AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಬಂಧಿತರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು

ಪಿಎಸ್​ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಡಪಟ್ಟಿದೆ. ಪಿಎಸ್ಐ ನೇಮಕಾತಿಗಾಗಿಯೇ ಪಡೆದಿದ್ದ ಸುಮಾರು 1.5 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿದೆ.

PSI Recruitment Scam: ಬಂಧಿತರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Oct 12, 2022 | 8:45 AM

Share

ಬೆಂಗಳೂರು: ಅಕ್ಟೋಬರ್ 2021ರಲ್ಲಿ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಗಾಗಿ ರಾಜ್ಯಾದ್ಯಂತ ನಡೆದ ಲಿಖಿತ ಪರೀಕ್ಷೆಯಲ್ಲಿ ಭಾರೀ ಅಕ್ರಮವಾಗಿದೆ. ಪಿಎಸ್ಐ ಪರೀಕ್ಷೆ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ. ಸದ್ಯ ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿತರಾದವರ ಮೇಲೆ ಸಿಐಡಿ ಪೊಲೀಸರಿಂದ ಮತ್ತೊಂದು ಅಸ್ತ್ರ ಪ್ರಯೋಗ ಮಾಡಲಾಗಿದೆ. ಪಿಎಸ್​ಐ ನೇಮಕಾತಿ ಕೇಸ್​ನಲ್ಲಿ ಪಿ.ಸಿ. ಆಕ್ಟ್ ಅಳವಡಿಸಲಾಗಿದೆ.

ಪಿಎಸ್​ಐ ನೇಮಕಾತಿ ಹಗರಣದ ಕೇಸ್​ನಲ್ಲಿ ಪಿ.ಸಿ. ಆಕ್ಟ್(ಪ್ರಿವೆನ್ಷನ್ ಆಫ್ ಕರಪ್ಷನ್ ಆಕ್ಟ್. ಭ್ರಷ್ಟಾಚಾರ ತಡೆ ಕಾಯ್ದೆ) ಅಳವಡಿಸಲಾಗಿದೆ. ಪಿಎಸ್​ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಡಪಟ್ಟಿದೆ. ಪಿಎಸ್ಐ ನೇಮಕಾತಿಗಾಗಿಯೇ ಪಡೆದಿದ್ದ ಸುಮಾರು 1.5 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿದೆ. ಹಣದ ಮೂಲ ಪರಿಶೀಲನೆ ಮಾಡಿದಾಗ ಅದು ಲಂಚ ಪಡೆದಿದ್ದು ಎಂದು ದೃಡಪಟ್ಟಿದೆ. ಹೀಗಾಗಿ ಲಂಚ ನೀಡಿದವರು ಹಾಗೂ ಲಂಚ ಪಡೆದವರ ವಿರುದ್ಧ ಹೊಸ ಸೆಕ್ಷನ್ ಅಡಿಯಲ್ಲಿ ಸಹ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಬಂಧಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರೆಸಿದ್ದಾರೆ. ಇದನ್ನೂ ಓದಿ: ಬಸವ ಎಕ್ಸ್​ಪ್ರೆಸ್​ನಲ್ಲಿ ನೀರಿಲ್ಲ: ವಿಡಿಯೊ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕರು

ಪಿ.ಸಿ. ಆಕ್ಟ್ ಹಾಕಿರುವ ಹಿನ್ನಲೆ ಕೋರ್ಟ್ ಬದಲಾವಣೆಯಾಗಲಿದೆ. ಇದುವರೆಗೆ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಕೇಸ್ ಇತ್ತು. ಆದ್ರೆ ಇನ್ನು ಮುಂದೆ ಸಿಸಿಎಚ್ 23 ನೇ ನ್ಯಾಯಾಲಯದಲ್ಲಿ ಕೇಸ್ ನಡೆಯಲಿದೆ. ಹಣ ವರ್ಗಾವಣೆ ಹಾಗು ಬೇನಾಮಿ ಆಸ್ತಿ ಪತ್ತೆಯಾದ ಹಿನ್ನೆಲೆ ಇಡಿ ಸಹ ಪಿಎಸ್​ಐ ನೇಮಕಾತಿ ಹಗರಣದ ಕೇಸ್​ನಲ್ಲಿ ಎಂಟ್ರಿಯಾಗಲಿದೆ. ಅಲ್ಲದೆ ಈಗಾಗಲೇ ಕೆಲ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ