AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಬಾವಿಯಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು, ಕಾರು ನಿಲ್ಲಿಸದೇ ಎಸ್ಕೇಪ್ ಆದ ಚಾಲಕ

ನಾಯಂಡನಹಳ್ಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ, ಕಾಮಾಕ್ಷಿಪಾಳ್ಯದ ಸಂಬಂಧಿಕರ ಮನೆಯಿಂದ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ.

ನಾಗರಬಾವಿಯಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು, ಕಾರು ನಿಲ್ಲಿಸದೇ ಎಸ್ಕೇಪ್ ಆದ ಚಾಲಕ
ಅಪಘಾತ ನಡೆದ ಸ್ಥಳ
TV9 Web
| Edited By: |

Updated on:Dec 27, 2021 | 9:15 AM

Share

ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತ ದುರ್ದೈವಿ. ಘಟನೆ ಬಳಿಕ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದು ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೇನಂ ಬರ್ಮನ್ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ. ನಾಯಂಡನಹಳ್ಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ, ಕಾಮಾಕ್ಷಿಪಾಳ್ಯದ ಸಂಬಂಧಿಕರ ಮನೆಯಿಂದ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರನ್ನ ನಿಲ್ಲಿಸದೇ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಮತ್ತೊಂದೆಡೆ ತುಮಕೂರಿನ ಕ್ಯಾತ್ಸಂದ್ರ ಬಳಿ ರೈಲಿಗೆ ಸಿಲುಕಿ ಸುಮಾರು 65 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತುಮಕೂರು ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಮೃತರ ಗುರುತು ಪತ್ತೆಯಾಗಿಲ್ಲ.

ನೀರಲ್ಲಿ ಮುಳುಗಿ ಯುವಕ ಸಾವು ತುಮಕೂರು: ಪಾವಗಡ ತಾಲೂಕಿನ ನಾಗಲಮಡಿಕೆ ಜಲಾಶಯದಲ್ಲಿ ಈಜುತ್ತಿದ್ದ ವೇಳೆ ಮುಳುಗಿ ತಿಪ್ಪನಹಳ್ಳಿಯ ನಿರಂಜನ್(21) ಮೃತಪಟ್ಟ ಘಟನೆ ನಡೆದಿದೆ. ಆಂಧ್ರದ ಕಲ್ಯಾಣದುರ್ಗ ತಾಲೂಕಿನ ತಿಪ್ಪನಹಳ್ಳಿ ಗ್ರಾಮದ ನಿರಂಜನ (21) ಮೃತ ದುರ್ದೈವಿ. ನಾಗಲಮಡಿಕೆಗೆ ಮದುವೆಗೆಂದು ಆಗಮಿಸಿದ್ದ ಯುವಕ ನಿನ್ನೆ ಈಜಲು ಹೋಗಿ ಮೃತಪಟ್ಟಿದ್ದಾನೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮೈಸೂರಿನ ಕಲಾಮಂದಿರದಲ್ಲಿ ರೈತ ದಿನಾಚರಣೆಯ ಸಂಭ್ರಮ; ಸಿಎಂ ಬೊಮ್ಮಾಯಿಗೆ ಹಸುವಿನ ಕಲಾಕೃತಿ ಕೊಟ್ಟ ರೈತರು

ಸಾವಿನಲ್ಲೂ ಸಾರ್ಥಕತೆ – ಮಂಡ್ಯ ಯುವಕನ ಅಂಗಾಗ ದಾನ, ಪೋಷಕರ ಸಮಯಪ್ರಜ್ಞೆ, ಆರು ಜನರ ಬಾಳಿಗೆ ಬೆಳಕು

Published On - 8:19 am, Mon, 27 December 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?