AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಚಾಲಕ, ನಿರ್ವಾಹಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ

ಇತ್ತೀಚಿಗೆ ಬಿಬಿಎಂಟಿಸಿ ಬಸ್​ ನಿರ್ವಾಹಕನಿಗೆ ಚಾಕು ಇರಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಬಿಎಂಟಿಸಿ ವೋಲ್ವೋ ಬಸ್​ ಚಾಲಕ ಮತ್ತು ನಿರ್ವಾಹಕನಿಗೆ ಸ್ಕ್ರೂಡ್ರೈವರ್​ ತೋರಿಸಿ ಬೆದರಿಕೆ ಹಾಕಲಾಗಿದೆ.

ಬಿಎಂಟಿಸಿ ಚಾಲಕ, ನಿರ್ವಾಹಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ
ಬಿಎಂಟಿಸಿ ಪ್ರಯಾಣಿಕನ ಬೆದರಿಕೆ
Kiran Surya
| Edited By: |

Updated on:Oct 04, 2024 | 3:05 PM

Share

ಬೆಂಗಳೂರು, ಅಕ್ಟೋಬರ್​ 04: ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​ ನಿರ್ವಾಹಕನಿಗೆ ಚಾಕು ಇರಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹಲ್ಲೆ ಮತ್ತು ಬೆದರಿಕೆ ಘಟನೆ ನಡೆದಿದೆ. ಪ್ರಯಾಣಿಕ ಬಿಎಂಟಿಸಿ ಬಸ್​ ನಿರ್ವಾಹಕ ಮತ್ತು ಚಾಲಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ ಹಾಕಿದ್ದಾನೆ.

ಗುರುವಾರ ಸಂಜೆ 4:15ರ ಸುಮಾರಿಗೆ ಬಿಎಂಟಿಸಿ ವೋಲ್ವೋ ಬಸ್​ ಅತ್ತಿಬೆಲೆಯಿಂದ ಮೆಜಸ್ಟಿಕ್​ಗೆ ಹೋಗುತ್ತಿತ್ತು. ಬೆದರಿಕೆ ಹಾಕಿದ ಪ್ರಯಾಣಿಕ ಕೊನಪ್ಪನ ಅಗ್ರಹಾರದಲ್ಲಿ ಬಸ್ ಹತ್ತಿದ್ದಾನೆ. ​ನಿರ್ವಾಹಕ ಪ್ರಯಾಣಿಕರಿಗೆ ಟಿಕೆಟ್ ನೀಡುವ ಸಂಬಂಧ ಬಸ್​ ಅನ್ನು ಅದೇ ನಿಲ್ದಾಣದಲ್ಲಿ ಕೆಲ ಹೊತ್ತು ನಿಲ್ಲಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕ ಹೊಸ ರೋಡ್ ಬಸ್ ನಿಲ್ದಾಣದಲ್ಲಿ ಬಸ್​ನಿಂದ ಇಳಿದು, ಬ್ಯಾಗ್​ನಲ್ಲಿದ್ದ ಸ್ಕ್ರೂಡ್ರೈವರ್ ತೆಗೆದು, ಚಾಲಕ ಮತ್ತು ನಿರ್ವಾಹಕನಿಗೆ ತೋರಿಸಿ, ಚುಚ್ಚಿ ಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಕಂಡಕ್ಟರ್, ಡ್ರೈವರ್​ಗಳ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಬಿಎಂಟಿಸಿ ಎಂಡಿಗೆ ಪತ್ರ

ನಿರ್ವಾಹಕನಿಗೆ ಚಾಕು ಇರಿತ

ಅಕ್ಟೋಬರ್​ 1 ರಂದು ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ನಿವಾರ್ವಾಹಕನಿಗೆ ಚಾಕುವಿನಿಂದ ಇರಿದಿದ್ದನು. ಅಂದು ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದನು. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿತ್ತು.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನ ಗಾಜುಗಳಿಗೆ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದನು. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್​ನಿಂದ ಕೆಳಗೆ ಇಳಿದು ಓಡಿ ಹೋಗಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು, ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:55 am, Fri, 4 October 24

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ