AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಚಾಲಕ, ನಿರ್ವಾಹಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ

ಇತ್ತೀಚಿಗೆ ಬಿಬಿಎಂಟಿಸಿ ಬಸ್​ ನಿರ್ವಾಹಕನಿಗೆ ಚಾಕು ಇರಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಬಿಎಂಟಿಸಿ ವೋಲ್ವೋ ಬಸ್​ ಚಾಲಕ ಮತ್ತು ನಿರ್ವಾಹಕನಿಗೆ ಸ್ಕ್ರೂಡ್ರೈವರ್​ ತೋರಿಸಿ ಬೆದರಿಕೆ ಹಾಕಲಾಗಿದೆ.

ಬಿಎಂಟಿಸಿ ಚಾಲಕ, ನಿರ್ವಾಹಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ
ಬಿಎಂಟಿಸಿ ಪ್ರಯಾಣಿಕನ ಬೆದರಿಕೆ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Oct 04, 2024 | 3:05 PM

Share

ಬೆಂಗಳೂರು, ಅಕ್ಟೋಬರ್​ 04: ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​ ನಿರ್ವಾಹಕನಿಗೆ ಚಾಕು ಇರಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹಲ್ಲೆ ಮತ್ತು ಬೆದರಿಕೆ ಘಟನೆ ನಡೆದಿದೆ. ಪ್ರಯಾಣಿಕ ಬಿಎಂಟಿಸಿ ಬಸ್​ ನಿರ್ವಾಹಕ ಮತ್ತು ಚಾಲಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ ಹಾಕಿದ್ದಾನೆ.

ಗುರುವಾರ ಸಂಜೆ 4:15ರ ಸುಮಾರಿಗೆ ಬಿಎಂಟಿಸಿ ವೋಲ್ವೋ ಬಸ್​ ಅತ್ತಿಬೆಲೆಯಿಂದ ಮೆಜಸ್ಟಿಕ್​ಗೆ ಹೋಗುತ್ತಿತ್ತು. ಬೆದರಿಕೆ ಹಾಕಿದ ಪ್ರಯಾಣಿಕ ಕೊನಪ್ಪನ ಅಗ್ರಹಾರದಲ್ಲಿ ಬಸ್ ಹತ್ತಿದ್ದಾನೆ. ​ನಿರ್ವಾಹಕ ಪ್ರಯಾಣಿಕರಿಗೆ ಟಿಕೆಟ್ ನೀಡುವ ಸಂಬಂಧ ಬಸ್​ ಅನ್ನು ಅದೇ ನಿಲ್ದಾಣದಲ್ಲಿ ಕೆಲ ಹೊತ್ತು ನಿಲ್ಲಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕ ಹೊಸ ರೋಡ್ ಬಸ್ ನಿಲ್ದಾಣದಲ್ಲಿ ಬಸ್​ನಿಂದ ಇಳಿದು, ಬ್ಯಾಗ್​ನಲ್ಲಿದ್ದ ಸ್ಕ್ರೂಡ್ರೈವರ್ ತೆಗೆದು, ಚಾಲಕ ಮತ್ತು ನಿರ್ವಾಹಕನಿಗೆ ತೋರಿಸಿ, ಚುಚ್ಚಿ ಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಕಂಡಕ್ಟರ್, ಡ್ರೈವರ್​ಗಳ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಬಿಎಂಟಿಸಿ ಎಂಡಿಗೆ ಪತ್ರ

ನಿರ್ವಾಹಕನಿಗೆ ಚಾಕು ಇರಿತ

ಅಕ್ಟೋಬರ್​ 1 ರಂದು ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ನಿವಾರ್ವಾಹಕನಿಗೆ ಚಾಕುವಿನಿಂದ ಇರಿದಿದ್ದನು. ಅಂದು ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದನು. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿತ್ತು.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನ ಗಾಜುಗಳಿಗೆ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದನು. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್​ನಿಂದ ಕೆಳಗೆ ಇಳಿದು ಓಡಿ ಹೋಗಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು, ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:55 am, Fri, 4 October 24

Follow Us
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!