AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭೇಟಿಯಾಗಲು ವರುಣಾ ಕ್ಷೇತ್ರದ ಜನರಿಗೆ ಮುಕ್ತ ಅವಕಾಶ

ಮುಖ್ಯಮಂತ್ರಿಯನ್ನು ಭೇಟಿಯಾಗಲು ವರುಣ ಕ್ಷೇತ್ರದ ಜನರಿಗೆ ಮುಕ್ತ ಅವಕಾಶ ನೀಡಲಾಗಿದೆ. ವರುಣಾ ಕ್ಷೇತ್ರದ ಜನರು ತಮ್ಮ ವಿಳಾಸ ತೋರಿಸಿ ಬರಬಹುದಾಗಿದೆ.

ಸಿಎಂ ಭೇಟಿಯಾಗಲು ವರುಣಾ ಕ್ಷೇತ್ರದ ಜನರಿಗೆ ಮುಕ್ತ ಅವಕಾಶ
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ವರುಣ ಕ್ಷೇತ್ರದ ಜನರಿಗೆ ಮುಕ್ತ ಅವಕಾಶ
Rakesh Nayak Manchi
|

Updated on:May 31, 2023 | 7:01 PM

Share

ಬೆಂಗಳೂರು: ಯಾವುದೇ ಜನಪ್ರತಿನಿಧಿಗಳನ್ನು ಭೇಟಿಯಾಗುವುದು ಅಷ್ಟು ಸುಲಭವಲ್ಲ. ಹೀಗಿದ್ದಾಗ ಮುಖ್ಯಮಂತ್ರಿ ಅವರನ್ನು ಭೇಟಿಯಾಗಲು ಸಾಧ್ಯವೇ? ನಿವಾಸ ಅಥವಾ ಕಚೇರಿ ಮುಂದೆ ಬಿಗಿ ಪೊಲೀಸ್ ಭದ್ರತೆ ಇರುತ್ತದೆ. ಗಣ್ಯ ವ್ಯಕ್ತಿಗಳಿಗೂ ಅಷ್ಟು ಸಲುಭದಲ್ಲಿ ಒಳಪ್ರವೇಶ ಇರುವುದಿಲ್ಲ. ಹೀಗಿದ್ದಾಗ ವರುಣಾ ಕ್ಷೇತ್ರದ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿಯಾಗುವ ಅವಕಾಶ ಸುಲಭವಾಗಿ ಸಿಗಲಿದೆ. ಇದಕ್ಕಾಗಿ ನೀವು ವಿಳಾಸ ತೋರಿಸಬೇಕಷ್ಟೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ವರುಣ ಕ್ಷೇತ್ರದ ಜನರಿಗೆ ಮುಕ್ತ ಅವಕಾಶ ನೀಡಲಾಗಿದೆ. ಕ್ಷೇತ್ರದ ಜನರು ತಮ್ಮ ವಿಳಾಸ ತೋರಿಸಿ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಬರಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಆಧಾರ್ ಕಾರ್ಡ್ ಅಥವಾ ಐಡಿ ಕಾರ್ಡ್​ ಪರಿಶೀಲಿಸಿ ಪೊಲೀಸರು ಒಳಪ್ರವೇಶ ನೀಡುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಗ್ಯಾರಂಟಿಗಳನ್ನು ಈಡೇರಿಸಲು ಹಣ ಹೇಗೆ ಹೊಂದಿಸುತ್ತೀರಿ ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೋಪ!

ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಶಾಸಕರಾಗಿದ್ದಾರೆ. ಹೀಗಾಗಿ ಅಧಿಕಾರದ ಸಂದರ್ಭದಲ್ಲಿ ಸ್ವಕ್ಷೇತ್ರದ ಮತದಾರರಿಗೆ ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಸೋಲಿಸಲು ವಿಪಕ್ಷಗಳು ಟೊಂಕ ಕಟ್ಟಿ ನಿಂತಿದ್ದಾಗ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ತಮ್ಮ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟರು. ಅದರಂತೆ, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Wed, 31 May 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ