AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರೇ ಗಮನಿಸಿ: ಪೀಣ್ಯ ಫ್ಲೈಓವರ್ 5 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ!

Peenya Elevated Flyover: ಪೀಣ್ಯ ಫ್ಲೈಓವರ್‌ನ ಕೇಬಲ್ ದುರಸ್ತಿ ಕಾರ್ಯ ಮುಗಿದಿದ್ದು, ಏಪ್ರಿಲ್ 13ರಿಂದ 17ರವರೆಗೆ ಲೋಡ್ ಟೆಸ್ಟಿಂಗ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಸಂಚಾರ ಬಂದ್ ಮಾಡಲಾಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ.

ವಾಹನ ಸವಾರರೇ ಗಮನಿಸಿ: ಪೀಣ್ಯ ಫ್ಲೈಓವರ್ 5 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ!
ಪೀಣ್ಯ ಮೇಲ್ಸೇತುವೆ (ಸಂಗ್ರಹ ಚಿತ್ರ)Image Credit source: tv9
Shivaprasad B
| Edited By: |

Updated on: Apr 11, 2026 | 6:22 AM

Share

ಬೆಂಗಳೂರು, ಏಪ್ರಿಲ್ 11: ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ (Peenya Elevated Flyover) ಕೇಬಲ್ ದುರಸ್ತಿ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಈಗ ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇಲ್ಸೇತುವೆಯನ್ನು ಏಪ್ರಿಲ್ 13ರಿಂದ ಐದು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಪೀಣ್ಯ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಈ ಐದು ದಿನಗಳ ಕಾಲ ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಿದ್ದಾರೆ.

ಪೀಣ್ಯ ಫ್ಲೈಓವರ್‌ ಬಂದ್ ಆಗುವ ಅವಧಿ

ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಪೀಣ್ಯ ಫ್ಲೈಓವರ್‌ ಬಂದ್:  ಪರ್ಯಾಯ ಮಾರ್ಗಗಳು

ವಾಹನ ಸವಾರರಿಗೆ ತೊಂದರೆಯಾಗದಂತೆ ಪೊಲೀಸರು ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ. ಅವುಗಳು ಹೀಗಿವೆ;

  • ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಭಾಗದ ಎನ್‌ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ (SRS) ಜಂಕ್ಷನ್ ಮತ್ತು ಗೊರಗುಂಟೆಪಾಳ್ಯ ಮೂಲಕ ಸಂಚರಿಸಬೇಕು.
  • ಸಿಎಂಟಿಐನಿಂದ ನೆಲಮಂಗಲ ಕಡೆಗೆ ಹೋಗುವ ವಾಹನಗಳು ಫ್ಲೈಓವರ್ ಕೆಳಭಾಗದ ಎನ್‌ಹೆಚ್‌-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಮತ್ತು ಪಾರ್ಲೆ ಜಿ ಟೋಲ್ ಮೂಲಕ ಸಾಗಬೇಕು.

ಇದನ್ನೂ ಓದಿ: ಜೋಂಬಿ ಡ್ರಗ್ಸ್ ಕೇಸ್​​: ವಿಡಿಯೋ ಹಂಚಿಕೊಂಡ ನಟ ಸೇರಿ ಹಲವರಿಗೆ ಸಂಕಷ್ಟ

ರಸ್ತೆ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಸಾರ್ವಜನಿಕರು ಈ ಬದಲಾವಣೆಗಳನ್ನು ಗಮನಿಸಿ ಪೊಲೀಸರೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ