AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೇ ಅಷ್ಟೇ ಉದ್ಘಾಟನೆಗೊಂಡಿರುವ ಹಳದಿ ಮಾರ್ಗದ ಮೆಟ್ರೋನಲ್ಲಿ ತಾಂತ್ರಿಕ ದೋಷ, ಪ್ರಯಾಣಿಕರು ಪರದಾಟ

ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಆಗಸ್ಟ್‌ 10ರಂದು ಚಾಲನೆ ನೀಡಿದ್ದರು. ಆರ್‌ವಿ ರಸ್ತೆ - ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಹಳದಿ ಮಾರ್ಗ ಇದಾಗಿದ್ದು, ಇದೀಗ ಈ ಮಾರ್ಗದ ನಮ್ಮ ಮೆಟ್ರೋನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಇದರಿಂದ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಿದ್ದು, ಮೆಟ್ರೋ ನಿಲ್ದಾಣದಲ್ಲಿ ಜನ ದಟ್ಟಣೆ ಉಂಟಾಗಿದೆ.

ಮೊನ್ನೇ ಅಷ್ಟೇ ಉದ್ಘಾಟನೆಗೊಂಡಿರುವ ಹಳದಿ ಮಾರ್ಗದ ಮೆಟ್ರೋನಲ್ಲಿ ತಾಂತ್ರಿಕ ದೋಷ, ಪ್ರಯಾಣಿಕರು ಪರದಾಟ
Yellow Line Namma Metro
ಶಾಂತಮೂರ್ತಿ
| Edited By: |

Updated on:Sep 22, 2025 | 9:59 PM

Share

ಬೆಂಗಳೂರು, (ಸೆಪ್ಟೆಂಬರ್ 22): ಕಳೆದ ಆಗಸ್ಟ್​ ನಲ್ಲಿ ಅಷ್ಟೇ ಉದ್ಘಾಟನೆಗೊಂಡಿದ್ದ R.V.ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗ ನಮ್ಮ ಮೆಟ್ರೋನಲ್ಲಿ (Yellow Line Namma Metro) ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಆರ್​​.ವಿ.ರಸ್ತೆ ನಿಲ್ದಾಣದಲ್ಲಿ ನಮ್ಮ ಮೆಟ್ರೋ ರೈಲಿನಲ್ಲಿ ಸಮಸ್ಯೆಯಾಗಿದ್ದು, ರೈಲು ನಿಲ್ದಾಣದಲ್ಲಿ ನಿಂತಲ್ಲೇ ನಿಂತುಕೊಂಡಿದೆ.  ಹೀಗಾಗಿ ಇಂದು (ಸೆಪ್ಟೆಂಬರ್ 22)ಸಂಜೆ 7 ಗಂಟೆಯಿಂದ ನಿಗದಿತ ವೇಳಾಪಟ್ಟಿಯಂತೆ ರೈಲುಗಳು ಸಂಚರಿಸುತ್ತಿಲ್ಲ. ಇದರಿಂದ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಿದ್ದು, R.V.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಈ ಬಗ್ಗೆ BMRCL ವಿಷಾದ ವ್ಯಕ್ತಪಡಿಸಿದೆ.

ಪ್ರಯಾಣಿಕರಿಗೆ ಸಮಸ್ಯೆಯಾಗಿರುವುದರ ಈ ಬಗ್ಗೆ BMRCL ಪ್ರತಿಕ್ರಿಯಿಸಿದ್ದು, ಸಂಜೆ 7 ಗಂಟೆಯಿಂದ ನಿಗದಿತ ವೇಳಾಪಟ್ಟಿಯಂತೆ ರೈಲುಗಳು ಸಂಚರಿಸುತ್ತಿಲ್ಲ. ಆದಷ್ಟು ಬೇಗ ಎಲ್ಲಾ ಸಮಸ್ಯೆ ಬಗೆಹರಿಯಬಹುದು ಎಂಬ ನಿರೀಕ್ಷೆ ಇದೆ. ಉಂಟಾದ ಅನಾನುಕೂಲತೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಎಂದಿದೆ.

ಬಗೆಹರಿದ ಸಮಸ್ಯೆ

ಹಳದಿ ಮಾರ್ಗ ನಮ್ಮ ಮೆಟ್ರೋನಲ್ಲಿ ತಾಂತ್ರಿಕ ಸಮಸ್ಯೆ ಇದೀಗ ಬಗೆಹರಿದಿದ್ದು, ಮೆಟ್ರೋ ಸಂಚಾರ ಶುರುವಾಗಿದೆ.  ಇದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ RV ರಸ್ತೆ ಹಳದಿ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಓಡಾಡುತ್ತಿದ್ದಾರೆ.

Published On - 9:38 pm, Mon, 22 September 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ