AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕಾಗಿ ಆಗ್ರಹ, ಬಜೆಟ್‌ನಲ್ಲಿ ಗುಡ್‌ನ್ಯೂಸ್‌ ಕೊಡ್ತಾರಾ ಸಿಎಂ ಬೊಮ್ಮಾಯಿ?

State Budget Expectations: ಹಣ ಕೊಟ್ಟು ಬಿಎಂಟಿಸಿಯಲ್ಲಿ ಸಂಚರಿಸುತ್ತಿರೋ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಗೋ ಲಕ್ಷಣ ಕಾಣ್ತಿದೆ. ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪಾಸ್‌ ಕೊಡ್ಬೇಕು ಅನ್ನೋ ಕೂಗು ಹೆಚ್ಚಾಗ್ತಿದ್ದು, ಬಜೆಟ್‌ನಲ್ಲಿ ಸಿಹಿ ಸುದ್ದಿ ಸಿಗುತ್ತಾ ಅನ್ನೋ ನಿರೀಕ್ಷೆಯಲ್ಲಿ ಬೆಂಗಳೂರಿನ ಮಹಿಳೆಯರಿ ಇದ್ದಾರೆ.

ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕಾಗಿ ಆಗ್ರಹ, ಬಜೆಟ್‌ನಲ್ಲಿ ಗುಡ್‌ನ್ಯೂಸ್‌ ಕೊಡ್ತಾರಾ ಸಿಎಂ ಬೊಮ್ಮಾಯಿ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
TV9 Web
| Edited By: |

Updated on:Feb 24, 2022 | 8:36 AM

Share

ಬೆಂಗಳೂರು: ಈ ತಿಂಗಳು ಕಳೆದು ಮುಂದಿನ ತಿಂಗಳು ಆರಂಭವಾಗ್ತಿದ್ದಂತೆ ರಾಜ್ಯ ಬಜೆಟ್‌(State Budget) ಮಂಡನೆಯಾಗಲಿದೆ. ಮಾರ್ಚ್‌ 4 ರಂದು ರಾಜ್ಯ ಬಜೆಟ್‌ಗೆ ಮೂಹುರ್ತ ಫಿಕ್ಸ್‌ ಆಗಿದೆ. ಇದ್ರ ನಡುವೆ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪಾಸ್‌(Free BMTC Bus Pass) ಕೊಡ್ಬೇಕು ಅನ್ನೋ ಕೂಗು ಹೆಚ್ಚಾಗ್ತಿದ್ದು, ಬಜೆಟ್‌ನಲ್ಲಿ ಸಿಹಿ ಸುದ್ದಿ ಸಿಗುತ್ತಾ ಅನ್ನೋ ನಿರೀಕ್ಷೆಯಲ್ಲಿ ಬೆಂಗಳೂರಿನ ಮಹಿಳೆಯರಿ ಇದ್ದಾರೆ.

ಬಿಎಂಟಿಸಿ. ಬೆಂಗಳೂರಿಗರ ಜೀವನಾಡಿ. ಅದ್ರಲ್ಲೂ ಕಾರ್ಮಿಕರು, ಮಹಿಳಾ ನೌಕರರು ಬಿಎಂಟಿಸಿಯನ್ನೇ ನಂಬಿಕೊಂಡು ಪ್ರಯಾಣ ಮಾಡ್ತಿದ್ದಾರೆ. ಹೀಗೆ ಹಣ ಕೊಟ್ಟು ಬಿಎಂಟಿಸಿಯಲ್ಲಿ ಸಂಚರಿಸುತ್ತಿರೋ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಗೋ ಲಕ್ಷಣ ಕಾಣ್ತಿದೆ. ಕೊರೊನಾ ಹಲವರ ಬದುಕನ್ನ ಬೀದಿಗೆ ತಳ್ಳಿದೆ. ಅದ್ರಲ್ಲೂ ಅದೆಷ್ಟೋ ಕಾರ್ಖಾನೆಗಳಿಗೆ ಬೀಗ ಬಿದ್ದಿದ್ದು ಹಲವರು ಕೆಲಸ ಕಳೆದುಕೊಂಡಿದ್ದಾರೆ. ಇನ್ನೂ ಕೆಲಸದಲ್ಲಿರೋರಿಗೂ ಕೂಡಾ ಸರಿಯಾದ ವೇತನ ಸಿಗುತ್ತಿಲ್ಲ. ಇಂಥಾ ಸಂಕಷ್ಟದಲ್ಲಿ ಹಣ ಕೊಟ್ಟು ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡ್ತಿರೋ ಪ್ರಯಾಣಿಕರು ಉಚಿತ ಪಾಸ್‌ಗೆ ಆಗ್ರಹಿಸಿದ್ದಾರೆ. ಅದ್ರಲ್ಲೂ ಮಹಿಳೆಯರಿಗೆ ಬಿಎಂಟಿಸಿಯಲ್ಲಿ ಉಚಿತ ಪಾಸ್‌ ಕೊಡ್ಬೇಕು ಅನ್ನೋ ಆಗ್ರಹ ಹೆಚ್ಚಾಗ್ತಿದೆ.

ಬಿಎಂಟಿಸಿ ಉಪಾಧ್ಯಕ್ಷ ಎಂ.ಆರ್ ವೆಂಕಟೇಶ್ ಮತ್ತು ಅಧಿಕಾರಿಗಳ ತಂಡ ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದಾರೆ. ಈ ಬಗ್ಗೆ ಪಾಸಿಟಿವ್‌ ಆಗಿ ಪ್ರತಿಕ್ರಿಯೆ ನೀಡಿರೋ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಮೊದಲ ಬಜೆಟ್‌ನಲ್ಲಿ ಸಿಹಿ ಸುದ್ದಿ ಕೊಡೋ ಸಾಧ್ಯತೆ ಇದೆ. ಇನ್ನೂ ನೆರೆ ರಾಜ್ಯ ತಮಿಳುನಾಡು, ರಾಷ್ಟ್ರರಾಜಧಾನಿ ದೆಹಲಿ, ಪಂಜಾಬ್‌ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಸಂಚಾರ ಇದೆ. ಆದ್ರೆ ನಮ್ಮ ರಾಜ್ಯದಲ್ಲಿ ಮಾತ್ರ ಬಿಎಂಟಿಸಿಯಲ್ಲಿ 1050 ರೂಪಾಯಿ ನೀಡಿ ತಿಂಗಳ ಪಾಸ್‌ ಪಡೆದು ಸಂಚರಿಸುತ್ತಿದ್ದಾರೆ. ಆದ್ರೆ 7 ಸಾವಿರ 8 ಸಾವಿರ ಸಂಬಳ ಪಡೆಯೋ ಮಹಿಳೆಯರು 1 ಸಾವಿರವನ್ನೂ ಕಟ್ಟಲಾಗದೆ ನಡೆದುಕೊಂಡೇ ಹೋಗ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನಿಡ್ಬೇಕು ಅನ್ನೋದು ಎಲ್ಲರ ಆಗ್ರಹ. ಇನ್ನು ಬಸ್‌ ಪ್ರಯಾಣಿಕರ ವೇದಿಕೆ ಕೂಡಾ ಈ ವಿಚಾರವನ್ನ ಸಿಎಂ ಗಮನಕ್ಕೆ ತಂದಿದ್ದು ಬೇಡಿಕೆ ಈಡೇರುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದಾರೆ.

ಒಟ್ನಲ್ಲಿ ಕಳೆದ ಬಜೆಟ್‌ನಲ್ಲಿ ಅಂದಿನ ಸಿಎಂ ಬಿಎಸ್‌ವೈ ಗಾರ್ಮೆಂಟ್ಸ್‌ಗೆ ಹೋಗುವ ಮಹಿಳೆಯರಿಗೆ ಉಚಿತ ಬಸ್ ನೀಡಿದ್ರು. ಮುಂದಿನ ತಿಂಗಳು ಬಜೆಟ್‌ ಮಂಡಿಸುತ್ತಿರೋ ಸಿಎಂ ಬೊಮ್ಮಾಯಿ ಬೆಂಗಳೂರಿನ ಎಲ್ಲಾ ಮಹಿಳೆಯರಿಗೂ ಗುಡ್‌ ನ್ಯೂಸ್‌ ಕೊಡ್ತಾರಾ ಕಾದು ನೋಡ್ಬೇಕು.

ವರದಿ: ಕಿರಣ್ ಸೂರ್ಯ, ಟಿವಿ9 ಬೆಂಗಳೂರು

ಇದನ್ನೂ ಓದಿ: ಕನ್ನಡಕ್ಕೆ ಬರುತ್ತಿದೆ ‘ಫೋರೆನ್ಸಿಕ್​’ ಸಿನಿಮಾ; ‘ರತ್ನನ್​ ಪ್ರಪಂಚ’ ಬೆಡಗಿಯ ಇನ್ನೊಂದು ಚಿತ್ರ ಶೀಘ್ರವೇ ರಿಲೀಸ್

Published On - 8:31 am, Thu, 24 February 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!