AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ‌ ಸಾಕು ನಾಯಿ ದಾಳಿ: ಚಿಕಿತ್ಸಾ ವೆಚ್ಚ ಭರಿಸದೇ ನಿರ್ಲಕ್ಷ ಆರೋಪ, ದೂರು ದಾಖಲು

ಸಾಕು ನಾಯಿಯೊಂದು ಮಹಿಳೆ ಮೇಲೆ ದಾಳಿ ಮಾಡಿರುವಂತಹ ಘಟನೆ ನಗರದಲ್ಲಿ ಜೂನ್‌ 13 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಹಣ ಭರಿಸುವಂತೆ ರಾಜಣ್ಣ ಮನೆಯವರನ್ನು ಸಂಪರ್ಕ ಮಾಡಿ ಪರಿಪರಿಯಾಗಿ ಬೇಡಿಕೊಂಡರು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಾಗಾಗಿ ಮಹಿಳೆ ದೂರು ನೀಡಿದ್ದಾರೆ.

ಮಹಿಳೆ ಮೇಲೆ‌ ಸಾಕು ನಾಯಿ ದಾಳಿ: ಚಿಕಿತ್ಸಾ ವೆಚ್ಚ ಭರಿಸದೇ ನಿರ್ಲಕ್ಷ ಆರೋಪ, ದೂರು ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 14, 2023 | 8:31 PM

Share

ಬೆಂಗಳೂರು: ಬೆಳಿಗ್ಗೆ ವಾಕಿಂಗ್​ ಹೋದ ಸಂದರ್ಭದಲ್ಲಿ ಸಾಕು ನಾಯಿ (Pet dog) ಮಹಿಳೆ ಮೇಲೆ ದಾಳಿ ಮಾಡಿರುವಂತಹ ಘಟನೆ ನಗರದಲ್ಲಿ ಜೂನ್‌ 13 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಕೊತ್ತನೂರು ನಿವಾಸಿ ಪುಷ್ಪಾ ನಾಯಿ ದಾಳಿಗೆ ಒಳಗಾದವರು. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಜೂನ್‌ 13ರ ಬೆಳಿಗ್ಗೆ ವಾಕಿಂಗ್‌ಗೆ ಹೋದ ವೇಳೆ ಹೆಚ್‌ಎಂ‌ಟಿ ರಾಜಣ್ಣ ಎಂಬುವವರ ಸಾಕು ನಾಯಿ ಏಕಾಏಕಿ ದಾಳಿ ಮಾಡಿದೆ. ನಾಯಿ ಕಚ್ಚಿದ ಪರಿಣಾಮ ಪುಷ್ಪಾರ ಬಲಗಾಲು ಸೇರಿದಂತೆ ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಪುಷ್ಪಾರನ್ನ ರಾಜಣ್ಣ ಮಕ್ಕಳಾದ ಗಾಯತ್ರಿ ಮತ್ತು ಬಾಬು ವಿಕ್ಟೋರಿಯಾ ಆಸ್ಪತ್ರೆಯಲ್ಲಿ 3 ದಿನ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂ ಏರಿಕೆ: ಕಳೆದ 11 ದಿನಗಳಲ್ಲಿ 178 ಪ್ರಕರಣಗಳು ಪತ್ತೆ

ಆಸ್ಪತ್ರೆಗೆ ದಾಖಲಾದಾಗ 3 ತಿಂಗಳು ವಿಶ್ರಾಂತಿ ಪಡೆಯುವಂತೆ ಪುಷ್ಪಾಗೆ ಡಾಕ್ಟರ್ಸ್ ಸಲಹೆ ನೀಡಿದ್ದಾರೆ. ಈ ವೇಳೆ ಕೂಲಿ ಕೆಲಸ ಮಾಡಿ ಜೀವನ ಮಾಡುತ್ತಿರುವ ನನಗೆ ಚಿಕಿತ್ಸೆ ಹಾಗೂ ಜೀವನ ನಿರ್ವಹಣೆಗೆ ತಿಂಗಳಿಗೆ 25 ಸಾವಿರ ರೂಪಾಯಿಯಂತೆ 3 ತಿಂಗಳು ಕೊಡುವಂತೆ ಮನವಿ ಮಾಡಿದ್ದಾರೆ. ಪುಷ್ಪಾರ ಮನವಿಯನ್ನು ರಾಜಣ್ಣನ ಮಕ್ಕಳು ಒಪ್ಪಿಕೊಂಡಿದ್ದಾರೆ. ಆದರೆ ಹಣ ಕೇಳಲು ಫೋನ್ ಕರೆ ಮಾಡಿದಾಗ ರಾಜಣ್ಣ ಕುಟುಂಬಸ್ಥರು ಉಢಾಪೆ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಗಂಭೀರ ಗಾಯವಾಗಿದ್ದರಿಂದ ಕೀವು ಕಟ್ಟಿ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಪುಷ್ಪಾ ತೆರಳಿದ್ದಾರೆ. ಈ ವೇಳೆ ಪ್ಲಾಸ್ಟಿಕ್ ಸರ್ಜರಿ ಮಾಡಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಚಿಕಿತ್ಸೆಗೆ ಹಣ ಭರಿಸುವ ಶಕ್ತಿ ಇಲ್ಲದೇ ಹಣ ಭರಿಸುವಂತೆ ರಾಜಣ್ಣ ಮನೆಯವರನ್ನು ಸಂಪರ್ಕ ಮಾಡಿ ಪರಿಪರಿಯಾಗಿ ಬೇಡಿಕೊಂಡರು ನಿರ್ಲಕ್ಷಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೇಬಿಸ್ ರೋಗ ತಡೆಗಟ್ಟಲು ಬಿಬಿಎಂಪಿ ವ್ಯಾಪ್ತಿಯ ಬೀದಿ ನಾಯಿಗಳ ಸಮೀಕ್ಷೆ

ನಾಯಿ ದಾಳಿಗೆ ಕಾರಣರಾದ ರಾಜಣ್ಣ ಕುಟುಂಬಸ್ಥರು ಚಿಕಿತ್ಸಾ ವೆಚ್ಚ ಭರಿಸಿಸುವುದಾಗಿ ಹೇಳಿ ಠಾಣೆಗೆ ದೂರು ಕೊಡದಂತೆ ಮನವಿ ಮಾಡಿದ್ದರು. ಇದೀಗ ಚಿಕಿತ್ಸಾ ವೆಚ್ಚ ಭರಿಸದೇ ಉಢಾಫೆ ಉತ್ತರ ಕೊಡುತ್ತಿರುವ ರಾಜಣ್ಣ ಕುಟುಂಬಸ್ಥರಾದ ಬಾಬು, ಗಾಯತ್ರಿ ಮೇಲೆ ಕ್ರಮ ಜರಗಿಸುವಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪುಷ್ಪಾರಿಂದ ದೂರು ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:29 pm, Fri, 14 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ