AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ ಸುಲಿಗೆ, ಆರೋಪಿಗಳು ಅರೆಸ್ಟ್

ಮಹಾನಗರದಲ್ಲಿ ಇತ್ತೀಚೆಗೆ ಕೊಲೆ, ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಪೊಲೀಸರು ಈ ಕುರಿತು ಎಷ್ಟೇ ಕಠಿಣ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಅದರಂತೆ ಇದೀಗ ರಾತ್ರಿ ವೇಳೆ ಒಂಟಿಯಾಗಿ ಓಡಾಡ್ತಿದ್ದವರನ್ನ ಬೆದರಿಸಿ ಸುಲಿಗೆ, ಜೊತೆಗೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದ ಆರೊಪಿಗಳನ್ನ ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ ಸುಲಿಗೆ, ಆರೋಪಿಗಳು ಅರೆಸ್ಟ್
ಬೆಂಗಳೂರಿನಲ್ಲಿ ಕಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 20, 2023 | 7:20 AM

Share

ಬೆಂಗಳೂರು: ಮಹಾನಗರದಲ್ಲಿ ಇತ್ತೀಚೆಗೆ ಕೊಲೆ, ಕಳ್ಳತನ(Theft) ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಪೊಲೀಸರು ಈ ಕುರಿತು ಎಷ್ಟೇ ಕಠಿಣ ಕ್ರಮ ಕೈಗೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹೌದು ಜೊತೆಗೆ ಪೊಲೀಸರ ಮೇಲೆ ಭಯವೂ ಇದ್ದಂತೆ ಕಾಣಿಸುತ್ತಿಲ್ಲ. ಕೆಲವು ದಿನಗಳ ಹಿಂದೆ ಸಿಲಿಕಾನ್​ ಸಿಟಿಯಲ್ಲಿ ಹಾಡಹಗಲೇ ಇಬ್ಬರನ್ನ ಕೊಲೆ ಮಾಡಿ, ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದ. ಅದಷ್ಟೇ ಅಲ್ಲದೇ, ಪೊಲೀಸರ ಹೆಸರು ಹೇಳಿಕೊಂಡು ಬಂದು ಯುವಕರಿದ್ದ ರೂಂಗೆ ನುಗ್ಗಿ ಹಣ, ಇತರೆ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದರು. ಇದೀಗ ರಾತ್ರಿ ವೇಳೆ ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್​ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

7 ಲಕ್ಷ ಮೌಲ್ಯದ ಬೈಕ್​ಗಳು ಸೇರಿ ಇತರೆ ವಸ್ತುಗಳು ವಶ

ಇನ್ನು ಆರೋಪಿಗಳಾದ ವಿನೀತ್ ಕುಮಾರ್, ಪ್ರಕಾಶ್ ಅಲಿಯಾಸ್​ ಪ್ರಾನ್ಸಿಸ್ ಎಂಬುವವರನ್ನ ಬಾಣಸವಾಡಿ, ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಬರೊಬ್ಬರಿ 7 ಲಕ್ಷ ಮೌಲ್ಯದ ಬೈಕ್​ಗಳು, ಇತರೆ ವಸ್ತುಗಳು ವಶಕ್ಕೆ ಪಡೆಯಲಾಗಿದ್ದು, ರಾತ್ರಿ ವೇಳೆ ಒಂಟಿಯಾಗಿ ಓಡಾಡುತ್ತಿದ್ದವರನ್ನು ಬೆದರಿಸಿ, ಅವರಿಗೆ ಮಾರಕಾಸ್ತ್ರ ತೋರಿಸಿ ಹಣ ಸುಲಿಗೆ, ಜೊತೆಗೆ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ಬೈಕ್​ ಕದ್ದು ಮಾರುತ್ತಿದ್ದರು​. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:08 am, Thu, 20 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ