದ್ರತಾ ಸಿಬ್ಬಂದಿಯ ಪ್ರಶ್ನೆಗೆ ಆದರ್ಶ್ ಕುಮಾರ್ ಸಿಂಗ್, ‘ನಾನು ಭಯೋತ್ಪಾದಕರ ಗುಂಪಿಗೆ ಸೇರಿದವನು. ನಾನು ಲಖನೌಗೆ ತೆರಳಲ್ಲ’ ಎಂದು ಬೆದರಿಕೆ ಹಾಕಿದ್ದ. ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬೆಂಗಳೂರಿನಿಂದ ಕೊಚ್ಚಿಗೆ ತೆರಳುವ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ಬ್ಯಾಗ್​ನಲ್ಲಿ ಬಾಂಬ್ ಇದೆ ಎಂಬರ್ಥದಲ್ಲಿ ನೀಡಿದ್ದ ಹೇಳಿಕೆ ಕಳೆದ ತಿಂಗಳು ಸಮಸ್ಯೆಗೆ ಕಾರಣವಾಗಿತ್ತು. ಬಳಿಕ ಆರೋಪಿಯನ್ನು ಕೆಂಪೇಗೌಡ ಏರ್​ಪೋರ್ಟ್​ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿ ಸಜು ಕೆ ಕುಮಾರನ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣ ಮುನ್ನ ಬ್ಯಾಗ್​​ನಲ್ಲಿ ಬಾಂಬ್​ ಇದೆ ಎಂದ ವ್ಯಕ್ತಿ!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂಥ ಕೆಲವು ಘಟನೆಗಳು ಇತ್ತೀಚೆಗೆ ಪದೇಪದೆ ವರದಿಯಾಗುತ್ತಿರುವುದು ಭದ್ರತಾ ಪಡೆಗಳ ತಲೆನೋವಿಗೆ ಕಾರಣವಾಗಿದೆ. ಹುಸಿ ಬಾಂಬ್ ದಾಳಿ ಕರೆಗಳು, ದಾಳಿ ಬೆದರಿಕೆಗಳು ಹಾಗೂ ಹುಸಿ ಬೆದರಿಕೆಗಳು ಭದ್ರತಾ ಪಡೆಗಳ ನಿದ್ದೆಗೆಡಿಸಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:17 am, Wed, 21 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್