AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಸಿಬ್ಬಂದಿಗೆ ಉಗ್ರನೆಂದು ಬೆದರಿಕೆ ಹಾಕಿದ ಪ್ರಯಾಣಿಕ: ಆರೋಪಿ ಕೆಂಪೇಗೌಡ ಏರ್​​ಪೋರ್ಟ್​ ಪೊಲೀಸ್ ವಶಕ್ಕೆ

Kempegowda International Airport: ಪ್ರಯಾಣಿಕನೊಬ್ಬ ತಾನು ಉಗ್ರರ ಗುಂಪಿಗೆ ಸೇರಿದವನು ಎಂದು ಏರ್​ ಇಂಡಿಯಾ ಸಿಬ್ಬಂದಿಗೆ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆರೋಪಿಯನ್ನು ಸದ್ಯ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಏರ್ ಇಂಡಿಯಾ ಸಿಬ್ಬಂದಿಗೆ ಉಗ್ರನೆಂದು ಬೆದರಿಕೆ ಹಾಕಿದ ಪ್ರಯಾಣಿಕ: ಆರೋಪಿ ಕೆಂಪೇಗೌಡ ಏರ್​​ಪೋರ್ಟ್​ ಪೊಲೀಸ್ ವಶಕ್ಕೆ
ಏರ್ ಇಂಡಿಯಾ ವಿಮಾನ
ನವೀನ್ ಕುಮಾರ್ ಟಿ
| Edited By: |

Updated on:Feb 21, 2024 | 10:17 AM

Share

ಬೆಂಗಳೂರು, ಫೆಬ್ರವರಿ 21: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣಗಳ ಮುನ್ನ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ ವಿಚಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಇತ್ತೀಚೆಗೆ ನಡೆದಿತ್ತು. ಇದರ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಘಟನೆ ನಡೆದಿದೆ. ಪ್ರಯಾಣಿಕನೋರ್ವ, ತಾನು ಉಗ್ರಗಾಮಿ (Terrorist) ಎಂದು ಏರ್ ಇಂಡಿಯಾ (Air India) ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ.

ಸದ್ಯ ಆರೋಪಿ ಕೆಂಪೇಗೌಡ ಏರ್​​ಪೋರ್ಟ್​ ಠಾಣೆ ಪೊಲೀಸರ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ. ಕೆಂಪೇಗೌಡ ಏರ್​ಪೋರ್ಟ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆರೋಪಿ ಆದರ್ಶ್ ಕುಮಾರ್ ಸಿಂಗ್ ಎಂಬಾತ ಫೆಬ್ರವರಿ 17ರಂದು ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ. ವಿಮಾನ ಏರಲು ತೆರಳಿದ್ದ ಆತ ಕೊನೇ ಕ್ಷಣದಲ್ಲಿ ಹಿಂತಿರುಗಿ ವಾಪಸ್ ತೆರಳಲು ಮುಂದಾಗಿದ್ದ. ಈ ಬಗ್ಗೆ ಏರ್ ಇಂಡಿಯಾ ಸಿಬ್ಬಂದಿ ಭದ್ರತಾ ಪಡೆಗೆ ಮಾಹಿತಿ ನೀಡಿದ್ದರು. ಇದೇ ವೇಳೆ, ವಿಮಾನ ಹತ್ತದೆ ಯಾಕೆ ವಾಪಸ್ ತೆರಳುತ್ತಿದ್ದೀರಿ ಎಂದು ಏರ್​ಪೋರ್ಟ್ ಭದ್ರತಾ ಪಡೆ ಸಿಬ್ಬಂದಿ ಪ್ರಶ್ನಿಸಿದ್ದಾರೆ.

ಭದ್ರತಾ ಸಿಬ್ಬಂದಿಯ ಪ್ರಶ್ನೆಗೆ ಆದರ್ಶ್ ಕುಮಾರ್ ಸಿಂಗ್, ‘ನಾನು ಭಯೋತ್ಪಾದಕರ ಗುಂಪಿಗೆ ಸೇರಿದವನು. ನಾನು ಲಖನೌಗೆ ತೆರಳಲ್ಲ’ ಎಂದು ಬೆದರಿಕೆ ಹಾಕಿದ್ದ. ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬೆಂಗಳೂರಿನಿಂದ ಕೊಚ್ಚಿಗೆ ತೆರಳುವ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ಬ್ಯಾಗ್​ನಲ್ಲಿ ಬಾಂಬ್ ಇದೆ ಎಂಬರ್ಥದಲ್ಲಿ ನೀಡಿದ್ದ ಹೇಳಿಕೆ ಕಳೆದ ತಿಂಗಳು ಸಮಸ್ಯೆಗೆ ಕಾರಣವಾಗಿತ್ತು. ಬಳಿಕ ಆರೋಪಿಯನ್ನು ಕೆಂಪೇಗೌಡ ಏರ್​ಪೋರ್ಟ್​ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿ ಸಜು ಕೆ ಕುಮಾರನ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣ ಮುನ್ನ ಬ್ಯಾಗ್​​ನಲ್ಲಿ ಬಾಂಬ್​ ಇದೆ ಎಂದ ವ್ಯಕ್ತಿ!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂಥ ಕೆಲವು ಘಟನೆಗಳು ಇತ್ತೀಚೆಗೆ ಪದೇಪದೆ ವರದಿಯಾಗುತ್ತಿರುವುದು ಭದ್ರತಾ ಪಡೆಗಳ ತಲೆನೋವಿಗೆ ಕಾರಣವಾಗಿದೆ. ಹುಸಿ ಬಾಂಬ್ ದಾಳಿ ಕರೆಗಳು, ದಾಳಿ ಬೆದರಿಕೆಗಳು ಹಾಗೂ ಹುಸಿ ಬೆದರಿಕೆಗಳು ಭದ್ರತಾ ಪಡೆಗಳ ನಿದ್ದೆಗೆಡಿಸಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:17 am, Wed, 21 February 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ