AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಬಾವಿಯಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು, ಕಾರು ನಿಲ್ಲಿಸದೇ ಎಸ್ಕೇಪ್ ಆದ ಚಾಲಕ

ನಾಯಂಡನಹಳ್ಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ, ಕಾಮಾಕ್ಷಿಪಾಳ್ಯದ ಸಂಬಂಧಿಕರ ಮನೆಯಿಂದ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ.

ನಾಗರಬಾವಿಯಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು, ಕಾರು ನಿಲ್ಲಿಸದೇ ಎಸ್ಕೇಪ್ ಆದ ಚಾಲಕ
ಅಪಘಾತ ನಡೆದ ಸ್ಥಳ
Follow us
TV9 Web
| Updated By: ಆಯೇಷಾ ಬಾನು

Updated on:Dec 27, 2021 | 9:15 AM

ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತ ದುರ್ದೈವಿ. ಘಟನೆ ಬಳಿಕ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದು ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೇನಂ ಬರ್ಮನ್ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ. ನಾಯಂಡನಹಳ್ಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ, ಕಾಮಾಕ್ಷಿಪಾಳ್ಯದ ಸಂಬಂಧಿಕರ ಮನೆಯಿಂದ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರನ್ನ ನಿಲ್ಲಿಸದೇ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಮತ್ತೊಂದೆಡೆ ತುಮಕೂರಿನ ಕ್ಯಾತ್ಸಂದ್ರ ಬಳಿ ರೈಲಿಗೆ ಸಿಲುಕಿ ಸುಮಾರು 65 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತುಮಕೂರು ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಮೃತರ ಗುರುತು ಪತ್ತೆಯಾಗಿಲ್ಲ.

ನೀರಲ್ಲಿ ಮುಳುಗಿ ಯುವಕ ಸಾವು ತುಮಕೂರು: ಪಾವಗಡ ತಾಲೂಕಿನ ನಾಗಲಮಡಿಕೆ ಜಲಾಶಯದಲ್ಲಿ ಈಜುತ್ತಿದ್ದ ವೇಳೆ ಮುಳುಗಿ ತಿಪ್ಪನಹಳ್ಳಿಯ ನಿರಂಜನ್(21) ಮೃತಪಟ್ಟ ಘಟನೆ ನಡೆದಿದೆ. ಆಂಧ್ರದ ಕಲ್ಯಾಣದುರ್ಗ ತಾಲೂಕಿನ ತಿಪ್ಪನಹಳ್ಳಿ ಗ್ರಾಮದ ನಿರಂಜನ (21) ಮೃತ ದುರ್ದೈವಿ. ನಾಗಲಮಡಿಕೆಗೆ ಮದುವೆಗೆಂದು ಆಗಮಿಸಿದ್ದ ಯುವಕ ನಿನ್ನೆ ಈಜಲು ಹೋಗಿ ಮೃತಪಟ್ಟಿದ್ದಾನೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮೈಸೂರಿನ ಕಲಾಮಂದಿರದಲ್ಲಿ ರೈತ ದಿನಾಚರಣೆಯ ಸಂಭ್ರಮ; ಸಿಎಂ ಬೊಮ್ಮಾಯಿಗೆ ಹಸುವಿನ ಕಲಾಕೃತಿ ಕೊಟ್ಟ ರೈತರು

ಸಾವಿನಲ್ಲೂ ಸಾರ್ಥಕತೆ – ಮಂಡ್ಯ ಯುವಕನ ಅಂಗಾಗ ದಾನ, ಪೋಷಕರ ಸಮಯಪ್ರಜ್ಞೆ, ಆರು ಜನರ ಬಾಳಿಗೆ ಬೆಳಕು

Published On - 8:19 am, Mon, 27 December 21

ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ