AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಬಂಧಿತರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು

ಪಿಎಸ್​ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಡಪಟ್ಟಿದೆ. ಪಿಎಸ್ಐ ನೇಮಕಾತಿಗಾಗಿಯೇ ಪಡೆದಿದ್ದ ಸುಮಾರು 1.5 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿದೆ.

PSI Recruitment Scam: ಬಂಧಿತರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು
ಸಾಂಧರ್ಬಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Oct 12, 2022 | 8:45 AM

Share

ಬೆಂಗಳೂರು: ಅಕ್ಟೋಬರ್ 2021ರಲ್ಲಿ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಗಾಗಿ ರಾಜ್ಯಾದ್ಯಂತ ನಡೆದ ಲಿಖಿತ ಪರೀಕ್ಷೆಯಲ್ಲಿ ಭಾರೀ ಅಕ್ರಮವಾಗಿದೆ. ಪಿಎಸ್ಐ ಪರೀಕ್ಷೆ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ. ಸದ್ಯ ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿತರಾದವರ ಮೇಲೆ ಸಿಐಡಿ ಪೊಲೀಸರಿಂದ ಮತ್ತೊಂದು ಅಸ್ತ್ರ ಪ್ರಯೋಗ ಮಾಡಲಾಗಿದೆ. ಪಿಎಸ್​ಐ ನೇಮಕಾತಿ ಕೇಸ್​ನಲ್ಲಿ ಪಿ.ಸಿ. ಆಕ್ಟ್ ಅಳವಡಿಸಲಾಗಿದೆ.

ಪಿಎಸ್​ಐ ನೇಮಕಾತಿ ಹಗರಣದ ಕೇಸ್​ನಲ್ಲಿ ಪಿ.ಸಿ. ಆಕ್ಟ್(ಪ್ರಿವೆನ್ಷನ್ ಆಫ್ ಕರಪ್ಷನ್ ಆಕ್ಟ್. ಭ್ರಷ್ಟಾಚಾರ ತಡೆ ಕಾಯ್ದೆ) ಅಳವಡಿಸಲಾಗಿದೆ. ಪಿಎಸ್​ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಡಪಟ್ಟಿದೆ. ಪಿಎಸ್ಐ ನೇಮಕಾತಿಗಾಗಿಯೇ ಪಡೆದಿದ್ದ ಸುಮಾರು 1.5 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿದೆ. ಹಣದ ಮೂಲ ಪರಿಶೀಲನೆ ಮಾಡಿದಾಗ ಅದು ಲಂಚ ಪಡೆದಿದ್ದು ಎಂದು ದೃಡಪಟ್ಟಿದೆ. ಹೀಗಾಗಿ ಲಂಚ ನೀಡಿದವರು ಹಾಗೂ ಲಂಚ ಪಡೆದವರ ವಿರುದ್ಧ ಹೊಸ ಸೆಕ್ಷನ್ ಅಡಿಯಲ್ಲಿ ಸಹ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಬಂಧಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರೆಸಿದ್ದಾರೆ. ಇದನ್ನೂ ಓದಿ: ಬಸವ ಎಕ್ಸ್​ಪ್ರೆಸ್​ನಲ್ಲಿ ನೀರಿಲ್ಲ: ವಿಡಿಯೊ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕರು

ಪಿ.ಸಿ. ಆಕ್ಟ್ ಹಾಕಿರುವ ಹಿನ್ನಲೆ ಕೋರ್ಟ್ ಬದಲಾವಣೆಯಾಗಲಿದೆ. ಇದುವರೆಗೆ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಕೇಸ್ ಇತ್ತು. ಆದ್ರೆ ಇನ್ನು ಮುಂದೆ ಸಿಸಿಎಚ್ 23 ನೇ ನ್ಯಾಯಾಲಯದಲ್ಲಿ ಕೇಸ್ ನಡೆಯಲಿದೆ. ಹಣ ವರ್ಗಾವಣೆ ಹಾಗು ಬೇನಾಮಿ ಆಸ್ತಿ ಪತ್ತೆಯಾದ ಹಿನ್ನೆಲೆ ಇಡಿ ಸಹ ಪಿಎಸ್​ಐ ನೇಮಕಾತಿ ಹಗರಣದ ಕೇಸ್​ನಲ್ಲಿ ಎಂಟ್ರಿಯಾಗಲಿದೆ. ಅಲ್ಲದೆ ಈಗಾಗಲೇ ಕೆಲ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!