AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Eye Donation: ಪುನೀತ್ ಪ್ರೇರಣೆ -ನೇತ್ರದಾನಕ್ಕೆ ಸಾಲುಗಟ್ಟಿದ ಜನ, ಒಂದೇ ದಿನ ಸಾವಿರಾರು ಜನರಿಂದ ನೋಂದಣಿ

ಪುನೀತ್ ನೇತ್ರದಾನದ ಬಳಿಕ ಪುನೀತ್‌ರಿಂದ ಪ್ರೇರಣೆ ಪಡೆದು ಸಾಕಷ್ಟು ಜನರು ನೇತ್ರದಾನಕ್ಕೆ ಬರುತ್ತಿದ್ದಾರೆ. ಇಂದು ಒಂದೇ ದಿನ 1000ಕ್ಕೂ ಹೆಚ್ಚು ಜನರಿಂದ ನೇತ್ರದಾನಕ್ಕೆ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ನಾರಾಯಣ ನೇತ್ರಾಲಯದ ಮುಖ್ಯಸ್ಥ ಭುಜಂಗ ಶೆಟ್ಟಿ ತಿಳಿಸಿದ್ದಾರೆ.

Puneeth Eye Donation: ಪುನೀತ್ ಪ್ರೇರಣೆ -ನೇತ್ರದಾನಕ್ಕೆ ಸಾಲುಗಟ್ಟಿದ ಜನ, ಒಂದೇ ದಿನ  ಸಾವಿರಾರು ಜನರಿಂದ ನೋಂದಣಿ
ಪುನೀತ್​ ರಾಜ್​ಕುಮಾರ್​
TV9 Web
| Updated By: ಆಯೇಷಾ ಬಾನು|

Updated on:Nov 04, 2021 | 2:26 PM

Share

ಬೆಂಗಳೂರು: ನಟ ಪುನೀತ್ ಅಕ್ಟೋಬರ್ 29ರಂದು ಅಕಾಲಿಕವಾಗಿ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ಬದುಕಿದ್ದಾಗ ರಾಜನಂತೆ ಅನೇಕರಿಗೆ ಸಹಾಯ ಮಾಡಿದ್ದ ಪುನೀತ್ ರಾಜ್ಕುಮಾರ್ ಸಾವಿನ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ಅವರ ಎರಡು ಕಣ್ಣುಗಳನ್ನು ನಾಲ್ಕು ಜನರಿಗೆ ಅಳವಡಿಸಲಾಗಿದೆ. ಸದ್ಯ ಈ ಘಟನೆ ಬಳಿಕ ನೇತ್ರದಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಡಾ.ಭುಜಂಗ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಪುನೀತ್ ನೇತ್ರದಾನದ ಬಳಿಕ ಪುನೀತ್‌ರಿಂದ ಪ್ರೇರಣೆ ಪಡೆದು ಸಾಕಷ್ಟು ಜನರು ನೇತ್ರದಾನಕ್ಕೆ ಬರುತ್ತಿದ್ದಾರೆ. ಇಂದು ಒಂದೇ ದಿನ 1000ಕ್ಕೂ ಹೆಚ್ಚು ಜನರಿಂದ ನೇತ್ರದಾನಕ್ಕೆ ನೋಂದಣಿ ಮಾಡಿಕೊಳ್ಳಲಾಗಿದೆ. ಈ ಹಿಂದೆ ಇಷ್ಟು ಸಂಖ್ಯೆಯಲ್ಲಿ ಜನರು ಮುಂದೆ ಬರುತ್ತಿರಲಿಲ್ಲ. ಇದೀಗಾ ಎರಡು-ಮೂರು ದಿನದಿಂದ ಕಣ್ಣು ದಾನ ಮಾಡುವವರ ಸಂಖ್ಯೆ ಏರಿಕೆಯಾಗಿದೆ ಎಂದು ನಾರಾಯಣ ನೇತ್ರಾಲಯದ ಮುಖ್ಯಸ್ಥ ಭುಜಂಗ ಶೆಟ್ಟಿ ತಿಳಿಸಿದ್ದಾರೆ.

ಈ ಹಿಂದೆ ಡಾ. ರಾಜ್ಕುಮಾರ್ ಕೂಡ ಕಣ್ಣುಗಳನ್ನು ದಾನ ಮಾಡಿದ್ದರು. ಅವರ ಹಾದಿಯಲ್ಲಿಯೇ ಪುನೀತ್ ಕೂಡ ನೇತ್ರದಾನ ಮಾಡಿದ್ದಾರೆ. ನಾಲ್ಕು ಜನರ ಬಾಳಿಗೆ ಬೆಳಕು ನೀಡಿದ್ದಾರೆ. ‘ದಾನ ಮಾಡಲಾದ 2 ಕಣ್ಣುಗಳು ತುಂಬ ಆರೋಗ್ಯವಾಗಿದ್ದರೆ ಕಾರ್ನಿಯಾವನ್ನು ನಾವು ನಾಲ್ಕು ಭಾಗ ಮಾಡಬಹುದು. ಕಾರ್ನಿಯಾವನ್ನು ಒಂದು ಗ್ಲಾಸ್ ಎಂದು ಊಹಿಸಿದರೆ ಅದರಲ್ಲಿ ಮುಂಭಾಗ ಮತ್ತು ಹಿಂಭಾಗ ಇರುತ್ತದೆ. ಮುಂಭಾಗದ ಕಾರ್ನಿಯಾ ತೊಂದರೆ ಇರುವವರಿಗೆ ದಾನ ಪಡೆದ ಕಣ್ಣಿನ ಮುಂಭಾಗವನ್ನು ಅಳವಡಿಸಲಾಗುತ್ತೆ. ಹಿಂಭಾಗದ ತೊಂದರೆ ಇರುವವರಿಗೆ ಹಿಂಭಾಗದ ಕಾರ್ನಿಯಾವನ್ನು ಅಳವಡಿಸಲಾಗುತ್ತೆ. ಈ ರೀತಿ ನಾಲ್ವರಿಗೆ ಪುನೀತ್ ರಾಜ್ಕುಮಾರ್ ಕಣ್ಣುಗಳನ್ನು ಬಳಸಲಾಗಿದೆ. ಸದ್ಯ ಪುನೀತ್ರಿಂದ ಪ್ರೇರಣೆ ಪಡೆದು ಅಭಿಮಾನಿಗಳು ಕೂಡ ನೇತ್ರದಾನ ನೊಂದಣಿ ಮಾಡಿಕೊಳ್ಳುತ್ತಿದ್ದಾರೆ.

ಪಟಾಕಿ ಹೊಡೆಯುವಾಗ ಬಾಲಕನಿಗೆ ಗಾಯ ಬೆಂಗಳೂರಿನ ಬಸವನಗುಡಿಯಲ್ಲಿ ಪಟಾಕಿ ಹೊಡೆಯುವಾಗ 9 ವರ್ಷದ ಬಾಲಕನ ಕಣ್ಣಿಗೆ ಗಾಯಗಳಾದ ಘಟನೆ ನಡೆದಿದೆ. ಗಾಯಾಳು ಬಾಲಕನಿಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಣ್ಣಿನ ಗುಡ್ಡೆಗೆ ಹಾನಿಯಾಗಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಜೊತೆಗೆ ಮುಖದ ಚರ್ಮ ಸುಟ್ಟು, ರೆಪ್ಪೆಗೂದಲು ಮುಚ್ಚಳದಲ್ಲಿ ಊತ ಕಾಣಿಸಿಕೊಂಡಿದ್ದು ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ:  ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

Published On - 2:02 pm, Thu, 4 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ